Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಸರ ನಾಶದಿಂದ ಪ್ರಕೃತಿ ವಿಕೋಪ - ಹುಸೇನ್ ಭಾಷಾ

ಆಧುನಿಕತೆ,ನಗರೀಕರಣದ ಹೆಸರಿನಲ್ಲಿ ನಾವು ನಮ್ಮ ಪರಿಸರವನ್ನು ನಾಶ ಪಡಿಸುತ್ತಿದ್ದೇವೆ. ಅದರ ಪರಿಣಾಮವೇ ಭೂಮಿಯ ತಾಪಮಾನ ಏರಿಕೆ, ಪ್ರವಾಹ, ಅತಿವೃಷ್ಟಿ-ಅನಾವೃಷ್ಟಿ ಭೂಕಂಪದಂತಹ ಪ್ರಕೃತಿ ವಿಕೋಪಕ್ಕೆ ಕಾರಣವಾಗಿದೆ. ಇದರಿಂದ ಹೊರಬರಲು ನಮಗಿರುವುದು ಒಂದೇ ದಾರಿ ಪರಿಸರ ಸಂರಕ್ಷಣೆ ಮಾಡುವುದು, ನಾವು ಗಿಡ ಮರಗಳನ್ನು ನೆಟ್ಟರೆ ಸಾಲದು ಅವುಗಳನ್ನು ರಕ್ಷಿಸಿ ಪೋಷಿಸಬೇಕು ಎಂದು ಗೆಣಿಕೆಹಾಳ್ ಪ್ರೌಢಶಾಲೆಯ   ಮುಖ್ಯಗುರು ಹೆಚ್.ಹುಸೇನ್ ಬಾಷ ತಿಳಿಸಿದರು.

ಅವರು ಪಟ್ಟಣ ಸಮೀಪದ ಗೆಣಿಕಿಹಾಳ್ ಗ್ರಾಮದ ಸರಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಶಾಲಾ ವತಿಯಿಂದ ವಿಶ್ವ ಪರಿಸರ ದಿನಾಚರಣೆ ನಿಮ್ಮಿತ್ತ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ನಂತರ ಮಾತನಾಡಿದ ಅವರು

ಅಭಿವೃದ್ಧಿ ಹೆಸರಿನಲ್ಲಿ ಪರಿಸರ ವಿನಾಶವಾಗುತ್ತಿದ್ದರೆ ಇಂಗಾಲಡೈಕ್ಷೈಡ್ ಹೆಚ್ಚಾಗಿ ಆಮ್ಲಜನಕ ಕೊರತೆಯುಂಟಾಗಿ ಜೀವನ ನಡೆಸುವುದೇ ಕಷ್ಟಕರ ವಾಗುತ್ತದೆ. ಆಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಮನೆಯ ಮುಂದೆ ಮತ್ತು ಗ್ರಾಮದಲ್ಲಿ ಖಾಲಿಯಿರುವ ಸ್ಥಳಗಳಲ್ಲಿ ಗಿಡಗಳನ್ನು ನೆಟ್ಟು ಪೋಷಿಸುವ ಹೋಣೆಯಾಗಿದೆ. ಆಗ ಮಾತ್ರ ಮುಂದಿನ ಪೀಳಿಗೆ ಮತ್ತು ರೈತಾಪಿ ಜೀವನ ಉಳಿಯಲು ಸಾಧ್ಯ ಎಂದರು.

ನಂತರ ಚಿತ್ರಕಲಾ ಶಿಕ್ಷಕ ಎಂ.ಬಸವರಾಜ ಪರಿಸರ ಸಂರಕ್ಷಣೆ ಕುರಿತು ಮಾತನಾಡಿ 

"ಹಸಿರಿದ್ದರೆ ಉಸಿರು" ಎಂಬ ತತ್ವವನ್ನು ಪ್ರತಿಯೊಬ್ಬರು ಅಳವಡಿಸಿಕೊಂಡರೆ ಈ ಭೂಮಿಯು ಸಸ್ಯಶಾಮಲ ವಾಗುತ್ತದೆ ಎಂದರು.


. ತದನಂತರ ಶಾಲಾ ಆವರಣದಲ್ಲಿ 30 ಸಸಿಗಳನ್ನು ನೆಡುವುದರ ಮೂಲಕ ಪರಿಸರ ಸಂರಕ್ಷಣೆಯ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದರು.

ಈ ಸಂದರ್ಭದಲ್ಲಿ ಶಿಕ್ಷಕ ನಾಗರಾಜ ಮಸೂತಿ, ಸುಬಾನ್ ಅಜಾದ, ಬಡಿಗೇರ ಗೋಪಾಲ, ವಿಜಯ ಕುಮಾರಿ, ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ