Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಲೋಕಾಯುಕ್ತ ಪೊಲೀಸ್: ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ/ಜನ ಸಂಪರ್ಕ ಸಭೆ





ಬಳ್ಳಾರಿ,ಜು.07

ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗದ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಜಿಲ್ಲೆಯ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳ ಅಹವಾಲುಗಳ ಸ್ವೀಕಾರ/ಜನ ಸಂಪರ್ಕ ಸಭೆ ಏರ್ಪಡಿಸಲಾಗಿದೆ ಎಂದು ಬಳ್ಳಾರಿ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ವಾಸುದೇವರಾಮ್.ಎನ್ ಅವರು ತಿಳಿಸಿದ್ದಾರೆ.

ಪೊಲೀಸ್ ಅಧೀಕ್ಷಕ ವಾಸುದೇವರಾಮ್.ಎನ್ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕರಾದ ಸುರೇಶ್.ಎಂ.ಭಾವಿಮನಿ ಮತ್ತು ನಾಗರೆಡ್ಡಿ ಇವರ ನೇತೃತ್ವದಲ್ಲಿ ಕುರುಗೋಡು, ಬಳ್ಳಾರಿ, ಸಿರುಗುಪ್ಪ, ಸಂಡೂರು ಮತ್ತು ಕಂಪ್ಲಿ ತಾಲ್ಲೂಕು ಕೇಂದ್ರಗಳಲ್ಲಿ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ನಡೆಯಲಿದೆ.

ಅಹವಾಲು ಸ್ವೀಕರಿಸುವ ದಿನ ಮತ್ತು ಸ್ಥಳ:

ಜುಲೈ 09 ರಂದು ಬೆಳಿಗ್ಗೆ 11.30 ಗಂಟೆಯಿ0ದ ಮಧ್ಯಾಹ್ನ 2 ಗಂಟೆಯವರೆಗೆ ಕುರುಗೋಡಿನ ತಹಶೀಲ್ದಾರರ ಕಚೇರಿ ಸಭಾಂಗಣ.

ಜುಲೈ 15 ರಂದು ಬೆಳಿಗ್ಗೆ 11.30 ಗಂಟೆಯಿ0ದ ಮಧ್ಯಾಹ್ನ 02 ಗಂಟೆಯವರೆಗೆ ಬಳ್ಳಾರಿಯ ಹೊಸ ಡಿಸಿ ಕಚೇರಿಯ ತಹಶೀಲ್ದಾರರ ಕಚೇರಿ ಸಭಾಂಗಣ.

ಜುಲೈ 17 ರಂದು ಬೆಳಿಗ್ಗೆ 11.30 ಗಂಟೆಯಿ0ದ ಮಧ್ಯಾಹ್ನ 02 ಗಂಟೆಯವರೆಗೆ ಸಿರುಗುಪ್ಪದ ಸಿಡಿಪಿಒ ಕಚೇರಿ ಸಭಾಂಗಣ.

ಜುಲೈ 23 ರಂದು ಬೆಳಿಗ್ಗೆ 11.30 ಗಂಟೆಯಿ0ದ ಮಧ್ಯಾಹ್ನ 02 ಗಂಟೆಯವರೆಗೆ ಸಂಡೂರು ತಹಶೀಲ್ದಾರರ ಕಚೇರಿ ಸಭಾಂಗಣ.

ಜುಲೈ 25 ರಂದು ಬೆಳಿಗ್ಗೆ 11.30 ಗಂಟೆಯಿ0ದ ಮಧ್ಯಾಹ್ನ 02 ಗಂಟೆಯವರೆಗೆ ಕಂಪ್ಲಿಯ ತಹಶೀಲ್ದಾರರ ಕಚೇರಿ ಸಭಾಂಗಣ.

ಕಾರ್ಯಕ್ರಮದಲ್ಲಿ ಕರ್ನಾಟಕ ಲೋಕಾಯುಕ್ತ ಬೆಂಗಳೂರು ಇವರಿಗೆ ಅರ್ಜಿ ಸಲ್ಲಿಸಲು ನಮೂನೆ/ಫಾರಂ ನಂ.01 ಮತ್ತು 02 ಗಳನ್ನು ಸಹ ನೀಡಲಾಗುವುದು. ಕುಂದು ಕೊರತೆಗಳಿರುವ ಸಾರ್ವಜನಿಕರು ದೂರುಗಳಿದ್ದಲ್ಲಿ ನಿಗದಿಪಡಿಸಿದ ದಿನದಂದು ಅರ್ಜಿ ನಮೂನೆಯಲ್ಲಿ ಅಹವಾಲು ನೀಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ