Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡ ಪುಸ್ತಕ ಪ್ರಾಧಿಕಾರ; ಶೇ.50%ರ ರಿಯಾಯಿತಿ ದರಗಳಲ್ಲಿ ಪುಸ್ತಕಗಳ ಮಾರಾಟ


ರಾಯಚೂರು,ಜು.31- ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಸ್ವಾತಂತ್ರö್ಯ ದಿನಾಚರಣೆಯ ಅಂಗವಾಗಿ 2024ರ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುತ್ತಿದ್ದು, ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳುವಂತೆ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳಾದ ಕೆ.ಬಿ.ಕಿರಣ್ ಸಿಂಗ್ ಅವರು ತಿಳಿಸಿದ್ದಾರೆ.



ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ.



ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ ಲೈನ್ https://kpp.karnataka.gov.in (ಆನ್ಲೈನ್ ಪುಸ್ತಕ ಖರೀದಿಗೆ ಇಲ್ಲಿ ವೀಕ್ಷಿಸಿ ವಿಭಾಗ) ನಲ್ಲಿ ಕೂಡ ಈ ಶೇ.50% ರಿಯಾಯಿತಿ ಲಭ್ಯವಿದೆ.



ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬoಧಿಸಿದoತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 704 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದಾಗಿದೆ ಎಂದು ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ