Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಯಚೂರಿನ ಐತಿಹಾಸಿಕ ಕೋಟೆ ಪ್ರದೇಶಕ್ಕೆ ಸಚಿವರಾದ ಎನ್ ಎಸ್ ಬೋಸರಾಜು ಭೇಟಿ;ಪರಿಶೀಲನೆ


ರಾಯಚೂರ ಜುಲೈ 07 : ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಬೋಸರಾಜು ಅವರು ಜುಲೈ 7ರಂದು ರಾಯಚೂರ ನಗರದ ಐತಿಹಾಸಿಕ ಕೋಟೆ ಪ್ರದೇಶಕ್ಕೆ ಭೇಟಿ ನೀಡಿದರು.
ಮೊದಲಿಗೆ ಬಸ್ ನಿಲ್ದಾಣಕ್ಕೆ ಹತ್ತಿರದ ಕೋಟೆಯ ಕಂದಕದ‌ ಕಾಮಗಾರಿಯ ವೀಕ್ಷಣೆ ನಡೆಸಿದರು. ಈಗಾಗಲೇ ಹಲವಾರು ದಿನಗಳಿಂದ ಜೆಸಿಬಿಗಳ ಮೂಲಕ ಕಂದಕದ ಶುಚಿತ್ವ ಕಾರ್ಯ ನಡೆಯುತ್ತಿದೆ. ಇದಕ್ಕೆ ನಗರದ ನಿವಾಸಿಗಳು, ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನು ವೈಜ್ಞಾನಿಕವಾಗಿ ಪೂರ್ಣ ಪ್ರಮಾಣದಲ್ಲಿ ಸರಿಪಡಿಸಬೇಕು. ಶಾಶ್ವತವಾಗಿ ಈ ಪ್ರದೇಶ ಸುಂದರವಾಗಿ ಕಾಣುವಂತಾಗಬೇಕು ಎಂಬುದು ಜನರ ಒತ್ತಾಸೆಯಾಗಿದೆ ಎಂದು
ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ಸಚಿವರಿಗೆ ಮಾಹಿತಿ ನೀಡಿದರು.
ಈ ಕೋಟೆ ಕಂದಕದ ಕಾಮಗಾರಿಯು ಅಚ್ಚುಕಟ್ಟಾಗಿ ನಡೆದು ಇದು ಜನಾಕರ್ಷಣೀಯವಾಗಿ ಕಾಣಲು ಕೋಟೆ ಪ್ರದೇಶದಲ್ಲಿ ಲೈಟಿಂಗ್ ವ್ಯವಸ್ಥೆ ಮಾಡಿಸಬೇಕು. ಹಾಳಾಗಿರುವ ಗ್ರಿಲಗಳನ್ನು ಸರಿಪಡಿಸಿ ಪುನರೋತ್ಥಾನಕ್ಕೆ ಕ್ರಮವಹಿಸಲು ಸಚಿವರು ಸೂಚನೆ ನೀಡಿದರು.
ಲೈಟಿಂಗ್ ಮಾಡಿಸಲು ಈಗಾಗಲೇ ಪ್ರಸ್ತಾವಣೆ ಸಿದ್ದಪಡಿಸಲಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೋಹಪಾತ್ರ ಅವರು ತಿಳಿಸಿದರು. ಬಳಿಕ ಸಚಿವರು, ಸೂಪರ್ ಬಜಾರ್ ಹತ್ತಿರದ ಕಾಟಾ ದರ್ವಾಜ್ ಮತ್ತು ತೀನ್ ಕಂದಿಲ್ ವೃತ್ತಕ್ಕೆ ಭೇಟಿ ನೀಡಿ ಪರಿಶೀಲಿಸಿ, ಅಭಿವೃದ್ಧಿಪಡಿಸಲು ತಿಳಿಸಿದರು.
ಈ ವೇಳೆ ಮಹಾಪೌರರಾದ ನರಸಮ್ಮ ಮಾಡಗಿರಿ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಶ್ರೀಕೃಷ್ಣ ಶಾವಂತಗೇರಿ, ಲೋಕೋಪಯೋಗಿ ಇಲಾಖೆಯ ಅಭಿಯಂತರರಾದ ಮಹೇಶ, ರಾಘವೇಂದ್ರ, ಮೇನಕಾ ಪಟೇಲ್ ಹಾಗೂ ಇತರರು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ