Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯುತ್ ಗೋಪುರ ಮುಟ್ಟದಂತೆ ಸೂಚನೆ

ಚಿತ್ರದುರ್ಗ 

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಜಿಲ್ಲೆಯ 220/66/11 ಕೆ.ವಿ ಹಿರಿಯೂರು ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹರಿಯಬ್ಬೆ ಟ್ಯಾಪಿಂಗ್ ಪಾಯಿಂಟ್ ವರೆಗೆ ಹಾಲಿ ಇರುವ 18.928 ಕಿ.ಮೀ ಉದ್ದದ 66 ಕೆ.ವಿ ವಿದ್ಯುತ್ ಪ್ರಸರಣ ಮಾರ್ಗದ ತಂತಿಯನ್ನು ಬದಲಾಯಿಸುವುದು ಹಾಗೂ ಹೆಚ್ಚುವರಿ ಗೋಪುರಗಳನ್ನು ಅಳವಡಿಸುವ ಕಾಮಗಾರಿ ಮತ್ತು 66/11 ಕೆ.ವಿ ಹರಿಯಬ್ಬೆ ಉಪ ಕೇಂದ್ರದಿಂದ ಹರಿಯಬ್ಬೆ ಟ್ಯಾಪಿಂಗ್ ಪಾಯಿಂಟ್ವರೆಗೆ ಹಾಲಿ ಇರುವ 9.628 ಕಿ.ಮೀ ಉದ್ದದ 66 ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗದ ತಂತಿಯನ್ನು ಬದಲಾಯಿಸುವುದು, ಹೆಚ್ಚುವರಿ ಗೋಪುರಗಳನ್ನು ಅಳವಡಿಸುವ ಕಾಮಗಾರಿಯು ಮುಕ್ತಾಯಗೊಂಡಿರುತ್ತದೆ.

ಈ 66 ವಿದ್ಯುತ್ ಮಾರ್ಗವನ್ನು ಜುಲೈ 20ರಂದು ಅಥವಾ ತದನಂತರ ಚೇತನಗೊಳಿಸುವುದರಿಂದ ಈ 66 ಕೆವಿ ಪ್ರಸರಣ ಮಾರ್ಗದ ವಿದ್ಯುತ್ ಗೋಪುರಗಳನ್ನು ಸಾರ್ವಜನಿಕರು ಮುಟ್ಟುವುದಾಗಲಿ, ಹತ್ತುವುದಾಗಲಿ, ಮರದ ರೆಂಬೆ, ಲೋಹದ ತಂತಿಗಳನ್ನು ಹಾಗೂ ಇತರೆ ಯಾವುದೇ ವಸ್ತುಗಳನ್ನು ಮಾರ್ಗದ ಮೇಲೆ ಎಸೆಯುವುದಾಗಲಿ ಮತ್ತು ವಿದ್ಯುತ್ ಗೋಪುರಗಳಿಗೆ ಜಾನುವಾರುಗಳನ್ನು ಕಟ್ಟುವುದಾಗಲಿ ಮಾಡಬಾರದು ಎಂದು ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ.

ಈ ಮಾರ್ಗದ ಮೊಗಸಾಲೆಯಲ್ಲಿ ಅಪಾಯದ ಮಟ್ಟದಲ್ಲಿ ಇರುವ ಮರಗಳನ್ನು ಸುರಕ್ಷತೆಯ ದೃಷ್ಠಿಯಿಂದ ತೆಗೆದು ಹಾಕಲು ನಿಗಮದ ನಿಯಮಾನುಸಾರ ಸೂಕ್ತ ಪರಿಹಾರ ಪಡೆದುಕೊಂಡು ಮರಗಳನ್ನು ತೆಗೆಯದೇ ಇರುವ ಭೂ ಮಾಲೀಕರು ಕೂಡಲೇ ಮಾರ್ಗದ ಮೊಗಸಾಲೆಯಲ್ಲಿರುವ ಮರಗಳನ್ನು ಕಡಿದು ಹಾಕಲು ಅನುಮತಿ ನೀಡಬೇಕು. ಒಂದು ವೇಳೆ ಈ ಸೂಚನೆಯನ್ನು ಉಲ್ಲಂಘಿಸಿದಲ್ಲಿ ಮಾರ್ಗದಿಂದ ಸಾರ್ವಜನಿಕರಿಗೆ ಆಗುವ ಹಾನಿ, ತೊಂದರೆ, ಅಪಘಾತಗಳಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಜವಾಬ್ದಾರಿಯಾಗಿರುವುದಿಲ್ಲ.

ವಿದ್ಯುತ್ ಹಾದುಹೋಗುವ ಪ್ರದೇಶಗಳು: ಮ್ಯಾಕ್ಯೂರಹಳ್ಳಿ, ಬಬ್ಬೂರು, ಹೇಮದಳ, ಅಂಬಲಗೆರೆ, ಬಿದರಕೆರೆ, ಹರಿಯಬ್ಬೆ, ಶಿಡ್ಲಯ್ಯನಕೋಟೆ, ಕ್ಯಾತನಮಳೆ, ಗೊಲ್ಲರಹಟ್ಟಿ ಗೂಳ್ಯ, ರಂಗೇನಹಳ್ಳಿ ಮತ್ತು ಚಂದ್ರಗಿರಿ ಗೊಲ್ಲಹಳ್ಳಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಮಾರ್ಗ ಹಾದು ಹೋಗಲಿದೆ ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಬೃಹತ್ ಕಾಮಗಾರಿ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ