Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇಬ್ಬರು ಮಕ್ಕಳೊಂದಿಗೆ ಮಹಿಳೆ ನಾಪತ್ತೆ – ಪತ್ತೆಗೆ ಮನವಿ

ಬಳ್ಳಾರಿ,ಮೇ 21
ಸಂಡೂರು ತಾಲ್ಲೂಕಿನ ಸುಲ್ತಾನಪುರ ಗ್ರಾಮದ ನಿವಾಸಿ ಉಮಾದೇವಿ (34 ವರ್ಷ) ಹಾಗೂ ಅವರ ಮಕ್ಕಳಾದ ಜಯಶ್ರೀ (14 ವರ್ಷ), ನಾಗರತ್ನ (10 ವರ್ಷ) ಎಂಬುವವರು ಮೇ 15ರಂದು ಕಾಣೆಯಾಗಿದ್ದು, ಈ ಕುರಿತು ಕುಡುತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಉಪ-ನಿರೀಕ್ಷಕರು ಮನವಿ ಮಾಡಿದ್ದಾರೆ.
*ನಾಪತ್ತೆಯಾದವರ ಚಹರೆ ಗುರುತು:*
*ಉಮಾದೇವಿ:* ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಮನೆಯಿಂದ ಹೊರಡುವಾಗ ಕಡು ನೀಲಿ ಬಣ್ಣದ ಸೀರೆ ಹಾಗೂ ಕುಪ್ಪಸ ಧರಿಸಿದ್ದರು. ಕನ್ನಡ ಮತ್ತು ಹಿಂದಿ ಭಾಷೆ ಮಾತನಾಡುತ್ತಾರೆ.
*ಎಸ್.ಜಯಶ್ರೀ:* ದುಂಡು ಮುಖ, ಗೋಧಿ ಮೈಬಣ್ಣ, ಸದೃಢ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಗುಲಾಬಿ ಬಣ್ಣದ ಪ್ರಾಕ್ ಧರಿಸಿರುತ್ತಾರೆ. ಕನ್ನಡ ಭಾಷೆ ಮಾತನಾಡುತ್ತಾಳೆ.
*ಎಸ್.ನಾಗರತ್ನ:* ದುಂಡು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಮನೆಯಿಂದ ಹೋಗುವಾಗ ಕಪ್ಪು ಬಣ್ಣದ ಟಿ-ಶರ್ಟ್, ಕಂದು ಬಣ್ಣದ ನೈಟ್ ಪ್ಯಾಂಟ್ ಧರಿಸಿರುತ್ತಾರೆ. ಕನ್ನಡ ಭಾಷೆ ಮಾತನಾಡುತ್ತಾಳೆ.
ಈ ಮಹಿಳೆ ಮತ್ತು ಮಕ್ಕಳ ಬಗ್ಗೆ ಯಾವುದೇ ಮಾಹಿತಿ ಸಿಕ್ಕಲ್ಲಿ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆ ಅಥವಾ ಬಳ್ಳಾರಿ ಎಸ್.ಪಿ ಕಚೇರಿ ದೂ.08392-258100, ತೋರಣಗಲ್ಲು ಡಿ.ಎಸ್.ಪಿ ಮೊ.9480803010, ಕುರುಗೋಡು ವೃತ್ತ ಸಿಪಿಐ ಮೊ.9480803039, ಕುಡುತಿನಿ ಪೊಲೀಸ್ ಠಾಣೆಯ ಪಿಎಸ್‌ಐ ಮೊ.9480803078 ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ: ಎಲ್ಲಾ ಸಂಸ್ಥೆಗಳಲ್ಲಿ ಆಂತರಿಕ ದೂರು ನಿವಾರಣಾ ಸಮಿತಿ ರಚನೆ ಕಡ್ಡಾಯ: ತಪ್ಪಿದರೆ ರೂ.50 ಸಾವಿರ ದಂಡ, ಲೈಸೆನ್ಸ್ ರದ್ದುಇಬ್ಬರು ಮಕ್ಕಳೊಂದಿಗೆ ಮಹಿಳೆ ನಾಪತ್ತೆ – ಪತ್ತೆಗೆ ಮನವಿ* ಸತತ 2 ಗಂಟೆ ಸಮಯ ಅಂಗನವಾಡಿಗಳಲ್ಲಿನ ದಾಖಲಾತಿ ಪರಿಶೀಲನೆ * ಕಿಮ್ಸನಲ್ಲಿ ರೋಗಿಗಳಿಗೆ ಕೊಡುವ ಆಹಾರದ ಗುಣಮಟ್ಟ ಪರಿಶೀಲನೆ * ಆಯೋಗದ ಅಧ್ಯಕ್ಷರಾದ ಡಾ.ಹೆಚ್.ಕೃಷ್ಣ, ಸದಸ್ಯ ಮಾರುತಿ ಎಂ. ದೊಡ್ಡಲಿಂಗಣ್ಣವರ ಅವರಿಂದ ಕಾರ್ಯಾಚರಣೆಚರಿತ್ರೆ ಅರಿಯಲು ವಸ್ತುಸಂಗ್ರಹಾಲಯಗಳು ಸಹಕಾರಿ: ಟಿ.ಜಿ.ವಿಠ್ಠಲ*ಆನೆಗೊಂದು ಅಂದದ ಹೆಸರುಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆ