Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಸರ ನಾಶದಿಂದ ಪ್ರಕೃತಿ ವಿಕೋಪ - ಹುಸೇನ್ ಭಾಷಾ

ಆಧುನಿಕತೆ,ನಗರೀಕರಣದ ಹೆಸರಿನಲ್ಲಿ ನಾವು ನಮ್ಮ ಪರಿಸರವನ್ನು ನಾಶ ಪಡಿಸುತ್ತಿದ್ದೇವೆ. ಅದರ ಪರಿಣಾಮವೇ ಭೂಮಿಯ ತಾಪಮಾನ ಏರಿಕೆ, ಪ್ರವಾಹ, ಅತಿವೃಷ್ಟಿ-ಅನಾವೃಷ್ಟಿ ಭೂಕಂಪದಂತಹ ಪ್ರಕೃತಿ ವಿಕೋಪಕ್ಕೆ ಕಾರಣವಾಗಿದೆ. ಇದರಿಂದ ಹೊರಬರಲು ನಮಗಿರುವುದು ಒಂದೇ ದಾರಿ ಪರಿಸರ ಸಂರಕ್ಷಣೆ ಮಾಡುವುದು, ನಾವು ಗಿಡ ಮರಗಳನ್ನು ನೆಟ್ಟರೆ ಸಾಲದು ಅವುಗಳನ್ನು ರಕ್ಷಿಸಿ ಪೋಷಿಸಬೇಕು ಎಂದು ಗೆಣಿಕೆಹಾಳ್ ಪ್ರೌಢಶಾಲೆಯ   ಮುಖ್ಯಗುರು ಹೆಚ್.ಹುಸೇನ್ ಬಾಷ ತಿಳಿಸಿದರು.

ಅವರು ಪಟ್ಟಣ ಸಮೀಪದ ಗೆಣಿಕಿಹಾಳ್ ಗ್ರಾಮದ ಸರಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಶಾಲಾ ವತಿಯಿಂದ ವಿಶ್ವ ಪರಿಸರ ದಿನಾಚರಣೆ ನಿಮ್ಮಿತ್ತ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ನಂತರ ಮಾತನಾಡಿದ ಅವರು

ಅಭಿವೃದ್ಧಿ ಹೆಸರಿನಲ್ಲಿ ಪರಿಸರ ವಿನಾಶವಾಗುತ್ತಿದ್ದರೆ ಇಂಗಾಲಡೈಕ್ಷೈಡ್ ಹೆಚ್ಚಾಗಿ ಆಮ್ಲಜನಕ ಕೊರತೆಯುಂಟಾಗಿ ಜೀವನ ನಡೆಸುವುದೇ ಕಷ್ಟಕರ ವಾಗುತ್ತದೆ. ಆಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಮನೆಯ ಮುಂದೆ ಮತ್ತು ಗ್ರಾಮದಲ್ಲಿ ಖಾಲಿಯಿರುವ ಸ್ಥಳಗಳಲ್ಲಿ ಗಿಡಗಳನ್ನು ನೆಟ್ಟು ಪೋಷಿಸುವ ಹೋಣೆಯಾಗಿದೆ. ಆಗ ಮಾತ್ರ ಮುಂದಿನ ಪೀಳಿಗೆ ಮತ್ತು ರೈತಾಪಿ ಜೀವನ ಉಳಿಯಲು ಸಾಧ್ಯ ಎಂದರು.

ನಂತರ ಚಿತ್ರಕಲಾ ಶಿಕ್ಷಕ ಎಂ.ಬಸವರಾಜ ಪರಿಸರ ಸಂರಕ್ಷಣೆ ಕುರಿತು ಮಾತನಾಡಿ 

"ಹಸಿರಿದ್ದರೆ ಉಸಿರು" ಎಂಬ ತತ್ವವನ್ನು ಪ್ರತಿಯೊಬ್ಬರು ಅಳವಡಿಸಿಕೊಂಡರೆ ಈ ಭೂಮಿಯು ಸಸ್ಯಶಾಮಲ ವಾಗುತ್ತದೆ ಎಂದರು.


. ತದನಂತರ ಶಾಲಾ ಆವರಣದಲ್ಲಿ 30 ಸಸಿಗಳನ್ನು ನೆಡುವುದರ ಮೂಲಕ ಪರಿಸರ ಸಂರಕ್ಷಣೆಯ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದರು.

ಈ ಸಂದರ್ಭದಲ್ಲಿ ಶಿಕ್ಷಕ ನಾಗರಾಜ ಮಸೂತಿ, ಸುಬಾನ್ ಅಜಾದ, ಬಡಿಗೇರ ಗೋಪಾಲ, ವಿಜಯ ಕುಮಾರಿ, ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ