Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ 2.0): ನಿವೇಶನ ರಹಿತರಿಗೆ ಜೂ.30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ

ಕೊಪ್ಪಳ ಜೂನ್ 04ಕೊಪ್ಪಳ ನಗರ ವ್ಯಾಪ್ತಿಯಲ್ಲಿ ವಾಸವಾಗಿರುವ ಸ್ವಂತ ಮನೆ ಹಾಗೂ ನಿವೇಶನ ರಹಿತ ಕುಟುಂಬಗಳಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ 2.0) ಅಡಿಯಲ್ಲಿ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದ್ದು, ಫಲಾನುಭವಿಗಳ ಸಮೀಕ್ಷೆ ಮತ್ತು ಅರ್ಜಿ ಸಲ್ಲಿಕೆ ಅವಧಿಯನ್ನು ಜೂನ್ 30, 2026ರವರೆಗೆ ವಿಸ್ತರಿಸಲಾಗಿದೆ.
ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ, ಬೆಂಗಳೂರು ವತಿಯಿಂದ ಹೊರಡಿಸಿರುವ ಸೂಚನೆಯಂತೆ, ಭಾರತ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ 2.0) ಯೋಜನೆಯಡಿ ರಾಜ್ಯದ ನಗರ ಪ್ರದೇಶಗಳಲ್ಲಿರುವ ವಸತಿ ಹಾಗೂ ನಿವೇಶನ ರಹಿತ ಕುಟುಂಬಗಳ ಸಮೀಕ್ಷೆ ಕಾರ್ಯ ನಡೆಯುತ್ತಿದ್ದು.
ಕೊಪ್ಪಳ ನಗರ ವ್ಯಾಪ್ತಿಯಲ್ಲಿ ಸ್ವಂತ ಮನೆ ಅಥವಾ ನಿವೇಶನ ಹೊಂದಿರದ ಅರ್ಹ ಫಲಾನುಭವಿಗಳು ನಿಗಮದ ಆನ್‌ಲೈನ್ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಿ, ಅದರ ಸ್ವೀಕೃತಿ ಪತ್ರದೊಂದಿಗೆ ಅಗತ್ಯ ದಾಖಲಾತಿಗಳನ್ನು ಸಂಬಂಧಿತ ಕಚೇರಿಗೆ ಸಲ್ಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಅರ್ಜಿ ಸಲ್ಲಿಸಲು ಕುಟುಂಬದ ಪಡಿತರ ಚೀಟಿ, ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಸ್ವಂತ ಮನೆ ಅಥವಾ ನಿವೇಶನ ಹೊಂದಿಲ್ಲ ಎಂಬುದಕ್ಕೆ ನ್ಯಾಯಾಲಯದ ಅಫಿಡವಿಟ್, ಬಾಡಿಗೆ ಮನೆಯಲ್ಲಿ ವಾಸವಾಗಿರುವುದನ್ನು ದೃಢೀಕರಿಸುವ ವಿದ್ಯುತ್ ಬಿಲ್ ಹಾಗೂ ಇತ್ತೀಚಿನ ಭಾವಚಿತ್ರಗಳನ್ನು ಸಲ್ಲಿಸಬೇಕು.
ಅರ್ಹ ಫಲಾನುಭವಿಗಳು ಜೂನ್ 30 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು. ನಿಗದಿತ ಅವಧಿಯ ನಂತರ ಸಲ್ಲಿಸಲಾದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ ಎಂದು ಕೊಪ್ಪಳ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ 2.0): ನಿವೇಶನ ರಹಿತರಿಗೆ ಜೂ.30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶಮುಂಗಾರು ಮಳೆ: ಸಮನ್ವಯತೆಯಿಂದ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಸಿ ನಾಗೇಂದ್ರ ಪ್ರಸಾದ್.ಕೆ ನಿರ್ದೇಶನಶಿವಮೊಗ್ಗದಲ್ಲಿ ಜೂ.5 ರ ಸಂಜೆ ವಾಯುದಾಳಿ ಮುನ್ನೆಚ್ಚರಿಕೆ ಅಣಕು ಪ್ರದರ್ಶನ : ಸಾರ್ವಜನಿಕರಲ್ಲಿ ಆತಂಕ ಬೇಡಇಂದು ಸಂಜೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ; ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರಉತ್ತಮ ಅಭ್ಯಾಸ-ಹವ್ಯಾಸಗಳನ್ನು ಯುವಜನತೆ ಬೆಳಿಸಿಕೊಳ್ಳಬೇಕು : ನ್ಯಾ.ಮಂಜುನಾಥ ಜಿ ಎಬಾಲಕಾರ್ಮಿಕರನ್ನು ಶಿಕ್ಷಣದ ಮುಖ್ಯವಾಹಿನಿಗೆ ಕರೆತರಲು ಸೂಚನೆ : ಪ್ರಭುಲಿಂಗ ಕವಳಿಕಟ್ಟಿಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಮೂಲ್ಯ ಕೃತಿಗಳ ಮರು ಮುದ್ರಣ: ಸಾರ್ವಜನಿಕರಿಂದ ಅಭಿಪ್ರಾಯಕ್ಕೆ ಆಹ್ವಾನಕುರುಗೋಡು ಪುರಸಭೆ: ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತಗೊಳಿಸಲು ಹಠಾತ್ ದಾಳಿ ಹಾಗೂ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಲು ಡಿಸಿ ನಾಗೇಂದ್ರ ಪ್ರಸಾದ್.ಕೆ ಸೂಚನೆಗಮನ ಸೆಳೆದ ಈಜು ಸ್ಪರ್ಧೆ