Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

7 ದಿನಗಳಲ್ಲಿ ಫಲಿತಾಂಶ ಪ್ರಕಟ; ವಿಶ್ರೀಕೃವಿವಿ ಐತಿಹಾಸಿಕ ಸಾಧನೆ





ಬಳ್ಳಾರಿ,ಜು.30

ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯವು 2024-25ನೇ ಸಾಲಿನ ಸ್ನಾತಕ ಪದವಿಯ 5ನೇ ಮತ್ತು 6ನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶವನ್ನು ಪರೀಕ್ಷೆ ಪೂರ್ಣಗೊಂಡ 7 ದಿನಗಳಲ್ಲಿ ಪ್ರಕಟಿಸಿದ್ದು, ಐತಿಹಾಸಿಕ ಸಾಧನೆಯಾಗಿದೆ.

ಇದೇ ತಿಂಗಳ 22ರಂದು ಪರೀಕ್ಷೆಗಳು ಮುಗಿದಿರುವ ಬಿ.ಎ., ಬಿ.ಎಸ್ಸಿ., ಬಿ.ಕಾಂ, ಬಿಬಿಎ, ಬಿಸಿಎ ಸ್ನಾತಕ ಕೋರ್ಸ್ ಗಳ ಮೌಲ್ಯಮಾಪನವನ್ನು ಕೇವಲ 7 ದಿನಗಳಲ್ಲಿ ಪೂರ್ಣಗೊಳಿಸಿ ವಿವಿಯು ಫಲಿತಾಂಶಗಳನ್ನು ಹೊರಡಿಸಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಯುಯುಸಿಎಂಎಸ್ ತಂತ್ರಾಂಶದ ಮೂಲಕ ವೀಕ್ಷಿಸಬಹುದಾಗಿದೆ.

ಈ ಮೂಲಕ ಒಟ್ಟು 12532 ವಿದ್ಯಾರ್ಥಿಗಳ ಫಲಿತಾಂಶವನ್ನು ವಾರದೊಳಗೆ ಪ್ರಕಟಿಸಿದ ರಾಜ್ಯದ ಪ್ರಥಮ ವಿಶ್ವವಿದ್ಯಾಲಯವಾಗಿ ಹೊರಹೊಮ್ಮಿದೆ. ವಿಶ್ವವಿದ್ಯಾಲಯ ಆರಂಭಗೊಂಡ 16 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಕಡಿಮೆ ಕಾಲಾವಧಿಯಲ್ಲಿ ಫಲಿತಾಂಶ ಪ್ರಕಟಿಸಿರುವುದು ವಿಶೇಷವಾಗಿದೆ.

ಇದಕ್ಕೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಶ್ರಮಿಸಿರುವ ಸಂಯೋಜಿತ ಕಾಲೇಜುಗಳ ಪ್ರಾಂಶುಪಾಲರು, ಮೌಲ್ಯಮಾಪಕರು ಮತ್ತು ವಿವಿ ಸಿಬ್ಬಂದಿಯನ್ನು ವಿಶ್ವವಿದ್ಯಾಲಯದ ಆಡಳಿತ ವರ್ಗವು ಅಭಿನಂದಿಸಿದೆ.

*ಸ್ನಾತಕ ಕೋರ್ಸ್ ಫಲಿತಾಂಶ ಪ್ರಕಟಿತ ವಿದ್ಯಾರ್ಥಿಗಳ ಸಂಖ್ಯೆ:*

ಬಿ.ಎ-6380, ಬಿಬಿಎ-690, ಬಿ.ಕಾಂ-3454, ಬಿಸಿಎ-996-ಬಿ.ಎಸ್ಸಿ-1012 ಸೇರಿ ಒಟ್ಟು 12532 ವಿದ್ಯಾರ್ಥಿಗಳು.



ಪರೀಕ್ಷಾ ಫಲಿತಾಂಶಗಳನ್ನು ಶೀಘ್ರ ಹೊರಡಿಸುವಿಕೆಯಿಂದ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ಅನುಕೂಲವಾಗುತ್ತದೆ. ವಿದ್ಯಾರ್ಥಿ ಸ್ನೇಹಿ ಪರಿಸರ ಎಲ್ಲೆಡೆ ನಿರ್ಮಿಸುವುದೇ ನಮ್ಮ ಆದ್ಯತೆಯಾಗಿದೆ.

-ಪ್ರೊ. ಎಂ ಮುನಿರಾಜು, ಕುಲಪತಿಗಳು, ವಿಶ್ರೀಕೃವಿವಿ, ಬಳ್ಳಾರಿ.



ಕುಲಪತಿಗಳ ಮಾರ್ಗದರ್ಶನದಲ್ಲಿ ಮೌಲ್ಯಮಾಪನ ಕಾರ್ಯಕ್ಕೆ ವೇಗ ನೀಡಿದ್ದರಿಂದ ತ್ವರಿತ ಫಲಿತಾಂಶ ಪ್ರಕಟಿಸಲು ಸಾಧ್ಯವಾಗಿದೆ. ಇದಕ್ಕೆ ಸಹಕರಿಸಿದ ಎಲ್ಲ ಕಾಲೇಜು ಪ್ರಾಂಶುಪಾಲರಿಗೆ, ಮೌಲ್ಯಮಾಪಕರಿಗೆ ಧನ್ಯವಾದಗಳು.

-ಪ್ರೊ.ಎನ್ ಎಂ ಸಾಲಿ, ಕುಲಸಚಿವರು (ಮೌಲ್ಯಮಾಪನ), ವಿಶ್ರೀಕೃವಿವಿ, ಬಳ್ಳಾರಿ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ