Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಯಚೂರ: ಪ್ರವಾಹಕ್ಕೆ ತುತ್ತಾಗಬಹುದಾದ ಗ್ರಾಮಗಳಿಗೆ ಸೇನಾ ಅಧಿಕಾರಿಗಳ ಭೇಟಿ; ಪರಿಶೀಲನೆ


ರಾಯಚೂರು ಜೂನ್ 09 : ಭಾರತೀಯ ಸೇನೆಯ ಅಧಿಕಾರಿಗಳಾದ ಮೇಜರ್ ಬಸವ ಪ್ರಭು ಹಾಗೂ ಸಂಜೀವ್ ಸಾಧುನವರ್ ಅವರ ನೇತೃತ್ವದ ತಂಡವು, ರಾಯಚೂರ ಜಿಲ್ಲೆಯಲ್ಲಿ ಪ್ರವಾಹಕ್ಕೆ ತುತ್ತಾಗಬಹುದಾದ ಗ್ರಾಮಗಳಿಗೆ ಇತ್ತೀಚಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಜಿಲ್ಲೆಯಲ್ಲಿ 2025ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಂಭವವಿದೆ ಎಂದು ಹಮಾಮಾನ ಇಲಾಖೆ ವರದಿ ನೀಡಿರುವ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ತಂಡವು ಈ ಕಾರ್ಯಕ್ರಮ ನಡೆಸಿತು.
ರಾಯಚೂರಿನ ತಾಲೂಕಿನ ಆತ್ಮರು, ಕುರ್ವಕರ್ದಾ, ಕುರ್ವಕಲಾ, ದೊಂಗರಾಂಪುರ, ಕಾಡೂರು ಹಾಗೂ ಗುರ್ಜಾಪೂರ, ಗುರ್ಜಾಪೂರ ಬ್ರಿಡ್ಜ್ ಕಮ್ ಬ್ಯಾರೇಜ ಹಾಗೂ ದೇವದುರ್ಗ ತಾಲೂಕಿನ ಅಪ್ರಾಳ, ಬಸವಂತಪುರ, ಹಿರೇರಾಯಕುಂಪಿ, ಚಿಕ್ಕರಾಯಕುಂಪಿ, ಗೂಗಲ್, ಗೂಗಲ್ ಬ್ರಿಡ್ಜ್ ಕಮ್ ಬ್ಯಾರೇಜ್ ಸೇರಿದಂತೆ ಶಕ್ತಿನಗರದ ಹೆಲಿಪ್ಯಾಡ್ ಈ ಎಲ್ಲಾ ಕಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ರಾಯಚೂರಿನ ಅಗ್ನಿಶಾಮಕ ದಳದ ಕಚೇರಿಗೆ ಭೇಟಿ ನೀಡಿ ಪ್ರವಾಹದ ಸಂದರ್ಭದಲ್ಲಿ ಉಪಯೋಗಿಸುವ ರಕ್ಷಣಾ ಸಾಮಗ್ರಿಗಳ ಬಗ್ಗೆ ಪರಿಶೀಲನೆ ನಡೆಸಿ, ಒಂದು ವೇಳೆ ಪ್ರವಾಹದ ಬಂದಲ್ಲಿ ಸಕಲ ರೀತಿಯಲ್ಲಿ ಸಜ್ಜಾಗಿರಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೇನಾ ಅಧಿಕಾರಿ ಅಭಯ ಕುಮಾರ್ ಹಾಗೂ ಸಂಜೀವ್ ಸಾಧುನವರ್ ಅವರು ಸೂಚಿಸಿದರು.
ಇದೇ ಸಂದರ್ಭದಲ್ಲಿ ರಾಯಚೂರು ಹಾಗೂ ದೇವದುರ್ಗ ತಾಲೂಕಿನ ತಹಶೀಲ್ದಾರರು, ಜಿಲ್ಲಾ ಅಗ್ನಿ ಶಾಮಕ ದಳದ ಅಧಿಕಾರಿಗಳು, ಜಿಲ್ಲಾಧಿಕಾರಿಗಳ ಕಚೇರಿಯ ಜಿಲ್ಲಾ ವಿಪತ್ತು ಪರಿಣಿತರು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿಗಳು ಸೇರಿದಂತೆ ಇತರೆ ಸಂಬಂಧಪಟ್ಟ ಅಧಿಕಾರಿಗಳು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ