Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಯಚೂರ ಕೋಟೆ ಹತ್ತಿರದ ರಾಜಕಾಲುವೆಯ ದುರಸ್ಥಿ ಕಾರ್ಯದ ಪರಿಶೀಲನೆ

 
ರಾಯಚೂರು ಜೂನ್ 6 ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ಜೂನ್ 5ರಂದು ಸಂಜೆ ರಾಯಚೂರ ನಗರದ ಕೋಟೆ ಹತ್ತಿರದ ರಾಜಕಾಲುವೆ ಪ್ರದೇಶಕ್ಕೆ ಭೇಟಿ ನೀಡಿ ಕಾಲುವೆಯ ದುರಸ್ಥಿ ಕಾರ್ಯದ ವೀಕ್ಷಣೆ ನಡೆಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ಪಾಂಡ್ವೆ, ರಾಯಚೂರ ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೋಹಾಪತ್ರ ಅವರೊಂದಿಗೆ ರಾಜಕಾಲುವೆಯ ಸ್ಥಳಕ್ಕೆ ಭೇಟಿ ನೀಡಿ, ಜೆಸಿಬಿಗಳಿಂದ ನಡೆದ ಕಾಲುವೆಯ ಸ್ವಚ್ಚತಾ ಕಾರ್ಯವನ್ನು ಪರಿಶೀಲಿಸಿದರು.
ಕಾಲುವೆಯ ಸ್ವಚ್ಛತಾ ಕಾರ್ಯವು ಈಗ ಆರಂಭವಾಗಿದ್ದರಿAದಾಗಿ ರಾಯಚೂರ ನಿಗರದ ನಿವಾಸಿಗಳಿಗೆ ಸಂತಸ ತಂದಿದೆ. ಈ ಕಾಲುವೆಯ ಸ್ವಚ್ಛತಾ ಕಾರ್ಯವು ವೈಜ್ಞಾನಿಕ ರೀತಿಯಲ್ಲಿ ಆಗಬೇಕು. ಇಲ್ಲಿ ಮತ್ತೆ ಗಲೀಜು ಸೇರಿದಂತೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸಮಾಜ ಸೇವಕರಾದ ಮೋಸಿನ್ ಖಾನ್ ಅವರು ಇದೆ ವೇಳೆ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದರು.
ಈಗ ಜೆಸಿಬಿಗಳಿಂದ ಕಸ ಎತ್ತು ಹಾಕಿ ಸರಿಪಡಿಸುತ್ತಿರುವುದು ಸರಿ ಇದೆ. ಬಹುವರ್ಷಗಳ ನಂತರ ಈ ಕೆಲಸ ಆರಂಭವಾಗಿದ್ದು ಕಂಡು ನಮಗೆ ಬಹಳಷ್ಟು ಖುಷಿ ಆಗಿದೆ. ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆಯು ರಾಯಚೂರ ನಗರದ ಜನರು ಹೆಮ್ಮೆ ಪಡುವಂತಹ ಕೆಲಸ ಮಾಡುತ್ತಿದೆ. ಈ ರೀತಿ ಕಸವನ್ನು ಎತ್ತುವ ಕಾರ್ಯ ಮತ್ತೆ ಮತ್ತೆ ಆಗದಂತೆ ಮತ್ತೆ ಮತ್ತೆ ಕಸ ತುಂಬದ ಹಾಗೆ ಅತ್ಯಂತ ವೈಜ್ಞಾನಿಕ ರೀತಿಯಲ್ಲಿ ಈ ರಾಜಕಾಲುವೆಯ ದುರಸ್ತಿ ಮತ್ತು ಕಾಲುವೆಯನ್ನು ಸರಿಪಡಿಸುವ ಕಾರ್ಯ ನಡೆಯಬೇಕು. ಇಡೀ ರಾಜ್ಯಕ್ಕೆ ಮಾದರಿಯಾಗುವ ಹಾಗೆ ಈ ಕಾಲುವೆಯನ್ನು ವಿನೂತನ ರೀತಿಯಲ್ಲಿ ಸರಿಪಡಿಸುವ ಕಾರ್ಯ ಆಗಬೇಕು ಎಂದು ಸಾರ್ವಜನಿಕರು ಇದೆ ವೇಳೆ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದರು.
ನಗರದ ಹೃದಯಭಾಗದ ಜನನಿಬಿಡ ಪ್ರದೇಶದಲ್ಲಿನ ಕೋಟೆ ಪಕ್ಕದಲ್ಲಿದ್ದ ಈ ರಾಜಕಾಲುವೆಯ ಸ್ಥಿತಿಯಿಂದ ರಾಯಚೂರ ನಗರದ ನಿವಾಸಿಗಳಿಗೆ ಸಾಕಷ್ಟು ಕಿರಿಕಿರಿಯಾಗಿತ್ತು. ರಾಯಚೂರ ನಗರವನ್ನು ಪ್ರವೇಶಿಸುವ ಜನತೆಯು ಸಹ ಕಾಲುವೆಯನ್ನು ಕಂಡು ಬೇಸರ ವ್ಯಕ್ತಪಡಿಸುವ ದುಸ್ಥಿತಿಯಿತ್ತು. ಈಗಾಗಲೇ ಕೆಲವು ದಿನಗಳಿಂದ ನಿರಂತರವಾಗಿ ಈ ಕಾಲುವೆಯ ದುರಸ್ಥಿ ಕಾರ್ಯ ನಡೆದಿದೆ. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿಗಳು ಇದೆ ವೇಳೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಈ ರಾಜಕಾಲುವೆಗೆ ಇನ್ಮೇಲೆ ಯಾರು ಸಹ ಕಸವನ್ನು ಎಸೆಯದಂತೆ ವೈಜ್ಞಾನಿಕ ರೀತಿಯಲ್ಲಿ ಕಾಲುವೆಯ ಶುಚಿತ್ವಕ್ಕೆ ಕ್ರಮ ವಹಿಸಲಾಗುವುದು ಎಂದು ಇದೆ ವೇಳೆ ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದರು

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ