Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೈತರ ಸಮಸ್ಯೆಗಳಿಗೆ ವರ್ತಕರು ಸ್ಪಂದಿಸಬೇಕು : ತಿಮ್ಮನಗೌಡರ ಕರೆ


ಕೃಷಿ ಪರಿಕರಗಳ ಮಾರಾಟಗಾರರ ನ್ಯಾಯಯುತ ಸಮಸ್ಯೆಗಳಿಗೆ ಸ್ಪಂದಿಸಿ ನ್ಯಾಯ ದೊರಕಿಸಿಕೊಡಲು ಶ್ರಮಿಸುವೆ ಎಂದು ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ತಿಮ್ಮನಗೌಡ ಅವರು ಭರವಸೆ ನೀಡಿದರು.

ಪಟ್ಟಣದಲ್ಲಿ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ತಾಲ್ಲೂಕು ಘಟಕದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಕೃಷಿ ಪರಿಕರಗಳ ಮಾರಾಟಗಾರರು ವಸ್ತುಗಳ ಉತ್ಪಾಧಕರಲ್ಲ. ಅವರು ಕೇವಲ ಮಾರಾಟಗಾರರು. ಆದರೂ ಕೆಲವು ಸಂದರ್ಭಗಳಲ್ಲಿ ರೈತರು ಮಾರಾಟಗಾರರ ಮೇಲೆ ಮುಗಿಬೀಳುತ್ತಾರೆ. ಆ ಸಂದರ್ಭದಲ್ಲಿ ಧೃತಿಗೆಡದೆ ದೈರ್ಯದಿಂದ ಸಮಸ್ಯೆ ಎದುರಿಸಬೇಕು. ನಿಜವಾಗಿ ರೈತರಿಗೆ ಅನ್ಯಾಯವಾಗಿದ್ದರೆ ಅವರಿಗೆ ನ್ಯಾಯದೊಕಿಸಿಕೊಡಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಘಟಕದ ನಿರ್ದೇಶಕರಾದ ಅರಿವಿ ಶರಣಪ್ಪ ಮತ್ತು ಹಾವಿನಹಾಳು ಶರಣಪ್ಪ ಮಾತನಾಡಿ, ಬೀಜ, ರಸಗೊಬ್ಬರ ಮತ್ತು ಕ್ರಿಮಿನಾಶ ವಸ್ತುಗಳಲ್ಲಿ ಉತ್ಪಾಧನಾ ಕೇಂದ್ರಗಳಲ್ಲಿಯೇ ಕೆಲವು ಸಂದರ್ಭದಲ್ಲಿ ದೋಷ ಕಂದಿರುತ್ತದೆ. ರೈತರು ಮಾರಾಟಗಾರರನ್ನು ಅಪರಾಧಿಗಳಾಗಿ ನೋಡುತ್ತಾರೆ. ಅಂಥ ಸಂದರ್ಭದಲ್ಲಿ ಜಿಲ್ಲಾ ಸಂಘ ವರ್ತಕರ ರಕ್ಷಣೆಗೆ ಬರಬೇಕು ಎಂದು ಮನವಿಮಾಡಿದರು.

ಸಿಂಧಿಗೇರಿ ಗಾದಿಲಿಂಗಪ್ಪ, ಅಗ್ರಿ ಎಂಪ್ಲಾಯಿಸ್ ಅಸೋಷಿಯೇಷನ್ ಜಿಲ್ಲಾ ಅಧ್ಯಕ್ಷ ಚವ್ಹಾಣ್ ಮಾತನಾಡಿದರು.                     

ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಕುರಿ ಹನುಮಣ್ಣ ಪ್ರಸ್ತಾವಿಕ ಮಾತನಾಡಿದರು. 

ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಜಿಲ್ಲಾ ಘಟಕದ ನಿರ್ದೇಶಕರಾದ ದೊಡ್ಡನಗೌಡ, ಸೋಮಲಾಪುರ ವೀರೇಶ್, ಚಾನಾಳು ರಾಮಣ್ಣ, ಅರಿವಿ ಶರಣಪ್ಪ, ಹಾವಿನಹಾಳ್ ಶರಣಪ್ಪ, ತಾಲ್ಲೂಕು ಅಧ್ಯಕ್ಷ ಸಿ.ಎಚ್. ಶೇಖರ್, ಸುರೇಶ್, ನಿರಂಜನ, ಸಾಗಪ್ಪ, ಗಾದಿಲಿಂಗಪ್ಪ ಮತ್ತು ಕೆ.ಸುರೇಶ್ ಇದ್ದರು.

ಕುರುಗೋಡಿನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಭಿನಂದನಾ  ಕಾರ್ಯಕ್ರಮದಲ್ಲಿ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ತಿಮ್ಮನಗೌಡ ಮಾತನಾಡಿದರು

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ