Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಧ್ವಜ ವಂತಿಗೆ ನೀಡುವ ಮೂಲಕ ನಿವೃತ್ತ ಸೈನಿಕರಿಗೆ ನೆರವಾಗೋಣ : ಡಿಸಿ


ಶಿವಮೊಗ್ಗ,ಡಿ.8ಸಶಸ್ತç ಪಡೆಗಳಲ್ಲಿ ಸೇವೆ ಸಲ್ಲಿಸಿದ ಸೈನಿಕರನ್ನು ಗೌರವಿಸುವ ಉದ್ದೇಶದಿಂದ ಸೈನಿಕ ಧ್ವಜ ದಿನಾಚರಣೆಯನ್ನು ಪ್ರತಿ ವರ್ಷ ಕೈಗೊಳ್ಳಲಾಗುತ್ತಿದ್ದು, ಧ್ವಜ ವಂತಿಗೆ ನೀಡುವ ಮೂಲಕ ನಿವೃತ್ತ ಸೈನಿಕರು ಮತ್ತು ಅವರ ಅವಲಂಬಿತರಿಗೆ ನೆರವಾಗೋಣ ಎಂದು ಎಂದು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ತಿಳಿಸಿದರು.

ಜಿಲ್ಲಾಡಳಿತ ಕಚೇರಿಯಲ್ಲಿ ಸೋಮವಾರ ಸಶಸ್ತç ಪಡೆಗಳ ಧ್ವಜ ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ಧ್ವಜ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

1949 ರಿಂದ ಪ್ರತಿ ವರ್ಷ ಸೈನಿಕ ಧ್ವಜ ದಿನವನ್ನು ಆಚರಿಸಲಾಗುತ್ತಿದೆ. ಧ್ವಜ ದಿನಾಚರಣೆ ಅಂಗವಾಗಿ ಸಂಗ್ರಹವಾಗುವ ವಂತಿಗೆ ಹಣವನ್ನು ನಿವೃತ್ತ ಸೈನಿಕರ ಕುಟುಂಬ, ಅವರ ಅವಲಂಬಿತರ ಕಲ್ಯಾಣಕ್ಕಾಗಿ ಹಾಗೂ ಯುದ್ದದಲ್ಲಿ ಅಂಗವಿಕಲತೆಗೆ ಒಳಗಾದ ಸೈನಿಕರ ನೆರವಿಗಾಗಿ ಬಳಕೆ ಮಾಡಿಕೊಳ್ಳಲಾಗುವುದು. ಆದ್ದರಿಂದ ಎಲ್ಲ ಅಧಿಕಾರಿಗಳು, ಸಾರ್ವಜನಿಕರು ಉತ್ತಮ ರೀತಿಯಲ್ಲಿ ಸಹಕರಿಸಬೇಕೆಂದು ಮನವಿ ಮಾಡುತ್ತೇನೆ ಎಂದ ಅವರು ಶಿವಮೊಗ್ಗ ಜಿಲ್ಲೆ ಧ್ವಜ ವಂತಿಗೆ ಸಂಗ್ರಹದಲ್ಲಿ ಮತ್ತು ಕಲ್ಯಾಣ ಕಾರ್ಯಕ್ರಮಗಳಲ್ಲಿ ಮಾದರಿಯಾಗಲಿ ಎಂದರು ಆಶಿಸಿದರು.

ಪುರೋಹಿತರಾದ ನಾಗರಾಜ್ ಎಂಬುವವರು ಧ್ವಜ ದಿನಾಚರಣೆ ಅಂಗವಾಗಿ ರೂ.25000 ಗಳ ವಂತಿಗೆಯನ್ನು ನೀಡಿದ್ದು ಅವರನ್ನು ಜಿಲ್ಲಾಧಿಕಾರಿಗಳು ಇದೇ ಸಂದರ್ಭದಲ್ಲಿ ಗೌರವಿಸಿ, ನಾಗರಾಜ್‌ರವರು ಎಲ್ಲರಿಗೂ ಪ್ರೇರಣೆಯಾಗಿದ್ದಾರೆ ಎಂದರು.

ಸೈನಿಕ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ(ಪ್ರ)ರಾದ ಡಾ.ಸಿ.ಎ.ಹಿರೇಮಠ ಮಾತನಾಡಿ, ಈ ಬಾರಿ ಧ್ವಜ ವಂತಿಗೆಯ ಸಂಗ್ರಹದಲ್ಲಿ ಉತ್ತಮವಾಗಿ ಗುರಿ ಸಾಧನೆ ಮಾಡಲಾಗಿದೆ. ಧ್ವಜ ದಿನದ ಅಂಗವಾಗಿ ಸಂಗ್ರಹವಾಗುವ ವಂತಿಗೆ ಹಣದಿಂದ ನಿವೃತ್ತ ಸೈನಿಕರು, ಅವರ ಅವಲಂಬಿತರಿಗೆ ಅನುಕೂಲ ಮಾಡಿಕೊಡಲಾಗುವುದು. ವಂತಿಗೆ ಹಣ ಹೆಚ್ಚಾದರೆ ಹೆಚ್ಚಿನ ಅನುಕೂಲ ಸಾಧ್ಯವಾಗುತ್ತದೆ. ಆದ್ದರಿಂದ ಅಧಿಕಾರಿಗಳು, ಸಾರ್ವಜನಿಕ ಸಹಕಾರ ಸಿಕ್ಕರೆ ಒಳ್ಳೆಯದು ಎಂದರು.

ಈ ಸಂದರ್ಭದಲ್ಲಿ ಜಿಲ್ಲೆಯ ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು, ಮಾಜಿ ಸೈನಿಕರ ಅವಲಂಬಿತರು, ಎನ್‌ಸಿಸಿ ಅಧಿಕಾರಿಗಳು, ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ