Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಬಜೆಟ್ 2026-27 : ಉನ್ನತ ಶಿಕ್ಷಣ ಕ್ಷೇತ್ರಕ್ಕೆ ವಿಶೇಷ ಒತ್ತು

ಬೆಂಗಳೂರು: “ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ” ಎಂಬ ಘೋಷಣೆಯೊಂದಿಗೆ ಮಂಡನೆಯಾದ ಕರ್ನಾಟಕ ಬಜೆಟ್ 2026-27 ನಲ್ಲಿ ಉನ್ನತ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತು ನೀಡಿದೆ.
ರೂ.2,500 ಕೋಟಿ ವೆಚ್ಚದಲ್ಲಿ ‘ಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆ’ ಅನುಷ್ಠಾನಗೊಳ್ಳಲಿದ್ದು, ಇದರಡಿ ರಾಜ್ಯದ 40 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಹಾಗೂ 11 ಪಾಲಿಟೆಕ್ನಿಕ್ ಸಂಸ್ಥೆಗಳನ್ನು ಮಾದರಿ ಶಿಕ್ಷಣ ಸಂಸ್ಥೆಗಳಾಗಿ ಅಭಿವೃದ್ಧಿಪಡಿಸಲಾಗುತ್ತದೆ. ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ ಹಾಗೂ ಸ್ಟಾರ್ಟ್‌ಅಪ್ ಸಂಸ್ಕೃತಿಗೆ ಉತ್ತೇಜನ ನೀಡಲು 9 ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸುವ ಯೋಜನೆಯೂ ಇದೆ.
ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ 1,000 ಬೋಧಕ ಹುದ್ದೆಗಳನ್ನು ತರ್ಕಬದ್ಧಗೊಳಿಸಿ ಹಂತ ಹಂತವಾಗಿ ಭರ್ತಿ ಮಾಡುವುದಾಗಿ ಸರ್ಕಾರ ಘೋಷಿಸಿದೆ.
ಇದೇ ವೇಳೆ ರಾಜ್ಯದ 25 ಸರ್ಕಾರಿ ಪದವಿ ಕಾಲೇಜುಗಳು, ಮೂರು ಪಾಲಿಟೆಕ್ನಿಕ್ ಹಾಗೂ ಮೂರು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಒಟ್ಟು ರೂ.31 ಕೋಟಿ ವೆಚ್ಚದಲ್ಲಿ ವಿದ್ಯಾರ್ಥಿನಿಯರಿಗೆ ಅಗತ್ಯವಾದ ಮೂಲ ಸೌಲಭ್ಯಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ.
ವಿಜಯಪುರ ಜಿಲ್ಲೆಯ ಚಡಚಣ, ಬೆಳಗಾವಿ ಗ್ರಾಮಾಂತರ, ಮೈಸೂರು ನಗರದ ನರಸಿಂಹರಾಜ ಕ್ಷೇತ್ರ ಹಾಗೂ ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ಹೊಸ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ