Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇಂಧನ ಸ್ವಾವಲಂಬನೆಗೆ ಆದ್ಯತೆ: ಬಜೆಟ್‌ನಲ್ಲಿ ಮಹತ್ವದ ಘೋಷಣೆಗಳು

ಬೆಂಗಳೂರು: 2026–27ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್‌ನಲ್ಲಿ ಇಂಧನ ಕ್ಷೇತ್ರದ ಸ್ವಾವಲಂಬನೆಗೆ ಸರ್ಕಾರ ವಿಶೇಷ ಆದ್ಯತೆ ನೀಡಿದೆ. ಗೃಹ ಬಳಕೆದಾರರು, ರೈತರು ಹಾಗೂ ಹಸಿರು ಇಂಧನ ಅಭಿವೃದ್ಧಿಗೆ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಲಾಗಿದೆ.
ರಾಜ್ಯದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಯೋಜನೆಗೆ ಪ್ರಸಕ್ತ ವರ್ಷದಲ್ಲಿ ₹10,578 ಕೋಟಿ ಮೀಸಲಿರಿಸಲಾಗಿದೆ. ಜೊತೆಗೆ ರೈತರಿಗೆ ನೆರವಾಗುವ ಉದ್ದೇಶದಿಂದ ನೀರಾವರಿ ಪಂಪ್ ಸೆಟ್‌ಗಳಿಗೆ ಉಚಿತ ವಿದ್ಯುತ್ ಸಹಾಯಧನ ಯೋಜನೆಗೆ ₹19,290 ಕೋಟಿ ಅನುದಾನವನ್ನು ಒದಗಿಸಲಾಗಿದೆ.
ಇಂಧನ ಸ್ವಾವಲಂಬನೆ ಸಾಧಿಸಲು ಸರ್ಕಾರ ‘ಮುಖ್ಯಮಂತ್ರಿ ಸೌರ ಕೃಷಿ ಯೋಜನೆ’ ಎಂಬ ಹೊಸ ಯೋಜನೆಯನ್ನು ಘೋಷಿಸಿದೆ. ಈ ಯೋಜನೆಯಡಿ ಅಂದಾಜು ₹10,500 ಕೋಟಿ ವೆಚ್ಚದಲ್ಲಿ 3,000 ಮೆಗಾವಾಟ್ ಸಾಮರ್ಥ್ಯದ ಸೌರ ವಿದ್ಯುತ್ ಸ್ಥಾವರಗಳನ್ನು ಆರಂಭಿಸಲು ಯೋಜಿಸಲಾಗಿದೆ.
ಇನ್ನೂ ವಿದ್ಯುತ್ ಸಂಗ್ರಹ ಸಾಮರ್ಥ್ಯವನ್ನು ಹೆಚ್ಚಿಸಲು ಅಂದಾಜು ₹3,400 ಕೋಟಿ ವೆಚ್ಚದಲ್ಲಿ ಹುಲಿಯೂರು, ಪಾವಗಡ ಮತ್ತು ಕುಷ್ಟಗಿ ಸಬ್ ಸ್ಟೇಷನ್‌ಗಳಲ್ಲಿ 2,000 MWh ಸಾಮರ್ಥ್ಯದ ಬ್ಯಾಟರಿ ಶಕ್ತಿ ಸಂಗ್ರಹ ವ್ಯವಸ್ಥೆ (BESS) ಅಳವಡಿಕೆ ಯೋಜನೆ ಪ್ರಾರಂಭಿಸಲಾಗುತ್ತದೆ.
ಇದೇ ವೇಳೆ ವಿದ್ಯುತ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಸಾರ್ವಜನಿಕ ಸ್ಥಳಗಳಲ್ಲಿ ₹777 ಕೋಟಿ ವೆಚ್ಚದಲ್ಲಿ 1,250 ವಾಹನ ಚಾರ್ಜಿಂಗ್ ಕೇಂದ್ರಗಳನ್ನು ಪಿ.ಎಮ್–ಇ ಡ್ರೈವ್ ಯೋಜನೆ ಅಡಿಯಲ್ಲಿ ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ.
ಈ ಯೋಜನೆಗಳ ಮೂಲಕ ರಾಜ್ಯದಲ್ಲಿ ಹಸಿರು ಇಂಧನ ಉತ್ಪಾದನೆ, ರೈತರ ನೆರವು ಹಾಗೂ ವಿದ್ಯುತ್ ವಾಹನಗಳ ಬಳಕೆ ಹೆಚ್ಚುವ ನಿರೀಕ್ಷೆಯಿದೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ