Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಯಚೂರಿನ ಐತಿಹಾಸಿಕ ಕೋಟೆ ಪ್ರದೇಶಕ್ಕೆ ಸಚಿವರಾದ ಎನ್ ಎಸ್ ಬೋಸರಾಜು ಭೇಟಿ;ಪರಿಶೀಲನೆ


ರಾಯಚೂರ ಜುಲೈ 07 : ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಬೋಸರಾಜು ಅವರು ಜುಲೈ 7ರಂದು ರಾಯಚೂರ ನಗರದ ಐತಿಹಾಸಿಕ ಕೋಟೆ ಪ್ರದೇಶಕ್ಕೆ ಭೇಟಿ ನೀಡಿದರು.
ಮೊದಲಿಗೆ ಬಸ್ ನಿಲ್ದಾಣಕ್ಕೆ ಹತ್ತಿರದ ಕೋಟೆಯ ಕಂದಕದ‌ ಕಾಮಗಾರಿಯ ವೀಕ್ಷಣೆ ನಡೆಸಿದರು. ಈಗಾಗಲೇ ಹಲವಾರು ದಿನಗಳಿಂದ ಜೆಸಿಬಿಗಳ ಮೂಲಕ ಕಂದಕದ ಶುಚಿತ್ವ ಕಾರ್ಯ ನಡೆಯುತ್ತಿದೆ. ಇದಕ್ಕೆ ನಗರದ ನಿವಾಸಿಗಳು, ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನು ವೈಜ್ಞಾನಿಕವಾಗಿ ಪೂರ್ಣ ಪ್ರಮಾಣದಲ್ಲಿ ಸರಿಪಡಿಸಬೇಕು. ಶಾಶ್ವತವಾಗಿ ಈ ಪ್ರದೇಶ ಸುಂದರವಾಗಿ ಕಾಣುವಂತಾಗಬೇಕು ಎಂಬುದು ಜನರ ಒತ್ತಾಸೆಯಾಗಿದೆ ಎಂದು
ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ಸಚಿವರಿಗೆ ಮಾಹಿತಿ ನೀಡಿದರು.
ಈ ಕೋಟೆ ಕಂದಕದ ಕಾಮಗಾರಿಯು ಅಚ್ಚುಕಟ್ಟಾಗಿ ನಡೆದು ಇದು ಜನಾಕರ್ಷಣೀಯವಾಗಿ ಕಾಣಲು ಕೋಟೆ ಪ್ರದೇಶದಲ್ಲಿ ಲೈಟಿಂಗ್ ವ್ಯವಸ್ಥೆ ಮಾಡಿಸಬೇಕು. ಹಾಳಾಗಿರುವ ಗ್ರಿಲಗಳನ್ನು ಸರಿಪಡಿಸಿ ಪುನರೋತ್ಥಾನಕ್ಕೆ ಕ್ರಮವಹಿಸಲು ಸಚಿವರು ಸೂಚನೆ ನೀಡಿದರು.
ಲೈಟಿಂಗ್ ಮಾಡಿಸಲು ಈಗಾಗಲೇ ಪ್ರಸ್ತಾವಣೆ ಸಿದ್ದಪಡಿಸಲಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೋಹಪಾತ್ರ ಅವರು ತಿಳಿಸಿದರು. ಬಳಿಕ ಸಚಿವರು, ಸೂಪರ್ ಬಜಾರ್ ಹತ್ತಿರದ ಕಾಟಾ ದರ್ವಾಜ್ ಮತ್ತು ತೀನ್ ಕಂದಿಲ್ ವೃತ್ತಕ್ಕೆ ಭೇಟಿ ನೀಡಿ ಪರಿಶೀಲಿಸಿ, ಅಭಿವೃದ್ಧಿಪಡಿಸಲು ತಿಳಿಸಿದರು.
ಈ ವೇಳೆ ಮಹಾಪೌರರಾದ ನರಸಮ್ಮ ಮಾಡಗಿರಿ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಶ್ರೀಕೃಷ್ಣ ಶಾವಂತಗೇರಿ, ಲೋಕೋಪಯೋಗಿ ಇಲಾಖೆಯ ಅಭಿಯಂತರರಾದ ಮಹೇಶ, ರಾಘವೇಂದ್ರ, ಮೇನಕಾ ಪಟೇಲ್ ಹಾಗೂ ಇತರರು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ