Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕುರುಗೋಡು ಪುರಸಭೆ: ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ,ಜೂ.03
ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ 2026-27ನೇ ಸಾಲಿನ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ಬಡ ಜನರು ಮತ್ತು ವಿಶೇಷಚೇತನರಿಗೆ ವಿವಿಧ ಸೌಲಭ್ಯಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕುರುಗೋಡು ಪುರಸಭೆಯ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.
*ಸೌಲಭ್ಯಗಳು:*
ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ರಾಜ್ಯ ಅಥವಾ ರಾಷ್ಟç ಮಟ್ಟದ ಕ್ರೀಡೆ, ಕಲೆ, ಸಾಂಸ್ಕೃತಿಕ ಹಾಗೂ ಇತರ ವ್ಯಾಸಂಗೇತರ ಸ್ಪರ್ಧೆಗಳಲ್ಲಿ ಭಾಗವಹಿಸಿದ ಅಥವಾ ಜಯಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲಾಗುವುದು.
ವಿಕಲಚೇತನರಿಗೆ ವಾಟರ್ ಬೆಡ್ ವಿತರಣೆ: ಕುರುಗೋಡು ಪಟ್ಟಣದ ವಿಕಲಚೇತನರಿಗೆ ವಾಟರ್ ಬೆಡ್‌ಗಳನ್ನು ಪೂರೈಸಲಾಗುವುದು.
*ಅಗತ್ಯವಿರುವ ದಾಖಲಾತಿಗಳು:*
ಅರ್ಜಿದಾರರು ಕುರುಗೋಡು ಪುರಸಭೆ ವ್ಯಾಪ್ತಿಯ ನಿವಾಸಿಯಾಗಿರಬೇಕು. ಪಡಿತರ ಚೀಟಿ, ಆಧಾರ್ ಕಾರ್ಡ್ ಅಥವಾ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
ವಿದ್ಯಾರ್ಥಿಗಳ ಪಾಸ್‌ಪೋರ್ಟ್ ಸೈಜ್ ಭಾವಚಿತ್ರ, ಹಿಂದಿನ ತರಗತಿಯ ಅಂಕಪಟ್ಟಿ ಹಾಗೂ ಪ್ರಮಾಣ ಪತ್ರಗಳು, ಅರ್ಜಿದಾರರ ಬ್ಯಾಂಕ್ ಪಾಸ್ ಬುಕ್ ಪ್ರತಿ, ವಿಕಲಚೇತನರು ಶೇ.75 ಕ್ಕಿಂತ ಹೆಚ್ಚು ವಿಕಲಚೇತನರಾಗಿದ್ದು, ವೈದ್ಯಾಧಿಕಾರಿಗಳು (ತಾಲೂಕು/ಜಿಲ್ಲಾ ಆಸ್ಪತ್ರೆ) ನೀಡಿದ ಅಂಗವೈಕಲ್ಯ ಪ್ರಮಾಣ ಪತ್ರದ ಪ್ರತಿ.
ಅರ್ಜಿ ಸಲ್ಲಿಸಲು ಜೂ.09 ರಂದು ಸಂಜೆ 4:30 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿದೆ. ನಿಗದಿಪಡಿಸಿದ ದಿನಾಂಕದ ನಂತರ ಬರುವ ಅರ್ಜಿಗಳನ್ನು ಯಾವುದೇ ಮುನ್ಸೂಚನೆ ನೀಡದೆ ತಿರಸ್ಕರಿಸಲಾಗುವುದು.
ಹೆಚ್ಚಿನ ವಿವರಗಳಿಗಾಗಿ ಸಾರ್ವಜನಿಕರು ಪುರಸಭೆ ಕಾರ್ಯಾಲಯದ ಸೂಚನಾ ಫಲಕವನ್ನು ನೋಡಬಹುದು ಅಥವಾ ಸಂಬAಧಿಸಿದ ಶಾಖೆಯ ಸಿಬ್ಬಂದಿಯಿAದ ಮಾಹಿತಿ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ಸಂಜೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ; ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರಉತ್ತಮ ಅಭ್ಯಾಸ-ಹವ್ಯಾಸಗಳನ್ನು ಯುವಜನತೆ ಬೆಳಿಸಿಕೊಳ್ಳಬೇಕು : ನ್ಯಾ.ಮಂಜುನಾಥ ಜಿ ಎಬಾಲಕಾರ್ಮಿಕರನ್ನು ಶಿಕ್ಷಣದ ಮುಖ್ಯವಾಹಿನಿಗೆ ಕರೆತರಲು ಸೂಚನೆ : ಪ್ರಭುಲಿಂಗ ಕವಳಿಕಟ್ಟಿಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಮೂಲ್ಯ ಕೃತಿಗಳ ಮರು ಮುದ್ರಣ: ಸಾರ್ವಜನಿಕರಿಂದ ಅಭಿಪ್ರಾಯಕ್ಕೆ ಆಹ್ವಾನಕುರುಗೋಡು ಪುರಸಭೆ: ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತಗೊಳಿಸಲು ಹಠಾತ್ ದಾಳಿ ಹಾಗೂ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಲು ಡಿಸಿ ನಾಗೇಂದ್ರ ಪ್ರಸಾದ್.ಕೆ ಸೂಚನೆಗಮನ ಸೆಳೆದ ಈಜು ಸ್ಪರ್ಧೆಡೈರಿ ಉದ್ಯಮಕ್ಕೆ ಬೆಂಬಲ, ಹಾಲಿನ ಮಹತ್ವದ ಬಗ್ಗೆ ಅರಿವು ಮೂಡಿಸುವುದೇ ‘ವಿಶ್ವ ಹಾಲು ದಿನ'ದ ಪ್ರಾಮುಖ್ಯತೆಬಳ್ಳಾರಿ ಆದರ್ಶ ವಿದ್ಯಾಲಯ: ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ಆದರ್ಶ ವಿದ್ಯಾಲಯ: ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ