Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜನಸಂಖ್ಯೆ ಹೆಚ್ಚಳದಿಂದ ಬಡತನ ಹಾಗೂ ನಿರುದ್ಯೋಗ -ವೈದ್ಯಾಧಿಕಾರಿ ಬಿ.ವಿ.ಗಿರೀಶ್



ಚಿತ್ರದುರ್ಗಜೂನ್.23:

ಜನಸಂಖ್ಯೆ ಹೆಚ್ಚಳದಿಂದ ಬಡತನ, ನಿರುದ್ಯೋಗ ಪ್ರಮಾಣವು ಹೆಚ್ಚಾಗುತ್ತದೆ ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಬಿ.ವಿ.ಗಿರೀಶ್ ಹೇಳಿದರು.

ಚಿತ್ರದುರ್ಗ ತಾಲೂಕಿನ ವಿಜಾಪುರ ಗ್ರಾಮದ ಶಬರ ಶಂಕರ ವಸತಿ ಪ್ರೌಢಶಾಲೆಯಲ್ಲಿ ಸೋಮವಾರ ವಿಶ್ವ ಜನಸಂಖ್ಯಾ ದಿನಾಚರಣೆ ಪ್ರಯುಕ್ತ, ಆಯೋಜಿಸಲಾದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜನಸಂಖ್ಯೆ ಹೆಚ್ಚಿದಂತೆ ಆಹಾರ, ನೀರು, ಬಟ್ಟೆ, ಕೊರತೆಯಾಗಿ ವಾಯು ಜಲ ಮಾಲಿನ್ಯ, ಶಿಕ್ಷಣದ ಕೊರತೆ ಉಂಟಾಗಿ ಸಾಂಕ್ರಾಮಿಕ ರೋಗಗಳು ತಲೆದೋರುತ್ತವೆ. ಜನಸಂಖ್ಯೆ ನಿಯಂತ್ರಣ ಮಾಡಿದಲ್ಲಿ ಸಾಂಕ್ರಾಮಿಕ ರೋಗಗಳನ್ನು ದೂರ ಮಾಡಬಹುದು. ಮದುವೆಯ ವಯಸ್ಸು ಹೆಣ್ಣಿಗೆ 18 ವರ್ಷ ಮತ್ತು ಗಂಡಿಗೆ 21 ವರ್ಷ, ಬಾಲ್ಯಾವಸ್ಥೆಯಲ್ಲಿ ಇದರ ಬಗ್ಗೆ ಮಾಹಿತಿ ತಿಳಿದು ಮುಂದಿನ ಭವಿಷ್ಯ ರೂಪಿಸಿಕೊಳ್ಳಬೇಕೆಂದರು. .

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ ಮಾತನಾಡಿ ಜನಸಂಖ್ಯಾ ಹೆಚ್ಚಳ ದೇಶಾಭಿವೃದ್ಧಿಗೆ ಮಾರಕ ಕುಟುಂಬದ ಗಾತ್ರ ಹೆಚ್ಚು ಇದ್ದಲ್ಲಿ ಶಿಕ್ಷಣದ ಕೊರತೆ, ಅರಣ್ಯನಾಶ, ಆಹಾರದ ಕೊರತೆ, ವಾಯು, ನೆಲ, ಜಲ ಕಲುಷಿತಗೊಂಡು ಜೀವಸಂಕುಲಕ್ಕೆ ಭಾರಿ ಹೊಡೆತ ಉಂಟಾಗುತ್ತದೆ. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ವಿದ್ಯಾರ್ಥಿ ದೆಸೆಯಲ್ಲಿ ಜನಸಂಖ್ಯಾ ಶಿಕ್ಷಣ ತುಂಬಾ ಅವಶ್ಯಕವಾದದ್ದು, ಜನಸಂಖ್ಯಾ ಸ್ಫೂಟಕ್ಕೆ ಬಾಲ್ಯ ವಿವಾಹವು ಒಂದು ಕಾರಣ. ಯಾವುದೇ ಒತ್ತಡಕ್ಕೆ ಮಣಿಯಬೇಡಿ ಬಾಲ್ಯ ವಿವಾಹಕ್ಕೆ ಆಸ್ಪದ ಕೊಡಬೇಡಿ ಎಂದರು

ಉಪಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಗೌರಮ್ಮ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಜಾನಕಿ, ಮುಖ್ಯೋಪಾಧ್ಯಾಯ ಸಣ್ಣತಿಪ್ಪಯ್ಯ, ಆರೋಗ್ಯ ನಿರೀಕ್ಷಣಾಧಿಕಾರಿ ಚಂದ್ರಶೇಖರ್, ಆಶಾ ಕಾರ್ಯಕರ್ತೆ ಮಮತಾ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ