Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಾಂತಿನಿಕೇತನ ಶಾಲೆಯಲ್ಲಿ ಪಾಲಕರ ಪಾದಪೂಜೆ ಕಾರ್ಯಕ್ರಮ.

ಕಾರಟಗಿ : ಪಟ್ಟಣದ ಶಾಂತಿನಿಕೇತನ ಪಬ್ಲಿಕ್ ಶಾಲೆಯಲ್ಲಿ 10 ನೇ ತರಗತಿ ಮಕ್ಕಳ ಪಾಲಕರಿಗೆ ಪಾದಪೂಜೆ ಹಾಗೂ ಬೀಳ್ಕೊಡುಗೆ ಸಮಾರಂಭ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರಟಗಿ ಜೆ ಪಿ ನಗರದ ಶ್ರೀದೇವಿ ದೇವಸ್ಥಾನದ ಅರ್ಚಕರಾದ ಶ್ರೀ ಚನ್ನಬಸಯ್ಯತಾತ ನವರ ಉಪಸ್ಥಿತಿಯಲ್ಲಿ ವಿಧಿಬದ್ದವಾಗಿ ಪಾಲಕರಿಗೆ ಪಾದಪೂಜೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಶ್ರೀ ಚನ್ನಬಸಯ್ಯತಾತ ನವರು ತಂದೆ ತಾಯಿ ಪ್ರತಿಯೊಬ್ಬ ಜೀವನದಲ್ಲಿ ಪೂಜ್ಯನೀಯ ಭಾವನೆ ಹೊಂದಬೇಕು ದೇವರ ಸ್ವರೂಪಿಗಳಾದ ಇವರನ್ನು ಪೂಜಿಸುವದು ಪುಣ್ಯದ ಕೆಲಸ ಎಂದು ಹೇಳಿದರು.

ಪಾಲಕರು ಮಾತನಾಡಿ ಮಕ್ಕಳನ್ನು ಕೇವಲ ಅಭ್ಯಾಸದ ಕಡೆ ಗಮನ ಹರಿಸದೆ ಇಂತಹ ಕಾರ್ಯಕ್ರಮ ಹಮ್ಮಿಕೊಂಡಿರುವ ಈ ಶಾಲೆಯನ್ನು ಪ್ರಶಂಸೆ ಮಾಡಬೇಕು ಎಂದು ಹೇಳಿದರು.

ಸಂಸ್ಥೆ ಅಧ್ಯಕ್ಷರಾದ ಶರಣಪ್ಪ ಅಂಗಡಿ ಮಾತನಾಡಿ ಈಗಿನ ಆಧುನಿಕ ಜೀವನದಲ್ಲಿ ಮಕ್ಕಳಲ್ಲಿ ಕುಟುಂಬ ಮೌಲ್ಯಗಳನ್ನು ಹಾಗೂ ಜನ್ಮನೀಡಿದ ತಂದೆ ತಾಯಿ ಜೀವನದ ಮೌಲ್ಯಗಳನ್ನು ಮಕ್ಕಳಲ್ಲಿ ಬಿತ್ತುವದು ಈ ಕಾರ್ಯಕ್ರಮದ ಉದ್ದೇಶ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಕಾರ್ಯದರ್ಶಿಗಳಾದ ಶರಣಯ್ಯ, ಆಡಳಿತ ಅಧಿಕಾರಿಗಳು ಶಿವಲೀಲಾ ಎಸ್ ಅಂಗಡಿ ಶಿಕ್ಷಕರಾದ ಗಂಗಮ್ಮ, ಬಸವರಾಜ ಅನ್ವರಿ, ಗುರುಪ್ರಸಾದ, ಕುಮಾರಿ ಪಲ್ಲವಿ, ಕುಮಾರಿ ದೀಪಾ ಜಿ, ಪೂಜಾ ಹಾಗೂ,ಭೋದಕ ಮತ್ತು ಭೋದಕೇತರ ಸಿಬ್ಬಂದಿಗಳು ಹಾಗೂ ಪಾಲಕರು ಮಕ್ಕಳು ಪಾಲ್ಗೊಂಡಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ