Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮುಂಗಾರು ಹಸನು- ರೈತರಿಗೆ ಬೆಳೆ ವಿಮೆ ಮಾಡಿಸಲು ಸಹಾಯಕ ಕೃಷಿ ನಿರ್ದೇಶಕರಿಂದ ಮನವಿ




ಶಿವಮೊಗ್ಗ, ಜುಲೈ -02 : : ಶಿವಮೊಗ್ಗ ತಾಲ್ಲೂಖಿನಾದ್ಯಂತ ವಾಡಿಕೆಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ಪ್ರಸುತ್ತ ಮುಂಗಾರು ಹಂಗಾಮಿನಲ್ಲಿ ಇಲ್ಲಿಯವರೆಗೆ 113 ಮಿ.ಮೀ ವಾಡಿಕೆ ಮಳೆಗೆ 205 ಮಿ.ಮೀ ಮಳೆಯಾಗಿರುತ್ತದೆ. ವಾಡಿಕೆಗಿಂತ ಶೇಕಡಾ 83 ರಷ್ಟು ಹೆಚ್ಚಿನ ಪ್ರಮಾಣದಲ್ಲಿ ಮಳೆ ಆಗಿರುತ್ತದೆ. ರೈತರು ಈಗಾಗಲೇ ಬಿತ್ತನೆ ಕಾರ್ಯ ಕೈಗೊಂಡಿದ್ದು 13350 ಹೆಕ್ಟೇರ್ ಬಿತ್ತನೆ ಪ್ರದೇಶಕ್ಕೆ 10000 ಹೆಕ್ಟೇರ್ ಶೇಕಡಾ 75 ರಷ್ಟು ಮುಸುಕಿನಜೋಳದ ಬಿತ್ತನೆ ಆಗಿರುತ್ತದೆ. ರೈತರು ವಿವಿದ ತಳಿಗಳ ಭತ್ತದ ಬೀಜಗಳನ್ನು ಖರೀದಿ ಮಾಡುತ್ತಿದ್ದು ಸಸಿ ಮಡಿ ಮಾಡಲು ತಯಾರಿ ನೆಡಸುತ್ತಿದ್ದಾರೆ.

ತಾಲ್ಲೂಕಿನಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರಕ್ಕೆ ಯಾವುದೇ ಕೊರತೆ ಇರುವುದಿಲ್ಲ. ಪ್ರಸುತ್ತ ರೈತ ಸಂಪರ್ಕ ಕೇಂದ್ರಗಳಲ್ಲಿ 301 ಕ್ವಿಂಟಾಲ್ ಮುಸುಕಿನ ಜೋಳ ಬಿತ್ತನೆ ಬೀಜ 700 ಕ್ವಿಂಟಾಲ್ ಭತ್ತ ,20ಕ್ವಿಂಟಾಲ್ ರಾಗಿ ಹಾಗೂ ದ್ವಿದಳ ದಾನ್ಯ 20 ಕ್ವಿಂಟಾಲ್ ದಾಸ್ತಾನು ಇದ್ದು, ಯಾವುದೇ ಬಿತ್ತನೆ ಬೀಜದ ಕೊರತೆ ಇರುವುದಿಲ್ಲ. ಹಾಗೇಯೇ ರಸಗೊಬ್ಬರ 1116 ಮೆ.ಟನ್ ಯುರಿಯಾ,272 ಮೆ.ಟನ್ ಡಿ.ಎ.ಪಿ,556 ಮೆ.ಟನ್ ಎಂ.ಓ.ಪಿ,332 ಮೆ.ಟನ್ ಎಸ್.ಎಸ್.ಪಿ ಹಾಗೂ 2292 ಮೆ.ಟನ್ ವಿವಿಧ ಕಾಂಪ್ಲೇಕ್ಸ್ ರಸಗೊಬ್ಬರಗಳು ಲಭ್ಯವಿದ್ದು ರಸಗೊಬ್ಬರಕ್ಕೆ ಯಾವುದೇ ಕೊರತೆ ಇರುವುದಿಲ್ಲ. ರೈತರುಗಳು ಡಿ.ಎ.ಪಿ ಗೊಬ್ಬರದ ಮೇಲೆ ಅವಲಂಬಿತರಾಗದೇ ಲಭ್ಯವಿರುವ ವಿವಿಧ ಕಾಂಪ್ಲೇಕ್ಸ್ ರಸಗೊಬ್ಬರಗಳನ್ನು ಹಾಕಿ ಉತ್ತಮ ಇಳುವರಿ ಪಡೆಯಬಹುದಾಗಿರುತ್ತದೆ. ಈ ಕುರಿತು ಎಲ್ಲಾ ರಸಗೊಬ್ಬರ ಮಳಿಗೆಗಳ ಮುಂದೆ ಅಗತ್ಯ ಪ್ರಚಾರವನ್ನು ಕೈಗೊಳ್ಳಲಾಗಿದೆ.



ಮುಂಗಾರು ಹಂಗಾಮು ಉತ್ತಮವಾಗಿರುತ್ತದೆ ಎಂದು ಹವಮಾನ ವರದಿ ಹೇಳಿದ್ದರೂ ಸಹ ಮಳೆಯು ರೈತರೊಂದಿಗೆ ಜೂಜಾಟವಾಡುತ್ತಿದ್ದು ಬೆಳವಣಿಗೆ ಹಂತದಲ್ಲಿ ಕೆಲವೊಮ್ಮೆ ಮಳೆಕೈಕೊಡುವುದು ಹಾಗೆಯೇ ಕೊಯ್ಲಿನ ಸಮಯದಲ್ಲಿ ಹೆಚ್ಚು ಮಳೆ ಬರುವುದು ಸಾಮಾನ್ಯವಾಗಿರುತ್ತದೆ. ಇದರಿಂದ ರೈತರಿಗೆ ಇಳುವರಿ ಕಡಿಮೆಯಾಗಿ ಆರ್ಥಿಕನಷ್ಟ ಅನುಭವಿಸುತ್ತಿದ್ದಾರೆ.ಹಾಗಾಗಿ ರೈತರು ಕಡ್ಡಾಯವಾಗಿ ಬೆಳೆ ವಿಮೆಗೆ ನೊಂದಾಯಿಸಿಕೊಳ್ಳುವುದ ಅನಿರ್ವಾಯವಾಗಿದೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ರೈತರು ಕೇವಲ ಶೇಕಡಾ 2 ರಷ್ಟು ವಿಮಾ ಕಂತು ಪಾವತಿಸಿ ಬೆಳೆ ವಿಮೆ ಯೋಜನೆಗೆ ನೊಂದಾಯಿಸಿಕೊಳ್ಳಬಹುದಾಗಿರುತ್ತದೆ. ಬೆಳೆಗಳು ನೈರ್ಸಗಿಕ ವಿಕೋಪಗಳಿಂದ ಕುಂಠಿತ ಬೆಳವಣಿಗೆ, ಇಳುವರಿ ನಷ್ಟಕ್ಕೆ ಒಳಗಾದ ಸಂದರ್ಭದಲ್ಲಿ ರೈತರನ್ನು ಆರ್ಥಿಕ ನಷ್ಟದಿಂದ ಹೊರತರಲು ಈ ಯೋಜನೆ ಉಪಯುಕ್ತವಾಗಿರುತ್ತದೆ.

ಬೆಳೆ ವಿಮೆ ಯೋಜನೆಗೆ ನೊಂದಾಯಿಸಿಕೊಳ್ಳಲು ಮುಸುಕಿನಜೋಳ ಬೆಳೆಗೆ ಜುಲೈ 31 ಕೊನೆಯ ದಿನಾಂಕವಾಗಿದ್ದು ಭತ್ತದ ಬೆಳೆಗೆ ಆಗಸ್ಟ್ 16 ಕೊನೆಯ ದಿನಾಂಕವಾಗಿರುತ್ತದೆ.ಬೆಳೆ ವಿಮೆಯನ್ನು ರೈತರುಗಳು ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಕರ್ನಾಟಕ-ಓನ್, ಗ್ರಾಮ-ಓನ್ ಕೇಂದ್ರ ಹಾಗೂ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಕಟ್ಟಬಹುದಾಗಿರುತ್ತದೆ.

ರೈತರು ತಾವು ಬೆಳದ ಬೆಳೆಯನ್ನು ತಾವೇ ರೈತರ ಬೆಳೆ ಸಮೀಕ್ಷೆ ಮೊಬೈಲ್ ಆಫ್ ಮುಖಾಂತರ ಸಮೀಕ್ಷೆ ಮಾಡಿಕೊಳ್ಳಲು ಸೂಚಿಸಿದೆ. ಬೆಳೆ ಪರಿಹಾರ,ಬೆಳೆ ವಿಮೆ,ಬೆಳೆ ಸಾಲ,ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರಕ್ಕೆ ಪಸಲನ್ನು ಬಿಡಲು ಕೃಷಿ ಮತ್ತು ಕೃಷಿ ಸಂಭAದಿತ ಇಲಾಖೆಯಲ್ಲಿ ಸೌಲಭ್ಯ ಪಡೆಯಲು ಬೆಳೆ ಸಮೀಕ್ಷೆ ದತ್ತಾಂಶ ಪರಿಶೀಲನೆ ಮಾಡುವುದು ಕಡ್ಡಾಯವಾಗಿರುವುದನ್ನು ರೈತರು ತಮ್ಮ ಬೆಳೆಯನ್ನು ತಾವೇ ಸಮೀಕ್ಷೆ ಮಾಡಿಕೊಳ್ಳುವುದು ಹೆಚ್ಚು ಅನುಕೂಲವಾಗಿರುತ್ತದೆ. ಬೆಳೆ ಸಮೀಕ್ಷೆ ಸಂದರ್ಭದಲ್ಲಿ ತೊಡಕು ಉಂಟಾದಾಗ ತಮ್ಮ ಗ್ರಾಮದ ಖಾಸಗಿ ನಿವಾಸಿಯನ್ನು ಸಂಪರ್ಕಿಸುವುದು. ರೈತರು ಗೂಗಲ್ ಪ್ಲೇಸ್ಟೋರ್ ನಲ್ಲಿ ಮುಂಗಾರು ರೈತರ ಬೆಳೆ ಸಮೀಕ್ಷೆ-2025 (Farmer Crop Survey App-2025) ರಲ್ಲಿ ಡೌನ್ಲೋಡ್ ಮಾಡಿಕೊಂಡು ಬೆಳೆ ಸಮೀಕ್ಷೆ ಮಾಡಿಕೊಳ್ಳುವುದು.

ಸಹಾಯಕ ಕೃಷಿ ನಿರ್ದೇಶಕರಾದ ಶ್ರೀ.ರಮೇಶ್ ಎಸ್.ಟಿ ಇವರ ಹೇಳಿಕೆ - ರೈತರು ಪ್ರಕೃತಿ ವಿಕೋಪಗಳಿಂದ ಆಗುವ ಆರ್ಥಿಕ ನಷ್ಟದಿಂದ ಪಾರಾಗಲು ಬೆಳೆ ವಿಮೆ ಯೋಜನೆ ನೊಂದಾಯಿಸಿಕೊಳ್ಳುವುದು ಹೆಚ್ಚು ಅನುಕೂಲಕರವಾಗಿರುತ್ತದೆ. ಮುಸುಕಿನಜೋಳ ಬೆಳೆಗೆ ಜುಲೈ 31 ಕೊನೆಯ ದಿನಾಂಕವಾಗಿದ್ದು ಭತ್ತದ ಬೆಳೆಗೆ ಆಗಸ್ಟ್ 16 ಕೊನೆಯ ದಿನಾಂಕವಾಗಿರುತ್ತದೆ. ಹಾಗೇಯೇ ತಾವು ಬೆಳೆದ ಬೆಳೆಯನ್ನು ಸ್ವತಃ ತಾವೇ ಮುಂಗಾರು ರೈತರ ಬೆಳೆ ಸಮೀಕ್ಷೆ-2025 (Farmer Crop Survey App-2025) ರಲ್ಲಿ ಡೌನ್ಲೋಡ್ ಮಾಡಿಕೊಂಡು ಬೆಳೆ ಸಮೀಕ್ಷೆ ಮಾಡಿಕೊಳ್ಳುವುದು

(ಛಾಯಾಚಿತ್ರ ವಿವರ) -ಉಪ ಕೃಷಿ ನಿರ್ದೇಶಕಿ ಶ್ರೀಮತಿ ಮಂಜುಳಾ ಹಾಗೂ ಸಹಾಯಕ ಕೃಷಿ ನಿರ್ದೇಶಕರಾದ ಶ್ರೀ.ರಮೇಶ್ ಎಸ್.ಟಿ ಇವರುಗಳು ಆಯನೂರು ಗ್ರಾಮದ ರೈತರ ಜಮೀನಿಗೆ ಬೇಟಿ ನೀಡಿ ಮುಸುಕಿನಜೋಳ ಬಿತ್ತನೆ ಸಂಬAಧ ಅNeಗತ್ಯ ಮಾಹಿತಿಯನ್ನು ನೀಡುತ್ತಿರುವುದು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ