Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೈ ಭಾರತ ಯುವ ಜನರನ್ನು ನಾಗರಿಕ ರಕ್ಷಣಾ ಸ್ವಯಂಸೇವಕರಾಗಿ ನೋಂದಾಯಿಸಿಕೊಳ್ಳಲು ಆಹ್ವಾನ





ಧಾರವಾಡ ಮೇ.13: ಯುವ ಮತ್ತು ಕ್ರೀಡಾ ಸಚಿವಾಲಯದ ಮೈ ಭಾರತ ಕಾರ್ಯಕ್ರಮವು ದೇಶದಾದ್ಯಾಂತ ಯುವಕರನ್ನು ಮೈ ಭಾರತ ನಾಗರಿಕ ರಕ್ಷಣಾ ಸ್ವಯಂಸೇವಕರಾಗಿ ನೋಂದಾಯಿಸಿಕೊಳ್ಳಲು ಸಕ್ರಿಯವಾಗಿ ಪ್ರೇರೇಪಿಸುತ್ತಿದೆ. ದೇಶವ್ಯಾಪಿ ಆಹ್ವಾನವು ತುರ್ತು ಪರಿಸ್ಥಿತಿಗಳು ಮತ್ತು ಬಿಕ್ಕಟ್ಟಿನ ಸಮಯದಲ್ಲಿ ರಾಷ್ಟ್ರೀಯ ಕಾರಣಕ್ಕಾಗಿ ಮಹತ್ವಪೂರ್ಣ ಪಾತ್ರವಹಿಸಲು ಯುವ ನಾಗರಿಕರನ್ನು ಸಶಕ್ತಗೊಳಿಸುವ ಉದ್ದೇಶವನ್ನು ಹೊಂದಿದೆ.



ಯೋಜನೆಯು ಉತ್ತಮ ತರಬೇತಿ ಪಡೆದ, ಸ್ಪಂದಿಸುವ ಮತ್ತು ಆತ್ಮ ಸ್ಥೈರ್ಯದಿಂದಿರುವ ಸ್ವಯಂಸೇವಕರ ದಳವನ್ನು ನಿರ್ಮಿಸುವ ಉದ್ದೇಶ ಹೊಂದಿದ್ದು, ನೈಸರ್ಗಿಕ ವಿಪತ್ತುಗಳು, ಅಪಘಾತಗಳು, ಸಾರ್ವಜನಿಕ ತುರ್ತು ಪರಿಸ್ಥಿತಿಗಳು ಮತ್ತು ಇತರ ಅನಿರೀಕ್ಷಿತ ಸಂದರ್ಭಗಳಲ್ಲಿ ನಾಗರಿಕ ಆಡಳಿತವನ್ನು ಪೂರಕವಾಗಿರುತ್ತದೆ.



ಪ್ರಸ್ತುತ ಪರಿಸ್ಥಿತಿ ಮತ್ತು ಉದಯೋನ್ಮುಖ ಸುರಕ್ಷತಾ ಚಿಂತನೆಗಳನ್ನು ಮನಗಂಡು, ಸಮುದಾಯ ಆಧಾರಿತ ಪ್ರತಿಕ್ರಿಯಾ ವ್ಯವಸ್ಥೆಯನ್ನು ಸ್ಥಾಪಿಸುವ ಅಗತ್ಯತೆಯು ಹೆಚ್ಚಾಗಿದೆ. ನಾಗರಿಕ ರಕ್ಷಣಾ ಸ್ವಯಂಸೇವಕರು ಈ ಕ್ಷೇತ್ರದಲ್ಲಿ ಮಹತ್ವದ ಪಾತ್ರವಹಿಸುತ್ತಿದ್ದು, ಸ್ಥಳೀಯ ಅಧಿಕಾರಿಗಳಿಗೆ ವಿವಿಧ ಸೇವೆಗಳ ಮೂಲಕ ಬೆಂಬಲ ನೀಡುತ್ತಾರೆ.



ರಕ್ಷಣೆ ಮತ್ತು ಸ್ಥಳಾಂತರ ಕಾರ್ಯಾಚರಣೆಗಳು, ಪ್ರಾಥಮಿಕ ಚಿಕಿತ್ಸೆ ಮತ್ತು ತುರ್ತು ಆರೈಕೆ, ಸಂಚಾರ ನಿರ್ವಹಣೆ, ಜನಸಮೂಹ ನಿಯಂತ್ರಣ, ಸಾರ್ವಜನಿಕ ಭದ್ರತೆ ಮತ್ತು ವಿಪತ್ತು ಪ್ರತಿಕ್ರಿಯೆ ಮತ್ತು ಪುನಶ್ಚೇತನ ಕಾರ್ಯಗಳಲ್ಲಿ ಸಹಾಯ ಮಾಡುವುದು ಒಳಗೊಂಡಿದೆ. ಸಿದ್ಧತೆಯುಳ್ಳ ಮತ್ತು ತರಬೇತಿಯಾದ ನಾಗರಿಕ ಪಡೆ ಇದ್ದು, ಮೈ ಭಾರತ ತನ್ನದಾದ ಕೊಡುಗೆ ನೀಡಲು ಬದ್ಧವಾಗಿದೆ.



ಮೈ ಭಾರತ ತನ್ನ ಚುರುಕಾದ ಯುವ ಸ್ವಯಂಸೇವಕರ ಜಾಲದೊಂದಿಗೆ ಜೊತೆಗೆ ಎಲ್ಲಾ ಉತ್ಸಾಹಭರಿತ ಯುವ ನಾಗರಿಕರನ್ನು ಈ ಮಹತ್ವದ ಕಾರ್ಯಕ್ಕಾಗಿ ಮುಂದೆ ಬಂದು ಮೈ ಭಾರತ ನಾಗರಿಕ ರಕ್ಷಣಾ ಸ್ವಯಂಸೇವಕರಾಗಿ ನೋಂದಾಯಿಸಿಕೊಳ್ಳಲು ಪ್ರಾರಂಭಿಸಲಾಗಿದೆ.



ಮೈ ಭಾರತ ಸ್ವಯಂಸೇವಕರು ಮತ್ತು ಜವಾಬ್ದಾರಿ ತೆಗೆದುಕೊಳ್ಳಲು ಆಸಕ್ತರು https://mybharat.gov.in ವೆಬ್ಸೈಟ್ ಮೂಲಕ ನೋಂದಾಯಿಸಿಕೊಳ್ಳಬಹುದು ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ