Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲೆಯಲ್ಲಿ ಆಗಸ್ಟ್ 5 ರಿಂದ 8 ರವರೆಗೆ ಕನ್ನಡಜ್ಯೋತಿ ರಥಯಾತ್ರೆ"










ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸರ್ಕಾರವು ಕರ್ನಾಟಕ ಸಂಭ್ರಮ 50 ರಡಿ 'ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ' ಅಭಿಯಾನದ ಅಂಗವಾಗಿ ಕನ್ನಡಜ್ಯೋತಿ ರಥಯಾತ್ರೆಯನ್ನು ರಾಜ್ಯಾದ್ಯಂತ ಸಂಚರಿಸಲು ಅನುಕೂಲವಾಗುವಂತೆ ಮುಖ್ಯಮಂತ್ರಿಯವರು 2023 ರ ನವೆಂಬರ್ 02 ರಂದು ವಿಜಯನಗರ ಜಿಲ್ಲೆಯ ಹಂಪಿಯಿಂದ ಚಾಲನೆ ನೀಡಿದ್ದಾರೆ.



ಈ ರಥಯಾತ್ರೆಯು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಂಚರಿಸುತ್ತಾ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಆಗಸ್ಟ್ 05(ಸೋಮವಾರ) ರಂದು ಬೆಳಿಗ್ಗೆ 09:00 ಗಂಟೆಗೆ ಕೋಲಾರದ ಮಾಲೂರಿನಿಂದ ಹೊಸಕೋಟೆಗೆ ರಥಯಾತ್ರೆ ಆಗಮಿಸಲಿದೆ, ಆಗಸ್ಟ್ 06(ಮಂಗಳವಾರ) ರಂದು ಬೆಳಿಗ್ಗೆ 09:00 ಗಂಟೆಗೆ ಹೊಸಕೋಟೆಯಿಂದ ದೇವನಹಳ್ಳಿಗೆ, ಆಗಸ್ಟ್ 07(ಬುಧವಾರ) ರಂದು ಬೆಳಿಗ್ಗೆ 09:00 ಗಂಟೆಗೆ ದೇವನಹಳ್ಳಿಯಿಂದ ದೊಡ್ಡಬಳ್ಳಾಪುರಕ್ಕೆ, ಆಗಸ್ಟ್ 08(ಗುರುವಾರ) ರಂದು ಬೆಳಿಗ್ಗೆ 09:00 ಗಂಟೆಗೆ ದೊಡ್ಡಬಳ್ಳಾಪುರದಿಂದ ನೆಲಮಂಗಲಕ್ಕೆ ಸಂಚರಿಸಲಿದೆ.

ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ಕನ್ನಡ ರಥಯಾತ್ರೆ ಸಂಚರಿಸಲಿದ್ದು ರಥಯಾತ್ರೆಯು ಜಿಲ್ಲೆಗೆ ಆಗಮಿಸುವ ದಿನದಿಂದ, ಜಿಲ್ಲೆಯಿಂದ ಬೀಳ್ಕೊಡುವ ದಿನಾಂಕದ ಸಮಯಗಳಲ್ಲಿ ಆಯಾ ಗ್ರಾಮ/ಗ್ರಾಮ ಪಂಚಾಯತಿ/ ತಾಲ್ಲೂಕು ಕೇಂದ್ರಗಳಲ್ಲಿ ರಥಯಾತ್ರೆಯನ್ನು ಗೌರವಯುತವಾಗಿ ಸ್ವಾಗತಿಸಲಾಗುತ್ತದೆ.

ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಆಯೋಜಿಸಲಾಗುವ ಮೆರವಣಿಗೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಕನ್ನಡಪರ ಸಂಘಟನೆಗಳ ಎಲ್ಲಾ ಅಧ್ಯಕ್ಷರುಗಳು ಎಲ್ಲಾ ಪದಾಧಿಕಾರಿಗಳು, ಸಾಹಿತಿಗಳು, ಕಲಾವಿದರು, ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಕನ್ನಡಾಭಿಮಾನಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಕಾರ್ಯಕ್ರಮ ಯಶಸ್ವಿಗೊಳಿಸಿ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





























Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ