Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

‘ಲಿಲ್ಲಿ’ ಚಲನಚಿತ್ರ ಟೀಸರ್ ಬಿಡುಗಡೆ

ಬೆಂಗಳೂರು : ಸ್ನೇಹಾಲಯಂ ಕ್ರಿಯೇಷನ್ಸ್ ಸಮರ್ಪಿಸಿ ಬೃಂದ ವಿದ್ಯಾ ಪಿಕ್ಚರ್ಸ್ ಬ್ಯಾನರ್‌ನ ಅಡಿಯಲ್ಲಿ ಹಗದೂರು ಅಶೋಕ್ ರೆಡ್ಡಿ,ಮುತ್ತುಸಂದ್ರ ವೆಂಕಟರಾಮ್ ಸತ್ಯವಾರ ನಾಗೇಶ್ ರವರು ಜಂಟಿಯಾಗಿ ನಿರ್ಮಿಸುತ್ತಿರುವ ‘ಲಿಲ್ಲಿ’ ಕನ್ನಡ ಚಲನಚಿತ್ರದ ಟೀಸರ್ ನ್ನು ಹೊಸಕೋಟೆ ಯಾದವ ಮಹಾಸಭಾ ಅಧ್ಯಕ್ಷ ಆನಂದಪ್ಪನವರು ತಮ್ಮ ಅಮೃತ ಹಸ್ತದಿಂದ ಲೋಕಾರ್ಪಣೆ ಮಾಡಿದರು.
ಸಾಕಷ್ಟು ಯುವ ಪ್ರತಿಭಾವಂತ ಕಲಾವಿದರು ಗ್ರಾಮೀಣ ಮಟ್ಟದಲ್ಲಿದ್ದರೂ ಸೂಕ್ತ ಅವಕಾಶವಿಲ್ಲದೆ ಪ್ರತಿಭಾವಂಚಿತರಾಗುತ್ತಿದ್ದಾರೆ .ಅಂತವರನ್ನು ಗುರತಿಸಿ ಪ್ರೋತ್ಸಾಹಿಸುವ ಕಾರ್ಯ ಚಿತ್ರರಂಗದವರಿ0ದ ಆಗಬೇಕು. ಹೊಸ ಹೊಸ ಕಲಾವಿದರು ಚಿತ್ರರಂಗಕ್ಕೆ ಬರಬೇಕು. .ಅಂತಹದ್ದರಲ್ಲಿ ಸ್ಥಳೀಯ ಕಲಾವಿದರಿಗೆ ಅವಕಾಶ ಕೊಟ್ಟು ಚಲನಚಿತ್ರ ನಿರ್ಮಿಸಿದ ನಿರ್ದೇಶಕರಿಗೆ ಮತ್ತು ನಿರ್ಮಾಪಕರಿಗೆ ಧನ್ಯವಾದಗಳನ್ನು ತಿಳಿಸಿದರು. ಸಿನಿಮಾ ನಿರ್ದೇಶಕನೊಬ್ಬನ ಜೀವನದಲ್ಲಿ ನಡೆಯುವ ಒಂದು ಘಟನೆ ಇಡೀ ಚಿತ್ರರಂಗವನ್ನು ಭಯಭೀತಿಗೊಳಿಸುವ ಕಥಾಹಂದರವಿರುವ ‘ಲಿಲ್ಲಿ’ ಚಿತ್ರದಲ್ಲಿ ಸುರೇಶ್ ಸೂರ್ಯ, ಖುಷಿಗೌಡ, ಅನು, ಅಶೋಕ್ ರೆಡ್ಡಿ, ಎಂ ವಿ ಸಮಯ್, ಚಂದ್ರಶೇಖರ್, ನಾಗೇಶ್, ಭಕ್ತರಹಳ್ಳಿ ರವಿ, ರಾಧಾ, ವೆಂಕಟರಾಮ್, ಬೇಬಿ ಜಯಲಲಿತ ಮೊದಲಾದವರು ನಟಿಸಿದ್ದಾರೆ
ಆರ್.ಕೆ. ಗಾಂಧಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿರುವ ‘ಲಿಲ್ಲಿ’ ಸಿನಿಮಾ ಗೆ ಅನಿರುದ್ಧ ಶಾಸ್ತ್ರಿ ಸಂಗೀತ, ಪ್ರತಾಪ್ ಭಟ್ ಸಾಹಿತ್ಯ, ಬಿ ಯುವರಾಜ್ ಛಾಯಾಗ್ರಹಣ, ಸಂಕಲನ, ಸೂರ್ಯಕಿರಣ್‌ರ ನೃತ್ಯ ಸಂಯೋಜನೆ ಇದ್ದು ಡಾ ಪ್ರಭು ಗಂಜಿಹಾಳ , ಡಾ ವೀರೇಶ ಹಂಡಗಿ ಅವರ ಪತ್ರಿಕಾ ಪ್ರಚಾರವಿದೆ. ಸಧ್ಯ ಚಿತ್ರಕ್ಕೆ ಸಂಬ0ಧಿಸಿದ ಎಲ್ಲ ಕಾರ್ಯ ಭರದಿಂದ ಸಾಗಿದ್ದು ಸಿನಿಮಾವನ್ನು ಆಗಸ್ಟ್ ತಿಂಗಳಲ್ಲಿ ತೆರೆಗೆ ತರಲು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೇವೆ ಎಂದು ನಿರ್ದೇಶಕ ಗಾಂಧಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ