Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಯಚೂರ: ಪ್ರವಾಹಕ್ಕೆ ತುತ್ತಾಗಬಹುದಾದ ಗ್ರಾಮಗಳಿಗೆ ಸೇನಾ ಅಧಿಕಾರಿಗಳ ಭೇಟಿ; ಪರಿಶೀಲನೆ


ರಾಯಚೂರು ಜೂನ್ 09 : ಭಾರತೀಯ ಸೇನೆಯ ಅಧಿಕಾರಿಗಳಾದ ಮೇಜರ್ ಬಸವ ಪ್ರಭು ಹಾಗೂ ಸಂಜೀವ್ ಸಾಧುನವರ್ ಅವರ ನೇತೃತ್ವದ ತಂಡವು, ರಾಯಚೂರ ಜಿಲ್ಲೆಯಲ್ಲಿ ಪ್ರವಾಹಕ್ಕೆ ತುತ್ತಾಗಬಹುದಾದ ಗ್ರಾಮಗಳಿಗೆ ಇತ್ತೀಚಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಜಿಲ್ಲೆಯಲ್ಲಿ 2025ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಂಭವವಿದೆ ಎಂದು ಹಮಾಮಾನ ಇಲಾಖೆ ವರದಿ ನೀಡಿರುವ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ತಂಡವು ಈ ಕಾರ್ಯಕ್ರಮ ನಡೆಸಿತು.
ರಾಯಚೂರಿನ ತಾಲೂಕಿನ ಆತ್ಮರು, ಕುರ್ವಕರ್ದಾ, ಕುರ್ವಕಲಾ, ದೊಂಗರಾಂಪುರ, ಕಾಡೂರು ಹಾಗೂ ಗುರ್ಜಾಪೂರ, ಗುರ್ಜಾಪೂರ ಬ್ರಿಡ್ಜ್ ಕಮ್ ಬ್ಯಾರೇಜ ಹಾಗೂ ದೇವದುರ್ಗ ತಾಲೂಕಿನ ಅಪ್ರಾಳ, ಬಸವಂತಪುರ, ಹಿರೇರಾಯಕುಂಪಿ, ಚಿಕ್ಕರಾಯಕುಂಪಿ, ಗೂಗಲ್, ಗೂಗಲ್ ಬ್ರಿಡ್ಜ್ ಕಮ್ ಬ್ಯಾರೇಜ್ ಸೇರಿದಂತೆ ಶಕ್ತಿನಗರದ ಹೆಲಿಪ್ಯಾಡ್ ಈ ಎಲ್ಲಾ ಕಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ರಾಯಚೂರಿನ ಅಗ್ನಿಶಾಮಕ ದಳದ ಕಚೇರಿಗೆ ಭೇಟಿ ನೀಡಿ ಪ್ರವಾಹದ ಸಂದರ್ಭದಲ್ಲಿ ಉಪಯೋಗಿಸುವ ರಕ್ಷಣಾ ಸಾಮಗ್ರಿಗಳ ಬಗ್ಗೆ ಪರಿಶೀಲನೆ ನಡೆಸಿ, ಒಂದು ವೇಳೆ ಪ್ರವಾಹದ ಬಂದಲ್ಲಿ ಸಕಲ ರೀತಿಯಲ್ಲಿ ಸಜ್ಜಾಗಿರಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೇನಾ ಅಧಿಕಾರಿ ಅಭಯ ಕುಮಾರ್ ಹಾಗೂ ಸಂಜೀವ್ ಸಾಧುನವರ್ ಅವರು ಸೂಚಿಸಿದರು.
ಇದೇ ಸಂದರ್ಭದಲ್ಲಿ ರಾಯಚೂರು ಹಾಗೂ ದೇವದುರ್ಗ ತಾಲೂಕಿನ ತಹಶೀಲ್ದಾರರು, ಜಿಲ್ಲಾ ಅಗ್ನಿ ಶಾಮಕ ದಳದ ಅಧಿಕಾರಿಗಳು, ಜಿಲ್ಲಾಧಿಕಾರಿಗಳ ಕಚೇರಿಯ ಜಿಲ್ಲಾ ವಿಪತ್ತು ಪರಿಣಿತರು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿಗಳು ಸೇರಿದಂತೆ ಇತರೆ ಸಂಬಂಧಪಟ್ಟ ಅಧಿಕಾರಿಗಳು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ