Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದಿವಂಗತ IAS ಅಧಿಕಾರಿ ಮಹಾಂತೇಶ್ ಬೀಳಗಿ ಪುತ್ರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ಉದ್ಯೋಗ

ಕುಮಾರಿ ಚೈತನ್ಯಾ ಎಂ. ಬೀಳಗಿ ಅವರಿಗೆ ಕರ್ನಾಟಕ ಸರ್ಕಾರ ಸಚಿವಾಲಯದಲ್ಲಿ ಸಹಾಯಕ ಹುದ್ದೆ

ಬೆಂಗಳೂರು:
ರಸ್ತೆ ಅಪಘಾತದಲ್ಲಿ ನಿಧನರಾದ ದಿವಂಗತ ಭಾರತೀಯ ಆಡಳಿತ ಸೇವೆ (IAS) ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಪುತ್ರಿ ಕುಮಾರಿ ಚೈತನ್ಯಾ ಎಂ. ಬೀಳಗಿ ಅವರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ನೀಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸೇವೆಯಲ್ಲಿದ್ದ ಸಂದರ್ಭದಲ್ಲಿ ದಿನಾಂಕ 25-11-2025 ರಂದು ದುರಂತ ರಸ್ತೆ ಅಪಘಾತದಲ್ಲಿ ಮಹಾಂತೇಶ್ ಬೀಳಗಿ ಅವರು ಮೃತಪಟ್ಟಿದ್ದರು. ಅವರ ಕುಟುಂಬದ ಸಂಕಷ್ಟವನ್ನು ಮನಗಂಡ ರಾಜ್ಯ ಸರ್ಕಾರ, ಕರ್ನಾಟಕ ನಾಗರೀಕ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು, 1996ರ ನಿಯಮ 6(1) ರನ್ವಯ ಚೈತನ್ಯಾ ಬೀಳಗಿ ಅವರಿಗೆ ಕರ್ನಾಟಕ ಸರ್ಕಾರ ಸಚಿವಾಲಯದ ಸಹಾಯಕ ಹುದ್ದೆಗೆ ನೇಮಕಾತಿ ನೀಡಿದೆ.


ಆದೇಶದ ಪ್ರಕಾರ, ನೇಮಕಾತಿ ಎರಡು ವರ್ಷಗಳ ಪರೀಕ್ಷಾರ್ಥಾವಧಿಯೊಂದಿಗೆ ಜಾರಿಯಾಗಿದ್ದು, ಸಹಾಯಕ ಹುದ್ದೆಗೆ ನಿಗದಿಪಡಿಸಿರುವ ವೇತನ ಶ್ರೇಣಿ ರೂ. 49,050 ರಿಂದ ರೂ. 92,500 ಆಗಿರಲಿದೆ.
ನಿಯಮಾವಳಿಗಳಂತೆ, ನೇಮಕಾತಿ ಆದೇಶ ಹೊರಡಿಸಿದ ದಿನಾಂಕದಿಂದ 15 ದಿನಗಳ ಒಳಗಾಗಿ ಅಭ್ಯರ್ಥಿಯು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಆಡಳಿತ-1), ಬೆಂಗಳೂರು ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ತಿಳಿಸಲಾಗಿದೆ. ಜೊತೆಗೆ, ಕರ್ನಾಟಕ ನಾಗರೀಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಾವಳಿ 1977ರಂತೆ ಅಗತ್ಯ ನಡತೆ ಪ್ರಮಾಣಪತ್ರಗಳನ್ನು ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.
ದಿವಂಗತ ಅಧಿಕಾರಿ ಕುಟುಂಬಕ್ಕೆ ರಾಜ್ಯ ಸರ್ಕಾರ ನೀಡಿದ ಈ ಮಾನವೀಯ ಸ್ಪಂದನೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ