Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕುರುಗೋಡಿನಲ್ಲಿ ಅದ್ದೂರಿಯಾಗಿ ಜರುಗಿದ ರಾಜ್ಯೋತ್ಸವ ಕಾರ್ಯಕ್ರಮ

70 ನೇ ಕನ್ನಡ ರಾಜ್ಯೋತ್ಸವ ಹಿನ್ನಲೆ ಪಟ್ಟಣದ ತಹಶಿಲ್ದಾರರ ಕಛೇರಿಯಲ್ಲಿ ಅದ್ದೂರಿ ಕಾರ್ಯಕ್ರಮ ಆಯೋಜಿಸಲಾಗಿತ್ತು‌. ಧ್ವಜಾರೋಹಣ ನೆರವೇರಿಸಿದ ತಹಶಿಲ್ದಾರ್ ನರಸಪ್ಪ ಮಾತನಾಡಿ ಕಾವೇರಿಯಿಂದ ಮಾ ಗೋದಾವರಿವರೆಗಿರ್ಪ ಕನ್ನಡ ನಾಡದೋಳ್ ಎಂಬ ಕವಿರಾಜ ಮಾರ್ಗಕಾರನ ಮಾತಿನಂತೆ ಕನ್ನಡ ನಾಡು ಕಾವೇರಿಯಿಂದ ಗೋದಾವರಿವರೆಗೂ ಹಬ್ಬಿತ್ತು.

ಕನ್ನಡ ಭಾಷೆಗೆ ಸುಮಾರು ಎರಡು ಸಾವಿರ ವರ್ಷಗಳ ಇತಿಹಾಸವಿದೆ. ಇಂತಹ ಐತಿಹಾಸಿಕ ಭಾಷೆಯನ್ನು ಉಳಿಸಿ ಬೆಳಸಬೇಕಾದ ಜವಾಬ್ದಾರಿ ನಮ್ಮೆಲ್ಲರದ್ದು ಕನ್ನಡ ಭಾಷೆ ಅಭಿವೃದ್ಧಿಯಾಗಬೇಕಾದರೆ ಮೊದಲು  ನಾವು ಕನ್ನಡದ ಪ್ರೇಮ ಬೆಳೆಸಿಕೊಳ್ಳಬೇಕು.ನಮ್ಮ ದೇಶ ವಿಭಿನ್ನತೆಯಲ್ಲಿ ಏಕತೆ ಹೊಂದಿರುವ ದೇಶವಾಗಿದೆ. ನಮ್ಮ ರಾಜ್ಯದಲ್ಲಿ ಕನ್ನಡಕ್ಕೆ ಅಗ್ರಸ್ಥಾನ ನೀಡೋಣ ಅದರಾಚೆಗೆ ಬೇರೆಯವರಿಗೂ ಕನ್ನಡ ಕಲಿಸುವ ಕೆಲಸ ಮಾಡಬೇಕಾಗಿದೆ ಎಂದರು.


ಶಾಸಕ ಗಣೇಶ್ ಮೆರವಣಿಗೆಗೆ ಚಾಲನೆ ನೀಡಿದರು.

ಇದೇ ವೇಳೆ  ವಿವಿಧ ಶಾಲೆಗಳ ಮಕ್ಕಳೊಂದಿಗೆ  ಪಟ್ಟಣದ ಮುಖ್ಯರಸ್ತೆ,ಗೆಣಿಕೆಹಾಳ್ ರಸ್ತೆ ಮೂಲಕ. ಮೆರವಣಿಗೆ ತೆರಳಿ ಡಾ. ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು‌.



ಈ ಸಂದರ್ಭದಲ್ಲಿ ಗ್ರೇಡ್‌2 ತಹಶಿಲ್ದಾರ್ ಮಲ್ಲೇಶಪ್ಪ,ಪಿ.ಎಸ್.ಐ ಸುಪ್ರೀತ್ ವಿರುಪಾಕ್ಷಪ್ಪ,ಪುರಸಭೆ ಮುಖ್ಯಾಧಿಕಾರಿ ಹರ್ಷವರ್ಧನ,ಪುರಸಭೆ ಅಧ್ಯಕ್ಷ ಶೇಖಣ್ಣ,ಉಪಾಧ್ಯಕ್ಷ ಚನ್ನಪಟ್ಟಣ ಮಲ್ಲಿಕಾರ್ಜುನ, ಇ.ಓ ಕೆ.ವಿ ನಿರ್ಮಲ,

ಶಿಕ್ಷಣ ಇಲಾಖೆಯ ಅಧಿಕಾರಿ ಮನೋಹರ್,

 ದೈಹಿಕ ಪರವೀಕ್ಷಕಿ ಪದ್ಮರೆಡ್ಡಿ,ಕಸಾಪ ಅಧ್ಯಕ್ಷ ಮಸೂತಿ ನಾಗರಾಜ್,ಶಿರಸ್ತೆದಾರ ವಿಜಯ್ ಕುಮಾರ್,ಕೋಳೂರ ಕುರುಗೋಡು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಾನಾಳ್  ಚನ್ನಬಸವರಾಜ್ , ವಿ‌.ಎ ರಮೇಶ್,ಪುರಸಭೆ ಸದಸ್ಯರು,ತಾಲ್ಲೂಕು ಆಡಳಿತ ಸಿಬ್ಬಂದಿ,

 ವಿವಿಧ ಕನ್ನಡ ಪರ ಸಂಘಟನೆಗಳ ಅಧ್ಯಕ್ಷರು ಪದಾಧಿಕಾರಿಗಳು , ವಿವಿಧ ಶಾಲೆಗಳ ಶಿಕ್ಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ