Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇಂಧನ ಸ್ವಾವಲಂಬನೆಗೆ ಆದ್ಯತೆ: ಬಜೆಟ್‌ನಲ್ಲಿ ಮಹತ್ವದ ಘೋಷಣೆಗಳು

ಬೆಂಗಳೂರು: 2026–27ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್‌ನಲ್ಲಿ ಇಂಧನ ಕ್ಷೇತ್ರದ ಸ್ವಾವಲಂಬನೆಗೆ ಸರ್ಕಾರ ವಿಶೇಷ ಆದ್ಯತೆ ನೀಡಿದೆ. ಗೃಹ ಬಳಕೆದಾರರು, ರೈತರು ಹಾಗೂ ಹಸಿರು ಇಂಧನ ಅಭಿವೃದ್ಧಿಗೆ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಲಾಗಿದೆ.
ರಾಜ್ಯದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಯೋಜನೆಗೆ ಪ್ರಸಕ್ತ ವರ್ಷದಲ್ಲಿ ₹10,578 ಕೋಟಿ ಮೀಸಲಿರಿಸಲಾಗಿದೆ. ಜೊತೆಗೆ ರೈತರಿಗೆ ನೆರವಾಗುವ ಉದ್ದೇಶದಿಂದ ನೀರಾವರಿ ಪಂಪ್ ಸೆಟ್‌ಗಳಿಗೆ ಉಚಿತ ವಿದ್ಯುತ್ ಸಹಾಯಧನ ಯೋಜನೆಗೆ ₹19,290 ಕೋಟಿ ಅನುದಾನವನ್ನು ಒದಗಿಸಲಾಗಿದೆ.
ಇಂಧನ ಸ್ವಾವಲಂಬನೆ ಸಾಧಿಸಲು ಸರ್ಕಾರ ‘ಮುಖ್ಯಮಂತ್ರಿ ಸೌರ ಕೃಷಿ ಯೋಜನೆ’ ಎಂಬ ಹೊಸ ಯೋಜನೆಯನ್ನು ಘೋಷಿಸಿದೆ. ಈ ಯೋಜನೆಯಡಿ ಅಂದಾಜು ₹10,500 ಕೋಟಿ ವೆಚ್ಚದಲ್ಲಿ 3,000 ಮೆಗಾವಾಟ್ ಸಾಮರ್ಥ್ಯದ ಸೌರ ವಿದ್ಯುತ್ ಸ್ಥಾವರಗಳನ್ನು ಆರಂಭಿಸಲು ಯೋಜಿಸಲಾಗಿದೆ.
ಇನ್ನೂ ವಿದ್ಯುತ್ ಸಂಗ್ರಹ ಸಾಮರ್ಥ್ಯವನ್ನು ಹೆಚ್ಚಿಸಲು ಅಂದಾಜು ₹3,400 ಕೋಟಿ ವೆಚ್ಚದಲ್ಲಿ ಹುಲಿಯೂರು, ಪಾವಗಡ ಮತ್ತು ಕುಷ್ಟಗಿ ಸಬ್ ಸ್ಟೇಷನ್‌ಗಳಲ್ಲಿ 2,000 MWh ಸಾಮರ್ಥ್ಯದ ಬ್ಯಾಟರಿ ಶಕ್ತಿ ಸಂಗ್ರಹ ವ್ಯವಸ್ಥೆ (BESS) ಅಳವಡಿಕೆ ಯೋಜನೆ ಪ್ರಾರಂಭಿಸಲಾಗುತ್ತದೆ.
ಇದೇ ವೇಳೆ ವಿದ್ಯುತ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಸಾರ್ವಜನಿಕ ಸ್ಥಳಗಳಲ್ಲಿ ₹777 ಕೋಟಿ ವೆಚ್ಚದಲ್ಲಿ 1,250 ವಾಹನ ಚಾರ್ಜಿಂಗ್ ಕೇಂದ್ರಗಳನ್ನು ಪಿ.ಎಮ್–ಇ ಡ್ರೈವ್ ಯೋಜನೆ ಅಡಿಯಲ್ಲಿ ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ.
ಈ ಯೋಜನೆಗಳ ಮೂಲಕ ರಾಜ್ಯದಲ್ಲಿ ಹಸಿರು ಇಂಧನ ಉತ್ಪಾದನೆ, ರೈತರ ನೆರವು ಹಾಗೂ ವಿದ್ಯುತ್ ವಾಹನಗಳ ಬಳಕೆ ಹೆಚ್ಚುವ ನಿರೀಕ್ಷೆಯಿದೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ