Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅರ್ಥಪೂರ್ಣವಾಗಿ ಗಣರಾಜ್ಯೋತ್ಸವ ಆಚರಣೆಗೆ ಜಿಲ್ಲಾಡಳಿತದ ಸಿದ್ಧತೆ


ಧಾರವಾಡ ಜನವರಿ 03: ಬರುವ ಜನವರಿ 26 ರಂದು ಜರುಗುವ ಗಣರಾಜ್ಯೋತ್ಸವವನ್ನು ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದ್ದು, ಪೊಲೀಸ್, ಶಿಕ್ಷಣ ಹಾಗೂ ಇತರ ಇಲಾಖೆಗಳು ತಮಗೆ ವಹಿಸಿದ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಹೇಳಿದರು.



ಅವರು ಇಂದು ಮಧ್ಯಾಹ್ನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜನವರಿ 26 ರ ಗಣರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಿದ್ಧತಾ ಸಭೆ ಜರುಗಿಸಿ ಅಧ್ಯಕ್ಷತೆ ವಹಿಸಿ, ಮಾತನಾಡಿದರು.



ಗಣರಾಜ್ಯೋತ್ಸವದಂದು ಬೆಳಿಗ್ಗೆ 7:30 ಗಂಟೆಗೆ ಶಾಲಾ-ಕಾಲೇಜುಗಳಲ್ಲಿ, ಸರಕಾರಿ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಿ, 8:30 ಗಂಟೆಗೆ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕರು, ಸರಕಾರಿ ನೌಕರರು ಸೇರಬೇಕು. 8:55 ಗಂಟೆಗೆ ಮುಖ್ಯ ಅತಿಥಿಗಳಾಗಿರುವ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸುತ್ತಾರೆ. 9 ಗಂಟೆಗೆ ಮುಖ್ಯ ಅತಿಥಿಗಳಿಂದ ರಾಷ್ಟ್ರೀಯ ಧ್ವಜಾರೋಹಣ ಮತ್ತು ವಿವಿಧ ದಳಗಳ ವೀಕ್ಷಣೆ ಜರುಗುತ್ತದೆ.



ಬೆಳಿಗ್ಗೆ 9:15 ಗಂಟೆಗೆ ಮುಖ್ಯ ಅತಿಥಿಗಳಾದ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಜನತೆಗೆ ಸ್ವಾತಂತ್ರ್ಯೋತ್ಸವದ ಸಂದೇಶ ನೀಡುತ್ತಾರೆ. ನಂತರ ಸಚಿವರು ವಿವಿಧ ದಳಗಳಿಂದ ಗೌರವ ರಕ್ಷೆ ಸ್ವೀಕರಿಸುತ್ತಾರೆ ಎಂದು ಅವರು ಹೇಳಿದರು.



ಮುಖ್ಯ ಅತಿಥಿಗಳಿಗೆ ಗೌರವ ರಕ್ಷೆ ನೀಡುವ ವಿದ್ಯಾರ್ಥಿ ಹಾಗೂ ವಿವಿಧ ಇಲಾಖೆಗಳ ದಳಗಳ ಆಯ್ಕೆ ಮತ್ತು ತರಬೇತಿಯನ್ನು ಪೆÇೀಲೀಸ್ ಇಲಾಖೆಯಿಂದ ಮಾಡಲಾಗುತ್ತದೆ. ಕ್ರೀಡಾಂಗಣ ಸಿದ್ಧತೆ ಸೇರಿದಂತೆ ವಿವಿಧ ಕಾರ್ಯಗಳನ್ನು ಇಲಾಖೆಗಳಿಗೆ ಹಂಚಿಕೆ ಮಾಡಲಾಗಿದ್ದು, ಎಲ್ಲರೂ ಅಚ್ಚುಕಟ್ಟಾಗಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ತಿಳಿಸಿದರು.



ವೇದಿಕೆಯಲ್ಲಿದ್ದ ಎಎಸ್ಪಿ ನಾರಾಯಣ್ ಬರಮನಿ ಅವರು ಮಾತನಾಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಬಿ. ಎಸ್. ಮುಗನೂರಮಠ ಸಹಾಯ ಪೆÇಲೀಸ್ ಆಯುಕ್ತರಾದ ವಿಜಯಕುಮಾರ್ ಟಿ., ಪ್ರಶಾಂತ ಸಿದ್ದನಗೌಡರ, ಲೋಕೋಪಯೋಗಿ, ಮಹಾನಗರ ಪಾಲಿಕೆ, ಶಾಲಾ ಶಿಕ್ಷಣ, ಪದವಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ