Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸೆಪ್ಟಬಂರ್ ತಿಂಗಳಿಂದ ಪೋಡಿ ಅಭಿಯಾನಕ್ಕೆ ಚಾಲನೆ


ರೈತರಿಗೆ ಜಮೀನು ಮಂಜೂರಾಗಿದ್ದರೂ ಪೋಡಿ ದುರಸ್ತಿಯಾಗದಿರಲು ಎರಡು ಪ್ರಮುಖ ಕಾರಣಗಳಿವೆ. ದಶಕಗಳ ಹಿಂದಿನಿಂದಲೂ ನಮ್ಮ ಅಧಿಕಾರಿಗಳು 100 ಎಕರೆ ಜಮೀನಿದ್ದರೆ ಅದಕ್ಕಿಂತ ಹೆಚ್ಚು ವಿಸ್ತೀರ್ಣ ಮಂಜೂರು ಮಾಡಿದ್ದಾರೆ. ಇದೊಂದು ಕಾರಣವಾದರೆ, ಕೆಲವು ಸಂದರ್ಭದಲ್ಲಿ ಸಾಗುವಳಿ ಮಾಡದಂತವರಿಗೂ ಮಂಜೂರು ಮಾಡಿದ್ದಾರೆ. ಇನ್ನೂ ಕೆಲವು ಪ್ರಕರಣಗಳಲ್ಲಿ ಆರ್‌ಟಿಸಿಯಲ್ಲಿ ಮಂಜೂರುದಾರರ ಹೆಸರಿದೆ. ಆದರೆ, ಅವರಿಗೆ ಮಂಜೂರು ಆಗಿರುವ ಬಗ್ಗೆ ಯಾವುದೇ ನಿಖರ ದಾಖಲೆಗಳಿಲ್ಲ. ಮತ್ತಷ್ಟು ಪ್ರಕರಣಗಳಲ್ಲಿ ಮಂಜೂರಿಗೆ ಅರ್ಜಿ ಕೊಟ್ಟಿರುವ ದಾಖಲೆ ಇದೆ. ಆದರೆ, ಮಂಜೂರು ಆಗಿರುವ ದಾಖಲೆ ಇಲ್ಲ.



ಈ ಎರಡು ಪ್ರಮುಖ ಕಾರಣಗಳಿಂದ ಜಮೀನು ಮಂಜೂರಾಗಿದ್ದರೂ ದುರಸ್ತಿಯಾಗಿಲ್ಲ. ಹೀಗಾಗಿ ರೈತರು ಅಂತಹ ಜಮೀನಿನಲ್ಲಿ ಕೃಷಿ ಮಾಡಬಹುದೇ ವಿನಃ ಅವರಿಗೆ ಆ ಭೂಮಿಯಿಂದ ಬೇರೆ ಯಾವುದೇ ಪ್ರಯೋಜನ ಇಲ್ಲ. ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರೂ ಸೇರಿದಂತೆ ಎಲ್ಲಾ ಸಚಿವರ ಒತ್ತಡ ಇದೆ. ಅಲ್ಲದೆ, ರೈತರಿಂದಲೂ ಸಾಕಷ್ಟು ಒತ್ತಡವಿದೆ. ಹೀಗಾಗಿ ಕಳೆದ ಆರೆಂಟು ತಿಂಗಳಿನಿಂದ ಅಧಿಕಾರಿಗಳ ಜೊತೆ ನಿರಂತರ ಚರ್ಚೆ ನಡೆಸಿ ಇದೀಗ ಈ ಸಮಸ್ಯೆಗೆ ಪರಿಹಾರ ನೀಡಲು ಮುಂದಾಗಿದ್ದೇವೆ. ಯಾರಿಗೆ ಪೋಡಿ ಮಾಡಿಕೊಡಲು ಸಾಧ್ಯವೋ ಅವರಿಗೆಲ್ಲಾ ಪೋಡಿ ಮಾಡಿಕೊಡಲೇಬೇಕು ಎಂದು ನಮ್ಮ ಸರ್ಕಾರದ ಸಂಕಲ್ಪ ಮಾಡಿದ್ದು, ಇದಕ್ಕೆಂದು ಪ್ರಾಯೋಗಿಕ ಆ್ಯಪ್ ಸಿದ್ಧಪಡಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ