Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಮೊಬೈಲ್ ಗೀಳು ಶಿಕ್ಷಣ ಹಾಳು


ಸಿರುಗುಪ್ಪ:ಆಧುನಿಕತೆಯ ಹೆಸರಲ್ಲಿ ಹಲವಾರು ಅನುಕೂಲಗಳಿಗೆ ಹೆಸರುವಾಸಿಯಾದ ಮೊಬೈಲ್ ಫೋನ್ ಮಕ್ಕಳ ಸಮಗ್ರ ಬೆಳವಣಿಗೆಗೆ ಮಾರಕವಾಗಿ ಬದಲಾಗಿದೆ ಎಂದು ಸಾಹಿತಿ,ಉಪನ್ಯಾಸಕ ಡಾ.ಯು.ಶ್ರೀನಿವಾಸ ಮೂರ್ತಿ ತಿಳಿಸಿದರು.
 ತೆಕ್ಕಲಕೋಟೆಯ ಕೋಟೆ ಆವರಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಳ್ಳಾರಿ ಜಿಲ್ಲಾ ಕರುನಾಡ  ಸಾಹಿತ್ಯ ಪರಿಷತ್ತು ಏರ್ಪಡಿಸಿದ್ದ ಶಾಲೆಗಳಲ್ಲಿ ವಿಚಾರ ಸಿಂಚನ ಸರಣಿಯಲ್ಲಿ "ಸಾಮಾಜಿಕ ಜಾಲತಾಣಗಳ ಭರಾಟೆಯ ಸದ್ದಿಗೆ ನಲುಗಿದವೇ ಪುಸ್ತಕಗಳು" ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿ ಮಾತನಾಡಿದ ಅವರು ವಿದ್ಯಾರ್ಥಿಗಳಲ್ಲಿ   ವಿವೇಕ ಮತ್ತು ಚಿಂತನೆ ಬೆಳೆಸಲು ಪುಸ್ತಕಗಳು ಮತ್ತು ತರಗತಿಯ ಬೋಧನೆ ಮುಖ್ಯ,ಆದರೆ ಇಂದು ಶಿಕ್ಷಣ ಪ್ರಕ್ರಿಯೆಯನ್ನು ಮರೆಮಾಡುವಷ್ಟು ಆಕರ್ಷಕವಾಗಿ ಮೊಬೈಲ್ ನಲ್ಲಿ ಇರುವ ಸಾಮಾಜಿಕ ಜಾಲತಾಣಗಳು ಮಕ್ಕಳನ್ನು ತಮಗರಿವಿಲ್ಲದಂತೆ ತಾಸುಗಟ್ಟಲೆ ಹಿಡಿದು ಕೂಡುವಂತೆ ಮಾಡುತ್ತವೆ. ಅಧ್ಯಯನದ ಸಮಯ, ಬರವಣಿಗೆ ಕಾಲ, ಆಲಿಸುವ ವ್ಯವಧಾನ ಮಕ್ಕಳಲ್ಲಿ ಕಡಿಮೆಯಾಗಿದೆ. ಮಕ್ಕಳು ಮೊಬೈಲ್ ಬಳಕೆ ಕಡಿಮೆ ಮಾಡಿ ಪುಸ್ತಕ ಹಿಡಿದು ಓದುವುದು ಮತ್ತು ಹೊಸ ಚಿಂತನೆಗಳತ್ತ ಸಾಗುವಂತೆ ಮಾಡುವುದು  ಇಂದು ಅನಿವಾರ್ಯವಾಗಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಸಿ ಆರ್ ಪಿ ತಿಮ್ಮನ ಗೌಡ ಇವರು ಮಾತನಾಡಿ ಸರ್ಕಾರಿ ಶಾಲೆಗಳಲ್ಲಿ ಸಾಕಷ್ಟು ಸೌಲಭ್ಯಗಳ ಜೊತೆ ಉತ್ತಮ ಶಿಕ್ಷಣ ಲಭ್ಯವಿದೆ, ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮಗಳಲ್ಲಿ ಶಿಕ್ಷಣ ಸಿಗುತ್ತದೆ. ಇಂದು ಉತ್ತಮ‌ ಸ್ಥಾನದಲ್ಲಿ   ಅನೇಕರು ಸರ್ಕಾರಿ ಶಾಲೆಯಲ್ಲಿ ಅಭ್ಯಾಸ ಮಾಡಿದವರೆ ಆಗಿದ್ದಾರೆ ಎಂದರು.

ಅದ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯರಾದ ಪದ್ಮಾವತಿ ಅವರು ಮಾತನಾಡಿ ಕನ್ನಡ ಭಾಷೆಯ ಬಗ್ಗೆ ಅಭಿಮಾನ ಮೂಢಿಸುವ ಮತ್ತು ಚಿಂತನಶೀಲ ಮನಸ್ಸು ಬೆಳೆಸುವ ಕಾರ್ಯಕ್ರಮಗಳು ಮಕ್ಕಳ ಏಳಿಗೆಗಾಗಿ ನಿರಂತರವಾಗಿ ನಡೆಸಲಾಗುತ್ತದೆ, ಕರುನಾಡ ಸಾಹಿತ್ಯ ಪರಿಷತ್ತಿನ ಈ ಕೆಲಸವನ್ನು ಪ್ರಶಂಸಿದರು.
ಪ್ರಾಸ್ತಾವಿಕ ಮಾತುಗಳಾಡಿದ ಬಳ್ಳಾರಿ ಜಿಲ್ಲೆಯ ಕರುನಾಡ ಸಾಹಿತ್ಯ ಪರಿಷತ್ತಿನ ಅದ್ಯಕ್ಷರಾದ ಲಕ್ಷ್ಮಣ ನಿಟ್ರುವಟ್ಟಿ  ಮಾತನಾಡಿ ಜಿಲ್ಲೆಯಾದ್ಯಂತ ಇಂತಹ ಕಾರ್ಯಕ್ರಮಗಳನ್ನು ಶಾಲೆಗಳಲ್ಲಿ ಏರ್ಪಡಿಸಲಾಗುತ್ತದೆ, ಕನ್ನಡದ ಕಂಪಿನ ಜೊತೆ ವಿಚಾರ ಶೀಲ ಮನಸ್ಸು ಮಕ್ಕಳಲ್ಲಿ ಬೆಳೆಸುವುದೇ ಕರುನಾಡ ಸಾಹಿತ್ಯ ಪರಿಷತ್ತಿನ ಧ್ಯೇಯ ಎಂದರು.ಕಾರ್ಯಕ್ರಮವನ್ನು ಶಿಕ್ಷಕಿ ರಾಧಾ ನಿರೂಪಿಸಿದರೆ, ಶಿಕ್ಷಕಿ ನಂದಿನಿ ಸ್ವಾಗತಿಸಿದರು. ಶಿಕ್ಷಕರು,ಅಡುಗೆ ಸಿಬ್ಬಂದಿ ಮತ್ತು ನೂರಾರು ಮಕ್ಕಳು ಹಾಜರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆಸ್ಪತ್ರೆಗಳ ಸುತ್ತಮುತ್ತ ತಂಬಾಕು ಮುಕ್ತ ವಲಯ ಜಾರಿ: ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ - ತಹಶೀಲ್ದಾರ ವಿಶ್ವಜಿತ್ ಮೆಹೆತಾವಿಠ್ಲಾಪುರದಲ್ಲಿ  'ಜಾನಪದ ಚಿತ್ತ ಕಾಲೇಜಿನತ್ತ' ಕಾರ್ಯಕ್ರಮ ಯಶಸ್ವಿ: ಜಾನಪದ ವಿದ್ಯಾರ್ಥಿಗಳಿಗೆ ಭಾಷಾ ಜ್ಞಾನವನ್ನು ಸುಲಭವಾಗಿ ಪರಿಚಯಿಸುತ್ತದೆ ಸಿ.ಮಂಜುನಾಥಕೊಪ್ಪಳ ಅಂಚೆ ವಿಭಾಗ: ವಿವಿಧ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ -------------ನೇಪಾಳ ಪ್ರವಾಹ: ಬಳ್ಳಾರಿ ಜಿಲ್ಲೆಯ ಪ್ರವಾಸಿಗರು, ನಾಗರಿಕರ ನೆರವಿಗೆ ಸಹಾಯವಾಣಿ ಆರಂಭಪಿ.ಎಂ. ಕಿಸಾನ್ ಯೋಜನೆ: ಹಣ ಪಡೆಯಲು ರೈತರಿಗೆ ಬಯೋಮೆಟ್ರಿಕ್ ಇ-ಕೆವೈಸಿ ಕಡ್ಡಾಯಬಳ್ಳಾರಿಯ ಸರಳಾದೇವಿ ಕಾಲೇಜಿನಲ್ಲಿ ‘ಅಂಬೇಡ್ಕರ್ ಓದು’ ಕಾರ್ಯಕ್ರಮ ಹಾಗೂ ಬಹುಮಾನ ವಿತರಣೆ ಅಂಬೇಡ್ಕರ್ ಕೇವಲ ವ್ಯಕ್ತಿಯಲ್ಲ, ಅದೊಂದು ವಿಚಾರಧಾರೆ: ಪ್ರೊ. ಎನ್.ಎಂ. ಸಾಲಿಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನಬಳ್ಳಾರಿ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಭದ್ರತೆ ಸೆ.15 ರವರೆಗೆ ‘ಜಾಬ್ ಕಾರ್ಡ್ ಮೇಳ' ಆಯೋಜನೆ: ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ಕಾಲುಗಳ ಸ್ವಾಧೀನವಿಲ್ಲ… ಆದರೆ ಪರಿಸರ ಕಾಳಜಿಗೆ ಮಿತಿಯಿಲ್ಲ ವೇಮನೂರಿನ ಕಸ ಹೆಕ್ಕಿ, ಕೆರೆ-ನದಿಗಳನ್ನು ಪ್ಲಾಸ್ಟಿಕ್‌ ಮುಕ್ತಗೊಳಿಸಲು ಜೀವನವನ್ನೇ ಮುಡಿಪಾಗಿಟ್ಟ ‘ಆಪರೇಷನ್‌ ರಾಜಪ್ಪನ್’ಪುರಾತನ ಐತಿಹಾಸಿಕ 360 ತಾಮ್ರದ ನಾಣ್ಯಗಳು ಪತ್ತೆ