Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಾಂತಿನಿಕೇತನ ಶಾಲೆಯಲ್ಲಿ ಪಾಲಕರ ಪಾದಪೂಜೆ ಕಾರ್ಯಕ್ರಮ.

ಕಾರಟಗಿ : ಪಟ್ಟಣದ ಶಾಂತಿನಿಕೇತನ ಪಬ್ಲಿಕ್ ಶಾಲೆಯಲ್ಲಿ 10 ನೇ ತರಗತಿ ಮಕ್ಕಳ ಪಾಲಕರಿಗೆ ಪಾದಪೂಜೆ ಹಾಗೂ ಬೀಳ್ಕೊಡುಗೆ ಸಮಾರಂಭ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರಟಗಿ ಜೆ ಪಿ ನಗರದ ಶ್ರೀದೇವಿ ದೇವಸ್ಥಾನದ ಅರ್ಚಕರಾದ ಶ್ರೀ ಚನ್ನಬಸಯ್ಯತಾತ ನವರ ಉಪಸ್ಥಿತಿಯಲ್ಲಿ ವಿಧಿಬದ್ದವಾಗಿ ಪಾಲಕರಿಗೆ ಪಾದಪೂಜೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಶ್ರೀ ಚನ್ನಬಸಯ್ಯತಾತ ನವರು ತಂದೆ ತಾಯಿ ಪ್ರತಿಯೊಬ್ಬ ಜೀವನದಲ್ಲಿ ಪೂಜ್ಯನೀಯ ಭಾವನೆ ಹೊಂದಬೇಕು ದೇವರ ಸ್ವರೂಪಿಗಳಾದ ಇವರನ್ನು ಪೂಜಿಸುವದು ಪುಣ್ಯದ ಕೆಲಸ ಎಂದು ಹೇಳಿದರು.

ಪಾಲಕರು ಮಾತನಾಡಿ ಮಕ್ಕಳನ್ನು ಕೇವಲ ಅಭ್ಯಾಸದ ಕಡೆ ಗಮನ ಹರಿಸದೆ ಇಂತಹ ಕಾರ್ಯಕ್ರಮ ಹಮ್ಮಿಕೊಂಡಿರುವ ಈ ಶಾಲೆಯನ್ನು ಪ್ರಶಂಸೆ ಮಾಡಬೇಕು ಎಂದು ಹೇಳಿದರು.

ಸಂಸ್ಥೆ ಅಧ್ಯಕ್ಷರಾದ ಶರಣಪ್ಪ ಅಂಗಡಿ ಮಾತನಾಡಿ ಈಗಿನ ಆಧುನಿಕ ಜೀವನದಲ್ಲಿ ಮಕ್ಕಳಲ್ಲಿ ಕುಟುಂಬ ಮೌಲ್ಯಗಳನ್ನು ಹಾಗೂ ಜನ್ಮನೀಡಿದ ತಂದೆ ತಾಯಿ ಜೀವನದ ಮೌಲ್ಯಗಳನ್ನು ಮಕ್ಕಳಲ್ಲಿ ಬಿತ್ತುವದು ಈ ಕಾರ್ಯಕ್ರಮದ ಉದ್ದೇಶ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಕಾರ್ಯದರ್ಶಿಗಳಾದ ಶರಣಯ್ಯ, ಆಡಳಿತ ಅಧಿಕಾರಿಗಳು ಶಿವಲೀಲಾ ಎಸ್ ಅಂಗಡಿ ಶಿಕ್ಷಕರಾದ ಗಂಗಮ್ಮ, ಬಸವರಾಜ ಅನ್ವರಿ, ಗುರುಪ್ರಸಾದ, ಕುಮಾರಿ ಪಲ್ಲವಿ, ಕುಮಾರಿ ದೀಪಾ ಜಿ, ಪೂಜಾ ಹಾಗೂ,ಭೋದಕ ಮತ್ತು ಭೋದಕೇತರ ಸಿಬ್ಬಂದಿಗಳು ಹಾಗೂ ಪಾಲಕರು ಮಕ್ಕಳು ಪಾಲ್ಗೊಂಡಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ