Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಾಲ್ಮೀಕಿ ನಿಗಮದ ಅಕ್ರಮ ಆರೋಪದ ಶಾಸಕ ಬಸನಗೌಡ ದದ್ದಲ್‌ ಪರಾರಿ

ರಾಯಚೂರು,ಜು.14- ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಹಗರಣದ ಆರೋಪದ ಶಾಸಕ ಬಸನಗೌಡ ದದ್ದಲ್‌ ಅವರು ಪಶ್ಚಿಮ ಬಂಗಾಳ ಅಥವಾ ಹೈದರಾಬಾದ್‌ಗೆ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ತಲೆಮರೆಸಿಕೊಂಡಿರುವ ದದ್ದಲ್‌ ಅವರ ಪತ್ತೆಗೆ ಜಾರಿ ನಿರ್ದೇಶನಾಲಯ(ಇಡಿ) ಬಲೆ ಬೀಸಿದೆ.
ಬಸನಗೌಡ ದದ್ದಲ್‌ ಅವರು ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌‍ಐಟಿ ಎದುರು ಶುಕ್ರವಾರ ವಿಚಾರಣೆಗೆ ಹಾಜರಾಗಿದ್ದರು. ಸೋಮವಾರ ಮತ್ತೆ ವಿಚಾರಣೆಗೆ ಬರುವಂತೆ ಎಸ್‌‍ಐಟಿ ಅಧಿಕಾರಿಗಳು ಸೂಚಿಸಿದ್ದರು. ನಂತರ ಅವರು ನಾಪತ್ತೆಯಾಗಿದ್ದಾರೆ.

ಇಡಿ ಅಧಿಕಾರಿಗಳು ಅವರ ವಿಧಾನಸಭಾ ಕ್ಷೇತ್ರದಲ್ಲಿ ಹಾಗೂ ಬೆಂಗಳೂರಿನ ಯಲಹಂಕದಲ್ಲಿರುವ ಅವರ ನಿವಾಸ, ಕಚೇರಿಯಲ್ಲಿ ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಮಂತ್ರಾಲಯ ಮಾರ್ಗವಾಗಿ ಹೈದರಾಬಾದ್‌ಗೆ ತೆರಳಿದ್ದು, ಅಲ್ಲಿಂದ ಪಶ್ಚಿಮ ಬಂಗಾಳಕ್ಕೆ ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಈ ಜಾಡು ಹಿಡಿದಿರುವ ಇಡಿ ಅವರನ್ನು ವಶಕ್ಕೆ ಪಡೆಯಲು ಮುಂದಾಗಿದೆ.

ಮಂಗಳವಾರ ಮತ್ತು ಬುಧವಾರ ಇಡಿ ಅಧಿಕಾರಿಗಳು ದದ್ದಲ್‌ ಅವರ ಯಲಹಂಕದಲ್ಲಿರುವ ನಿವಾಸ, ರಾಯಚೂರಿನ ನಿವಾಸ ಸೇರಿ ವಿವಿಧೆಡೆ ದಾಳಿ ನಡೆಸಿ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ