Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

"ಅಕ್ಕ ಪಡೆ": ರಕ್ಷಣಾತ್ಮಕ ಅಣುಕು ಪ್ರದರ್ಶನ - "ಅಕ್ಕ ಪಡೆ"ಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಚಾಲನೆ





ಬೆಳಗಾವಿ,ಫೆ 18ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ವಿಶೇಷವಾಗಿ ರಚಿಸಿರುವ "ಅಕ್ಕ ಪಡೆ"ಗೆ ನಗರ ಚನ್ನಮ್ಮ ವೃತ್ತದಲ್ಲಿ ಮಂಗಳವಾರ ಫೆ.17) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ ನೀಡಿದರು.



ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು

"ಅಕ್ಕ ಪಡೆ" 24/7 ಸಕ್ರಿಯವಾಗಿ ಕಾರ್ಯನಿರ್ವಹಿಸಲಿದೆ. ತರಬೇತಿ ಪಡೆದ ಮಹಿಳಾ ಸಿಬ್ಬಂದಿ ಅಕ್ಕ ಪಡೆಯಲ್ಲಿ ಆಯ್ಕೆಯಾಗಿದ್ದು, ಶಾಲಾ-ಕಾಲೇಜು, ಮಾಲ್‌ಗಳು, ದೇವಸ್ಥಾನ, ಬಸ್ ಮತ್ತು ರೈಲ್ವೆ ನಿಲ್ದಾಣಗಳಂತಹ ಜನದಟ್ಟಣೆ ಪ್ರದೇಶಗಳಲ್ಲಿ ಅಕ್ಕ ಪಡೆ ಗಸ್ತು ತಿರುಗಲಿದೆ ಎಂದು ಮಾಹಿತಿ ನೀಡಿದರು.



ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ಸಹಾಯ ಮಾಡಲು ಅಕ್ಕಪಡೆ ರಚಿಸಲಾಗಿದ್ದು, ಪೊಲೀಸ್ ಗಸ್ತು ವಾಹನಗಳ ಮಾದರಿಯಲ್ಲಿ ಕಾರ್ಯನಿರ್ವಹಿಸುತ್ತದೆ.

ಕಿರುಕುಳ ತಡೆಗಟ್ಟಲು ಮತ್ತು ಮಹಿಳೆಯರು/ಮಕ್ಕಳಿಗೆ ಸುರಕ್ಷಿತ ವಾತಾವರಣ ಒದಗಿಸುವುದು.



ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರಿಗೆ ಅಥವಾ ಮಕ್ಕಳಿಗೆ ಕಿರುಕುಳ, ದೌರ್ಜನ್ಯ ಅಥವಾ ಅಪಾಯ ಎದುರಾದಾಗ 'ಅಕ್ಕ ಪಡೆ' ತಕ್ಷಣವೇ ಸ್ಥಳಕ್ಕೆ ಧಾವಿಸಿ ರಕ್ಷಣೆ ನೀಡಲು ಸಹಾಯವಾಗಲಿದೆ. ಸಂಕಷ್ಟದಲ್ಲಿರುವ ಮಹಿಳೆಯರಿಗೆ ರಕ್ಷಣೆ ನೀಡುವುದು ಅಕ್ಕ ಪಡೆಯ ಮೂಲ ಉದ್ದೇಶವಾಗಿದೆ



ಮಹಿಳೆಯರು ಆರ್ಥಿಕ, ಸಾಮಾಜಿಕವಾಗಿ ಸದೃಢರಾಗಲು ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ ಅದರಂತೆ ಅಕ್ಕ ಪಡೆಯು ಕೂಡ ಮಹಿಳೆಯರ ಸುರಕ್ಷೆಗಾಗಿ ಸದಾ ಕಾಲ ಕಾರ್ಯನಿರ್ವಹಿಸುತ್ತೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ತಿಳಿಸಿದರು.



"ಅಕ್ಕ ಪಡೆ" ಅಣಕು ಪ್ರದರ್ಶನ:



ಇದಕ್ಕೂ ಮುಂಚೆ "ಅಕ್ಕ ಪಡೆ"ಯ ಗಸ್ತು ವಾಹನಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಬಳಿಕ "ಅಕ್ಕ ಪಡೆ"ಯ ಸಿಬ್ಬಂದಿಗಳು ವಿವಿಧ ರಕ್ಷಣಾತ್ಮಕ ಅಣುಕುಗಳನ್ನು ಪ್ರದರ್ಶಿಸಿದರು.



ನಗರ ಪೊಲೀಸ್ ಆಯುಕ್ತ ಭೂಷಣ್ ಗುಲಾಬರಾವ್ ಬೊರಸೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿಲ್ಲಾ ಪಂಚಾಯತ್ ಮುಖ್ಯ ನಿರ್ವಾಹಕಾಧಿಕಾರಿ ರಾಹುಲ್ ಶಿಂಧೆ, ಅಕ್ಕ ಪಡೆ ರಾಜ್ಯ ರಾಜ್ಯ ಸಂಯೋಜಕರಾದ ಶೈನಿ, ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಚೇತನಕುಮಾರ, ಡಿಡಿಪಿಐ ಲೀಲಾವತಿ ಹಿರೇಮಠ, ಕ್ಷೇತ್ರ ಶಿಕ್ಷಣಾಧಿಕಾರಿ ರವಿ ಭಜಂತ್ರಿ ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ