Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸೆಪ್ಟಬಂರ್ ತಿಂಗಳಿಂದ ಪೋಡಿ ಅಭಿಯಾನಕ್ಕೆ ಚಾಲನೆ


ರೈತರಿಗೆ ಜಮೀನು ಮಂಜೂರಾಗಿದ್ದರೂ ಪೋಡಿ ದುರಸ್ತಿಯಾಗದಿರಲು ಎರಡು ಪ್ರಮುಖ ಕಾರಣಗಳಿವೆ. ದಶಕಗಳ ಹಿಂದಿನಿಂದಲೂ ನಮ್ಮ ಅಧಿಕಾರಿಗಳು 100 ಎಕರೆ ಜಮೀನಿದ್ದರೆ ಅದಕ್ಕಿಂತ ಹೆಚ್ಚು ವಿಸ್ತೀರ್ಣ ಮಂಜೂರು ಮಾಡಿದ್ದಾರೆ. ಇದೊಂದು ಕಾರಣವಾದರೆ, ಕೆಲವು ಸಂದರ್ಭದಲ್ಲಿ ಸಾಗುವಳಿ ಮಾಡದಂತವರಿಗೂ ಮಂಜೂರು ಮಾಡಿದ್ದಾರೆ. ಇನ್ನೂ ಕೆಲವು ಪ್ರಕರಣಗಳಲ್ಲಿ ಆರ್‌ಟಿಸಿಯಲ್ಲಿ ಮಂಜೂರುದಾರರ ಹೆಸರಿದೆ. ಆದರೆ, ಅವರಿಗೆ ಮಂಜೂರು ಆಗಿರುವ ಬಗ್ಗೆ ಯಾವುದೇ ನಿಖರ ದಾಖಲೆಗಳಿಲ್ಲ. ಮತ್ತಷ್ಟು ಪ್ರಕರಣಗಳಲ್ಲಿ ಮಂಜೂರಿಗೆ ಅರ್ಜಿ ಕೊಟ್ಟಿರುವ ದಾಖಲೆ ಇದೆ. ಆದರೆ, ಮಂಜೂರು ಆಗಿರುವ ದಾಖಲೆ ಇಲ್ಲ.



ಈ ಎರಡು ಪ್ರಮುಖ ಕಾರಣಗಳಿಂದ ಜಮೀನು ಮಂಜೂರಾಗಿದ್ದರೂ ದುರಸ್ತಿಯಾಗಿಲ್ಲ. ಹೀಗಾಗಿ ರೈತರು ಅಂತಹ ಜಮೀನಿನಲ್ಲಿ ಕೃಷಿ ಮಾಡಬಹುದೇ ವಿನಃ ಅವರಿಗೆ ಆ ಭೂಮಿಯಿಂದ ಬೇರೆ ಯಾವುದೇ ಪ್ರಯೋಜನ ಇಲ್ಲ. ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರೂ ಸೇರಿದಂತೆ ಎಲ್ಲಾ ಸಚಿವರ ಒತ್ತಡ ಇದೆ. ಅಲ್ಲದೆ, ರೈತರಿಂದಲೂ ಸಾಕಷ್ಟು ಒತ್ತಡವಿದೆ. ಹೀಗಾಗಿ ಕಳೆದ ಆರೆಂಟು ತಿಂಗಳಿನಿಂದ ಅಧಿಕಾರಿಗಳ ಜೊತೆ ನಿರಂತರ ಚರ್ಚೆ ನಡೆಸಿ ಇದೀಗ ಈ ಸಮಸ್ಯೆಗೆ ಪರಿಹಾರ ನೀಡಲು ಮುಂದಾಗಿದ್ದೇವೆ. ಯಾರಿಗೆ ಪೋಡಿ ಮಾಡಿಕೊಡಲು ಸಾಧ್ಯವೋ ಅವರಿಗೆಲ್ಲಾ ಪೋಡಿ ಮಾಡಿಕೊಡಲೇಬೇಕು ಎಂದು ನಮ್ಮ ಸರ್ಕಾರದ ಸಂಕಲ್ಪ ಮಾಡಿದ್ದು, ಇದಕ್ಕೆಂದು ಪ್ರಾಯೋಗಿಕ ಆ್ಯಪ್ ಸಿದ್ಧಪಡಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ