Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಫೆ.24 ರಂದು ಕನಕದುರ್ಗಮ್ಮ ಸಿಡಿಬಂಡಿ ರಥೋತ್ಸವ: ವಿವಿಧೆಡೆ ಪಾರ್ಕಿಂಗ್ ವ್ಯವಸ್ಥೆ


ಬಳ್ಳಾರಿ,ಫೆ.21

ಇದೇ ಫೆ.24 ರಂದು ಬಳ್ಳಾರಿ ನಗರದ ಶ್ರೀ ಕನಕ ದುರ್ಗಮ್ಮ ಸಿಡಿಬಂಡಿ ರಥೋತ್ಸವ ಜರುಗಲಿದ್ದು, ರಥೋತ್ಸವ ವೀಕ್ಷಿಸಲು ಆಗಮಿಸುವ ಸಾರ್ವಜನಿಕರಿಗೆ ನಗರದ ವಿವಿಧೆಡೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಅವರು ತಿಳಿಸಿದ್ದಾರೆ.

ಮೋಕ ಭಾಗದಿಂದ ರಥೋತ್ಸವಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳಿಗೆ ಗಾಂಧಿನಗರ 1ನೇ ಕ್ರಾಸ್ ಹತ್ತಿರವಿರುವ ಅಲ್ಲಂ ಸುಮಂಗಳಮ್ಮ ಕಾಲೇಜು ಆವರಣದಲ್ಲಿ, ಕಪ್ಪಗಲ್ ಕಡೆಯಿಂದ ರಥೋತ್ಸವಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳಿಗೆ ಕಪ್ಪಗಲ್ ರಸ್ತೆಯಲ್ಲಿರುವ ಕಿತ್ತೂರುರಾಣಿ ಚೆನ್ನಮ್ಮ ಶಾಲೆಯ ಆವರಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಸಿರುಗುಪ್ಪ ಹಾಗೂ ಹೊಸಪೇಟೆ ಭಾಗದಿಂದ ರಥೋತ್ಸವಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳಿಗೆ ಬಸವ ಭವನ ಹಾಗೂ ಜಿಲ್ಲಾ ಕೇಂದ್ರ ಕಾರಾಗೃಹದ ಮುಂದಿನ ಖಾಲಿ ಜಾಗದಲ್ಲಿ, ಬೆಂಗಳೂರು ರಸ್ತೆ ಹಾಗೂ ಅನಂತಪುರ ಕಡೆಯಿಂದ ರಥೋತ್ಸವಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳಿಗೆ ಕಮ್ಮಾ ಭವನದ ಮುಂದಿನ ಖಾಲಿ ಜಾಗ ಹಾಗೂ ಮುನಿಸಿಪಲ್ ಕಾಲೇಜು ಅವರಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಬಳ್ಳಾರಿ ನಗರದ ಯು.ಬಿ ಸರ್ಕಲ್, ಜಿಲ್ಲಾ ಕೇಂದ್ರ ಕಾರಾಗೃಹದ ಗೇಟ್, ಜಿಮ್‌ಖಾನ ಕ್ರಾಸ್, ತಾಳೂರು ರಸ್ತೆಯ ಬಾಲಾಜಿ ನರ್ಸಿಂಗ್ ಹೋಂ ಕ್ರಾಸ್, ಕಪ್ಪಗಲ್ ರಸ್ತೆಯ ಸಂಜೀವಿನಿ ಅಸ್ಪತ್ರೆಯ ಕ್ರಾಸ್ ಹಾಗೂ ಮೋಕಾ ರಸ್ತೆಯ ಗಾಂಧಿನಗರ 1ನೇ ಕ್ರಾಸ್ ಗಳ ಮೂಲಕ ದುರ್ಗಮ್ಮ ಗುಡಿ ಸರ್ಕಲ್‌ಗೆ ಬರುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ