Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿಯಲ್ಲಿಯೇ ಮೆಗಾಡೇರಿ ನಿರ್ಮಾಣ: ರಾಘವೇಂದ್ರ ಹಿಟ್ನಾಳ್





ಬಳ್ಳಾರಿ,ಆ.09

ಬಳ್ಳಾರಿ ಜಿಲ್ಲೆಯಲ್ಲಿಯೇ ಮೆಗಾಡೇರಿ ನಿರ್ಮಿಸಲಾಗುವುದು ಎಂದು ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ನೂತನ ಅಧ್ಯಕ್ಷ ಹಾಗೂ ಶಾಸಕರಾದ ರಾಘವೇಂದ್ರ ಹಿಟ್ನಾಳ್ ಹೇಳಿದರು.

ಶುಕ್ರವಾರದಂದು ನಗರದ ಕೆಎಂಎಫ್‌ನ ಡೈರಿ ಆಡಳಿತ ಮಂಡಳಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮೆಗಾಡೇರಿ ನಿರ್ಮಾಣಕ್ಕೆ ಬಳ್ಳಾರಿ ತಾಲ್ಲೂಕಿನ ಕೊಳಗಲ್ಲು ಗ್ರಾಮದ ಬಳಿಯ 15 ಎಕರೆ ಪ್ರದೇಶವನ್ನು ಈಗಾಗಲೇ ಗುರುತಿಸಲಾಗಿದ್ದು, ಈಗಾಗಲೇ ಜಿಲ್ಲಾಡಳಿತಕ್ಕೆ ನೀಡಬೇಕಿರುವ 2.92 ಕೋಟಿ ರೂ. ಹಣ ನೀಡುವ ಬಗ್ಗೆ ನಿರ್ದೇಶಕ ಆಡಳಿತ ಮಂಡಳಿ ಸಭೆಯಲ್ಲಿ ಅನುಮೋದಿಸಲಾಗಿದೆ. ದೇಶದಲ್ಲಿಯೇ ಮಾದರಿ ಮೆಗಾಡೇರಿಯನ್ನಾಗಿ ಬಳ್ಳಾರಿಯಲ್ಲಿ ಸ್ಥಾಪಿಸಲಾಗುವುದು ಎಂದರು.

ರಾಬಕೊವಿ ವ್ಯಾಪ್ತಿಯಲ್ಲಿ ಹಾಲು ಉತ್ಪಾದನೆಗೆ ಹೆಚ್ಚಿನ ಸಹಕಾರ ನೀಡಲಾಗುವುದು. ಈಗಾಗಲೇ ಕೆಎಂಎಫ್ ಮೂಲಕ ಹೊರಗುತ್ತಿಗೆ ಆಧಾರದ ಮೇಲೆ ಪಶು ವೈದ್ಯಾಧಿಕಾರಿಗಳನ್ನು ನೇಮಿಸಿ ಜಿಲ್ಲಾವಾರು ಹಂಚಿಕೆ ಮಾಡಲಾಗಿದೆ ಎಂದರು.

ಪ್ರಸ್ತುತ ರಾಬಕೊವಿ ಜಿಲ್ಲಾ ಹಾಲು ಒಕ್ಕೂಟವು 2.43 ಲಕ್ಷ ಲೀ. ಹಾಲು ಉತ್ಪಾದನೆ ಇದೆ. ಅದರಲ್ಲಿ ಬಳ್ಳಾರಿ ಜಿಲ್ಲೆಯು 10 ಸಾವಿರ ಲೀ., ವಿಜಯನಗರ ಜಿಲ್ಲೆಯು 1.12 ಲಕ್ಷ ಲೀ., ಕೊಪ್ಪಳ ಜಿಲ್ಲೆಯು 70 ಸಾವಿರ ಲೀ ಮತ್ತು ರಾಯಚೂರು ಜಿಲ್ಲೆಯು 26 ಸಾವಿರ ಲೀ. ಉತ್ಪಾದನೆ ಇದೆ ಎಂದು ತಿಳಿಸಿದ ಅವರು, ನಾಲ್ಕು ಜಿಲ್ಲೆಗಳಲ್ಲಿ ಹಾಲಿನ ಉತ್ಪಾದನೆ ಹೆಚ್ಚಿಸಲು ಹಲವಾರು ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.

ರಾಬಕೋವಿ ಜಿಲ್ಲಾ ಹಾಲು ಒಕ್ಕೂಟಗಳ ಡೇರಿಗಳ ನಿರ್ವಹಣೆಗೆ ಅನುದಾನ ಮೀಸಲಿರಿಸಲಾಗಿದೆ. ಬಳ್ಳಾರಿ ಡೇರಿಗೆ 1 ಕೋಟಿ ರೂ., ಕೊಪ್ಪಳದ ಬೂದುಗುಂಪಾ ಡೇರಿಗೆ ಸುಮಾರು 4 ರಿಂದ 5 ಕೋಟಿ ರೂ. ಹಾಗೂ ರಾಯಚೂರಿಗೆ ಡೇರಿಗೆ ಕೆಕೆಆರ್‌ಡಿಬಿಯ ಮ್ಯಾಕ್ರೋ ಯೋಜನೆಯಡಿ ರೂ.10 ಕೋಟಿ ಮನವಿ ಸಲ್ಲಿಸಲಾಗಿದೆ ಎಂದರು.

ಈಗಾಗಲೇ ನಾಲ್ಕು ಜಿಲ್ಲೆಗಳಲ್ಲಿ 860 ಸೊಸೈಟಿಗಳಿವೆ. ಇದರಲ್ಲಿ ಹಲವು ಸೊಸೈಟಿಗಳು ಕಾರ್ಯನಿರ್ವಹಿಸುತ್ತಿಲ್ಲ. ಮುಂಬರುವ ದಿನಗಳಲ್ಲಿ ಪ್ರತಿ ತಾಲ್ಲೂಕಿನಲ್ಲಿ ಮೂರು ಸೊಸೈಟಿಗಳನ್ನು ಸ್ಥಾಪಿಸಲಾಗುವುದು. ಒಟ್ಟಾರೆಯಾಗಿ ಹಾಲಿನ ಉತ್ಪಾದನೆಯನ್ನು 2.43 ಲಕ್ಷ ಲೀಟರ್ ನಿಂದ 5 ಲಕ್ಷ ಲೀಟರ್ ಗೆ ಹೆಚ್ಚಿಸುವ ಗುರಿಯನ್ನು ಒಂದಲಾಗಿದೆ ಎಂದರು.

ಮೆಗಾಡೇರಿ ನಿರ್ಮಾಣದ ಕಾಮಗಾರಿಯ ಭೂಮಿಪೂಜೆ ಕಾರ್ಯ ನೆರವೇರಿಸಲು ಕ್ರಿಯಾಯೋಜನೆ ಹಂತ-ಹAತವಾಗಿ ಕಾರ್ಯರೂಪಕ್ಕೆ ತಂದು ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಹೇಳಿದರು.

ರಾಬಕೊವಿ ಒಕ್ಕೂಟದ ಕಚೇರಿಯಲ್ಲಿ ಮೊದಲ ಬಾರಿಗೆ ಆಡಳಿತ ಮಂಡಳಿಯ ನಿರ್ದೇಶಕರ ಸಭೆ ನಡೆಸಲಾಗಿದೆ. ರೈತರಿಗೆ ಅನುಕೂಲವಾಗುವಂತಹ ಹಲವಾರು ಅಭಿವೃದ್ಧಿದಾಯಕ ವಿಷಯಗಳನ್ನು ಚರ್ಚಿಸಲಾಗಿದೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್ ಸೇರಿದಂತೆ ಇತರರೊಡನೆ ಕೊಳಗಲ್ಲು ಗ್ರಾಮದಲ್ಲಿ ಮೇಗಾಡೇರಿ ಸ್ಥಾಪಿಸಲು ಗುರುತಿಸಿದ ಸ್ಥಳವನ್ನು ಪರಿಶೀಲನೆ ಮಾಡಿದರು.

ಈ ಸಂದರ್ಭದಲ್ಲಿ ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಕಾರಟಗಿಯ ಎನ್.ಸತ್ಯನಾರಾಯಣ, ವ್ಯವಸ್ಥಾಪಕ ನಿರ್ದೇಶಕ ಬಿ.ಆರ್.ಪ್ರಭುಶಂಕರ್ ಹಾಗೂ ಇತರರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ