ಸಿರುಗುಪ್ಪ : ನಗರದ ಬಳ್ಳಾರಿ ರಸ್ತೆಯ ಆದಿತ್ಯ ಹೃದಯಾಲಯ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯಲ್ಲಿ,
ಅದಿತ್ಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಸಿರುಪ್ಪ ಮತ್ತು ಬೆಂಗಳೂರಿನ ಸಪ್ತಗಿರಿ ಆಸ್ಪತ್ತೆಯ ಸಂಯುಕ್ತಾಶ್ರಯದಲ್ಲಿ ಭಾನುವಾರ ಬೃಹತ್ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿದೆ.
ಶಿಬಿರದಲ್ಲಿ ಹೃದಯರೋಗ, ನರರೋಗ, ಕ್ಯಾನ್ಸರ್, ಮೂತ್ರಪಿಂಡದಲ್ಲಿ ಕಲ್ಲು ಹಾಗೂ ಸಾಮಾನ್ಯ ಕಾಯಿಲೆಗಳ ತಪಾಸಣೆ ನಡೆಸಲಾಗುತ್ತದೆ.
ಮೆಟ್ಟಿಲು ಹತ್ತುವಾಗ, ನಡೆಯುವಾಗ, ಆಟವಾಡುವಾಗ ಆಯಾಸವಾಗುವುದು, ಮೈ ಬೆವರುವುದು, ಉಸಿರಾಟದ ತೊಂದರೆ ಹಾಗೂ ಹೃದಯ ಸಂಬಂಧಿ ತೊಂದರೆಗಳಿಂದ ಬಳಲುತ್ತಿರುವವರು, ಹುಟ್ಟಿನಿಂದ ಹೃದಯ ಸಮಸ್ಯೆ, ಬೆಳವಣಿಗೆ ಕುಂಟಿತ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳು, ಹೆಚ್ಚು ದೇಹ ತೂಕ ಉಳ್ಳವರು, ಮೂತ್ರ ವಿಸರ್ಜನೆಯಲ್ಲಿ ತೊಂದರೆ, ಮೂತ್ರಪಿಂಡದಲ್ಲಿ ಕಲ್ಲು, ಮೂತ್ರ ವಿಸರ್ಜನೆಯ ವೇಳೆ ಉರಿ, ರಕ್ತ ಬರುವುದು, ಬೆನ್ನು, ಕುತ್ತಿಗೆ ನೋವು, ಮೆದುಳಿನ ಗಡ್ಡೆ ಇವರು ಈ ಶಿಬಿರದಲ್ಲಿ ಭಾಗವಹಿಸಬಹುದು ಎಂದು ವೈದ್ಯರು ತಿಳಿಸಿದರು.

