Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪ

ಬಳ್ಳಾರಿ,ಆ.13
ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಿಂದುಳಿದ ವರ್ಗಗಳ ವಿವಿಧ ಸಮಾಜಗಳ ಮಹನೀಯರ ಜಯಂತಿಗಳನ್ನು ವಿಜೃಂಭಣೆಯಿAದ ಆಚರಿಸಲು ಪಾಲಿಕೆ ವತಿಯಿಂದ ಘೋಷಿಸಲಾದ ರೂ.50,000 ಅನುದಾನದ ಸದುಪಯೋಗವನ್ನು ಆಯಾ ಸಮಾಜದ ಮುಖಂಡರು ಪಡೆದುಕೊಳ್ಳಬೇಕು ಎಂದು ಮಹಾನಗರ ಪಾಲಿಕೆಯ ಮೇಯರ್ ಪಿ.ಗಾದೆಪ್ಪ ಮನವಿ ಮಾಡಿದ್ದಾರೆ.
‘ನಾನು ಮಹಾಪೌರನಾಗಿ ಅಧಿಕಾರ ವಹಿಸಿಕೊಂಡ ನಂತರ ಪ್ರಥಮ ಬಾರಿಗೆ ಮಂಡಿಸಿದ ಮಹಾನಗರ ಪಾಲಿಕೆಯ ಬಜೆಟ್‌ನಲ್ಲಿ ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿ ಹಾಗೂ ಅವರ ಸಾಂಸ್ಕೃತಿಕ ಗೌರವಕ್ಕೆ ಆದ್ಯತೆ ನೀಡಲಾಗಿದೆ. ಅದರ ಭಾಗವಾಗಿ ವಿವಿಧ ಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿ ಆಚರಣೆಗಾಗಿ ಪಾಲಿಕೆ ವತಿಯಿಂದ ತಲಾ ರೂ.50,000 ಅರ್ಥಿಕ ನೆರವು ನೀಡುವ ಪ್ರಮುಖ ನಿರ್ಧಾರವನ್ನು ಕೈಗೊಳ್ಳಲಾಗಿತ್ತು’ ಎಂದು ಸ್ಮರಿಸಿದರು.
ಹಿಂದುಳಿದ ಸಮುದಾಯಗಳ ಸಂಸ್ಕೃತಿ, ಪರಂಪರೆ ಮತ್ತು ಮಹನೀಯರ ವಿಚಾರಧಾರೆಗಳನ್ನು ಸಮಾಜಕ್ಕೆ ತಲುಪಿಸಲು ಹಾಗೂ ಜಯಂತಿಗಳನ್ನು ವ್ಯವಸ್ಥಿತವಾಗಿ ಆಚರಿಸಲು ಈ ನೆರವು ನೀಡಲಾಗುತ್ತಿದೆ. ನಗರದ ಎಲ್ಲಾ ವರ್ಗಗಳ ಹಾಗೂ ಸಮುದಾಯಗಳ ಸರ್ವಾಂಗೀಣ ಅಭಿವೃದ್ಧಿಯೊಂದಿಗೆ ಸಾಮಾಜಿಕ ಸಾಮರಸ್ಯಕ್ಕೆ ಪಾಲಿಕೆ ಬದ್ಧವಾಗಿದೆ.
ಬಳ್ಳಾರಿ ನಗರದ ಹಿಂದುಳಿದ ವರ್ಗಗಳ ವಿವಿಧ ಸಂಘ-ಸAಸ್ಥೆಗಳು, ಸಮಾಜದ ಮುಖಂಡರು ಪಾಲಿಕೆಯ ನಿಯಮಾವಳಿಗಳ ಪ್ರಕಾರ ಈ ಅನುದಾನವನ್ನು ಪಡೆದುಕೊಂಡು ಕಾರ್ಯಕ್ರಮಗಳಲ್ಲಿ ಎಲ್ಲ ಸಮಾಜದವರು ಸಕ್ರಿಯವಾಗಿ ತೊಡಗಿಸಿಕೊಂಡು ಯಶಸ್ವಿಗೊಳಿಸಬೇಕು ಎಂದು ಮೇಯರ್ ಪಿ.ಗಾದೆಪ್ಪ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್