Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಖಾಲಿ ಬಿಂದಿಗೆ ಹಿಡಿದು ನೀರಿಗಾಗಿ ಪ್ರತಿಭಟನೆ......ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ತ್ವರಿತ ಸ್ಪಂದನೆ ಅಗತ್ಯ...

ಸಿರುಗುಪ್ಪ : ಆ 27 ಪಟ್ಟಣದ ತೆಕ್ಕಲಕೋಟೆಯಲ್ಲಿ 15 ದಿನಗಳಾದರೂ ಸರಿಯಾಗಿ ನೀರು ಪೂರೈಕೆ ಮಾಡುತ್ತಿಲ್ಲ ಎಂದು ಗ್ರಾಮಸ್ಥರು ಖಾಲಿ ಬಿಂದಿಗೆ ಗಳೊಂದಿಗೆ ತೆಕ್ಕಲಕೋಟೆ , ಪಟ್ಟಣ ಪಂಚಾಯತಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಅಧಿಕಾರಿಗಳು, ಪಟ್ಟಣಪಂಚಾಯತಿ ಸದಸ್ಯರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಅವರ ಬೇಜವಾಬ್ದಾರಿಯಿಂದಲೇ ನೀರಿನ ಸಮಸ್ಯೆಯಾಗಿದೆ ಎಂದು ಸ್ಥಳೀಯರು ಆರೋಪಿಸಿದರು.

77777

5 ನೇ ವಾರ್ಡ್ ನ ಕೆಲ ಮನೆಗಳು ಸ್ವಲ್ಪ ಎತ್ತರ ಪ್ರದೇಶ ದಲ್ಲಿರುವುದರಿಂದ ನೀರು ಸರಬರಾಜು ಸರಿಯಾಗಿ ಆಗುತ್ತಿಲ್ಲ,ನೀರುಬಿಡುವ ಸಮಯದಲ್ಲಿವಿದ್ಯುತ್ ಕಡಿತಗೊಳಿಸಲಾಗುತ್ತಿದೆ, ಹಾಗೂ ವಾರ್ಡ್ ನಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಇದ್ದು ಇಲ್ಲದಂತಾಗಿದೆ. ಕಾರಣ ಘಟಕವು ಬೇರೊಬ್ಬರ ಜಾಗದಲ್ಲಿ ನಿರ್ಮಾಣವಾಗಿದ್ದು ಕಾಂಪೌಂಡ್ ಕಟ್ಟಲಾಗಿದೆ ಇದರಿಂದಾಗಿ ನೀರಿನ ತೊಂದರೆ ಮತ್ತಷ್ಟು ಹೆಚ್ಚಾಗಿದೆ, ವಾಟರ್‌ಮ್ಯಾನ್‌ಗೆ ದೂರವಾಣಿ ಕರೆ ಮಾಡಿದರೆ ಫೋನನ್ನು ಸ್ವೀಕರಿಸುವುದಿಲ್ಲ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷರಿಗೆ, ಮುಖ್ಯ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಲಾಯಿತು.

ಸ್ಥಳೀಯರಾದ ಹೆಚ್ ಜಾಲಲಿ, ಸಾಯಿಬಣ್ಣ ಕೆ, ರಬ್ಬಾನಿ ಮಾತನಾಡಿ, ನೀರಿನ ಸಮಸ್ಯೆ ತುಂಬಾ ಕಾಡುತ್ತಲಿದೆ. ಹೆಚ್ಚು ದಿನಗಳ ಕಾಲ ನೀರನ್ನು ಶೇಕರಿಸಿಡುವುದರಿಂದ ಕೀಟಗಳು ಉದ್ಭವವಾಗುತ್ತಿದ್ದು ಅಲ್ಲದೇ ಈಗ ಮಳೆಗಾಲ ಆರಂಭವಾಗಿದೆ. ಚರಂಡಿಗಳು ಸ್ವಚ್ಛತೆ ಇಲ್ಲದೆ ದುರ್ವಾಸನೆ, ಕಲುಷಿತ ನೀರು ಹರಿದು ಬರುತ್ತಿರುವುದರಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿ ನಮ್ಮನ್ನು ಕಾಡುತ್ತಲಿದೆ. ಅಲ್ಲದೆ, ಚರಂಡಿ ವ್ಯವಸ್ಥೆ ಇರುವ ಕಡೆ ಹೂಳು ತುಂಬಿಕೊಂಡಿವೆ ಎಂದು ಆರೋಪಿಸಿದರು. ಪ. ಪಂ ಅಧ್ಯಕ್ಷರಾದ ಎಸ್. ಆನಂದ ರವರು ಮಾತನಾಡಿ ಸಮಸ್ಯೆ ಯನ್ನು ಆದಷ್ಟು ಬೇಗ ಬಗೆಹರಿಸುದಾಗಿ ಅಶ್ವಾಸನೆ ನೀಡಿದರು.

ಈ ಸಂದರ್ಭದಲ್ಲಿ ಪಟ್ಟಣದ ನಿವಾಸಿಗಳಿಗಳಾದ ರಬ್ಬಾನಿ,ಕಲಂದರ್, ಸುಭಾನ್, ಮೈಭು, ಹಸ್ಲಾಮ್, ಹುಸೇನಿ,ಸಾಯಿಬಣ್ಣ, ಭಾಷಾ, ರಫೀಕ್, ರಂಜಾಸಾಬ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ