Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

*ತಾಲೂಕು ಮಟ್ಟದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಹಲವು ಸಮಸ್ಯೆಗಳ ಚರ್ಚೆ*

ಪಟ್ಟಣದ ತಾಲೂಕು ಪಂಚಾಯಿತಿ ಕಾರ್ಯಾಲದಲ್ಲಿ ತಾಲೂಕು ಮಟ್ಟದ ಮೊದಲನೇ ಪ್ರಗತಿ ಪರಿಶೀಲನೆ ಸಭೆ ಜಿಪಂ. ಮುಖ್ಯ ಯೋಜನಾಧಿಕಾರಿ ಹಾಗೂ ಆಡಳಿತ ಅಧಿಕಾರಿ ವಾಗೀಶ್ ಶಿವಚಾರ್ಯ ರವರ ನೇತೃತ್ವದಲ್ಲಿ ಶನಿವಾರ ಜರುಗಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಮಾತನಾಡಿ, ತಾಲೂಕಿನಲ್ಲಿ ಉತ್ತಮ ಮುಂಗಾರು ಮಳೆಯಾಗಿದ್ದು, ರೈತರಿಗೆ ಗುಣಮಟ್ಟದ ಬೀಜ ಮತ್ತು ಗೊಬ್ಬರವನ್ನು ನೀಡುವಂತೆ ಕೃಷಿ ಇಲಾಖೆಗೆ ಸೂಚಿಸಿದರು. ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗೃತೆ ಕ್ರಮಗಳನ್ನು ಕೈಗೊಂಡು, ಮಳೆ ನೀರು ನಿಲ್ಲದಂತೆ ನರೇಗಾ ಯೋಜನೆಯಲ್ಲಿ ಕಾಮಗಾರಿ ಮಾಡಲು ಗ್ರಾಪಂ.ಗೆ ತಿಳಿಸಿ, ಸಾರ್ವಜನಿಕರಿಗೆ ಆರೋಗ್ಯ ಕುರಿತು ಜಾಗೃತಿ ಮೂಡಿಸುವ ಸಭೆಗಳು ಮಾಡಬೇಕು ಎಂದು ಆರೋಗ್ಯ ಇಲಾಖೆಗೆ ಸೂಚಿಸಿದರು. ಮಳೆಗಾಲ ಇರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ವಿದ್ಯುತ್ ಕಂಬಗಳು ಹಾಗೂ ಟ್ರಾನ್ಸಪಾರಂಗಳ ಪರಿಶೀಲನೆ ನಡೆಸಿ, ದುರಸ್ಥಿ ಇದ್ದಲ್ಲಿ ಅತಿ ಶೀಘ್ರವಾಗಿ ದುರಸ್ಥಿ ಪಡಿಸಬೇಕು ಎಂದು ವಿದ್ಯುತ್ ಇಲಾಖೆಗೆ ಸೂಚಿಸಿದರು. ಕಲುಷಿತ ನೀರು ಕಂಡು ಬಂದಲ್ಲಿ ಸೂಕ್ತ ಕ್ರಮ ವಹಿಸುವಂತೆ ಗ್ರಾಪಂ. ಪಿಡಿಓಗಳಿಗೆ ಸೂಚಿಸಿದರು. ಮಳೆ ಹೆಚ್ಚು ಆಗುತ್ತಿರುವುದರಿಂದ ಸರಕಾರಿ ಶಾಲೆಗಳಲ್ಲಿ ಕೊಠಡಿಗಳ ದುರಸ್ಥಿ ಹಾಗೂ ಸೋರುವ ಕೊಠಡಿಗಳಿಂದ ಮಕ್ಕಳನ್ನು ದೂರು ಇರುವಂತೆ ಹಾಗೂ ದುರಸ್ಥಿ ಕೊಠಡಿಗಳ ಕುರಿತು ಶಾಸಕರಿಗೆ ತಿಳಿಸುವಂತೆ ಶಿಕ್ಷಣ ಇಲಾಖೆಗೆ ಸೂಚಿಸಿದರು. ಅಂಗನವಾಡಿಗಳಲ್ಲಿ ಎಷ್ಟು ಮಕ್ಕಳು ದಾಖಲು ಮಾಡಿದ್ದೀರಿ ಹಾಗೂ ಆಹಾರದ ಕುರಿತು ಸಿಡಿಪಿಓ ಅಧಿಕಾರಿಗೆ ಸೂಚಿಸಿದರು. ಗ್ರಾಮೀಣ ಪ್ರದೇಶದ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ತೊಂದರೆಯಾಗದಂತೆ ಸೂಕ್ತ ಕ್ರಮ ವಹಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.

ನಂತರ ಕುಡಿಯುವ ನೀರಿನ ಯೋಜನೆಯ, ಗ್ರಾಮಗಳ ಅಭಿವೃದ್ಧಿ, ನರೇಗಾ ಯೋಜನೆ, ಜೆಜೆಎಂ ಹಾಗೂ ಇನ್ನಿತರ ಪ್ರಗತಿ ಪರಿಶೀಲನೆ ಕುರಿತು ಚರ್ಚಿಸಿದರು. 

ಈ ಸಂದರ್ಭದಲ್ಲಿ ತಾಪಂ. ಇಓ ಕೆವಿ.ನಿರ್ಮಲ, ನರೇಗಾ ಸಹಾಯಕ ನಿರ್ದೇಶಕ ಶಿವರಾಮರೆಡ್ಡಿ, ಅಡಿಪಿಆರ್ ಅನೀಲ್ ಕುಮಾರ್, ಟಿಪಿಓ ರಾಧಿಕಾ, ಬಸವನಗೌಡ, ರಾಜಶೇಖರಗೌಡ, ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಪಂ. ಪಿಡಿಓಗಳು ಹಾಗೂ ಕಚೇರಿ ಸಿಬ್ಬಂದಿ ವರ್ಗದವರು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ