Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಧಾರ್ಮಿಕ ಶ್ರದ್ಧೆ,ಭಕ್ತಿ ಹೆಚ್ಚಿಸಲು ಕ್ಷೇತ್ರ ಧರ್ಮಸ್ಥಳದ ಕೊಡುಗೆ ಅನನ್ಯವಾದುದು ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕ ರೋಹಿತಾಕ್ಷ

ಸಿರುಗುಪ್ಪ ತಾಲೂಕಿನ ಸಿರಗೇರಿ ಗ್ರಾಮದ ಶ್ರೀ ಬನಶಂಕರಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದದಿಂದ ಮಂಜುರಾತಿಗೊಂಡ 150000₹( ಒಂದು ಲಕ್ಷ ಐವತ್ತು ಸಾವಿರ )ಮೊತ್ತದ ಡಿ ಡಿ ಯನ್ನು ಶ್ರೀ ಬನಶಂಕರಿ ದೇವಸ್ಥಾನದ ಸಮಿತಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕರಾದ ರೋಹಿತಾಕ್ಷ ವಿತರಿಸಿದರು.




ನಂತರ ಮಾತನಾಡಿ ಧಾರ್ಮಿಕ ಶ್ರದ್ಧೆ ಮತ್ತು ಭಕ್ತಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಕೊಡುಗೆ ಅನನ್ಯವಾಗಿದ್ದು ಕರ್ನಾಟಕ ರಾಜ್ಯಾದ್ಯಂತ ಧಾರ್ಮಿಕ ಶ್ರದ್ಧೆ ಮತ್ತು ಭಕ್ತಿ ಭಾವ ಆಧ್ಯಾತ್ಮಿಕತೆ ಹೆಚ್ಚಿಸಲು ಹಳೆ ದೇವಸ್ಥಾನ ಜೀರ್ಣೋದ್ಧಾರಕ್ಕೆ ಸಹಾಯ ಹಸ್ತ ಚಾಚುತಿದ್ದು ಈ ವರೆಗೆ ಸಿರಗುಪ್ಪ ತಾಲೂಕಿನ 39 ದೇವಸ್ಥಾನ ಗಳಿಗೆ 54 ಲಕ್ಷ ಮೊತ್ತದ ಸಹಕಾರ ನೀಡಲಾಗಿದೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅತ್ಯಂತ ಸ್ವಚ್ಛ ಪರಿಸರ ಕಾಪಾಡಿದ ಹೆಗ್ಗಳಿಕೆಯು ನಮ್ಮ ಕರ್ನಾಟಕದ ಉಳಿದ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲಿ ಅನುಷ್ಠಾನವಾಗುವ ಯೋಜನೆ ರೂಪಿಸಿಕೊಂಡು ತಾಲೂಕಿನಲ್ಲಿ 152 ದೇವಸ್ಥಾನಗಳಲ್ಲಿ ಸ್ವಚ್ಛತಾ ಕಾರ್ಯಕ್ರಮದೊಟ್ಟಿಗೆ ಕಸ ವಿಲೆವರಿಗೆ ಪರಿಕರ ವಿತರಿಸಲಗಿದೆ ಧರ್ಮಸ್ಥಳದ ಮೂಲಕ ಭಜನಾ ಮಂಡಳಿಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಭಜನಾ ಕಮ್ಮಟ ಹಾಗೂ ಗ್ರಾಮಗಳಲ್ಲಿರುವ ಭಜನಾ ಮಂಡಳಿಗಳಿಗೆ ಕಟ್ಟಡ ರಚನೆ ಹಾಗೂ ತರಬೇತಿಗೆ ಸಹಕಾರ ನಿಡಲಾಗುತ್ತಿದೆ ಪ್ರತಿ ವರ್ಷ ಕ್ಷೇತ್ರ ಧರ್ಮಸ್ಥಳದಲ್ಲಿ ಸರ್ವಧರ್ಮ ಸಮ್ಮೇಳನ ಹಾಗೂ ಸರ್ವಧರ್ಮ ಸಾಮೂಹಿಕ ವಿವಾಹಗಳು ನಡೆದುಕೊಂಡು ಬರುತ್ತಿವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಿರಿಗಿರಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ಲಕ್ಷ್ಮಿ ದ್ಯಾವಣ್ಣ ಒಳಗುಂದಿ,ಉಪಾಧ್ಯಕ್ಷರಾದ ಶ್ರೀಮತಿ ರಾಜಮ್ಮ ಹುಲಗಪ್ಪ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಭೀಮಲಿಂಗಪ್ಪ ಗಣ್ಯರಾದ ಪುನೀತ್ ಮತ್ತು ಶಿವರಾಂ ತಾಲೂಕ ಯೋಜನಾಧಿಕಾರಿ ಸುಧೀರ್ ಹಂಗಳೂರು ಮೇಲ್ವಿಚಾರಕರಾದ ಹನುಮಂತಪ್ಪ ಸೇವಾ ಪ್ರತಿನಿಧಿ ಪಾರ್ವತಿ ಶ್ರೀ ಬನಶಂಕರಿ ದೇವಸ್ಥಾನ ಸಮಿತಿಯ ಸದಸ್ಯರು ಗ್ರಾಮ ಗಣ್ಯರು ಪಾಲ್ಗೊಂಡಿದ್ದರು

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ