Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀಗಂಧ ಆಧಾರಿತ ಕೃಷಿ ಅರಣ್ಯ ವ್ಯವಸ್ಧೆ ಕಾರ್ಯಾಗಾರ


ಧಾರವಾಡ ಮಾರ್ಚ್ 03: ಧಾರವಾಡ ಸಂಶೋಧನಾ ವೃತ್ತ ವ್ಯಾಪ್ತಿಯಲ್ಲಿ ಬರುವ ಸಂಶೋಧನಾ ವಲಯ ಧಾರವಾಡದಲ್ಲಿ ಫೆಬ್ರವರಿ 25 ರಂದು ಗುಂಗರಗಟ್ಟಿ ಅರಣ್ಯ ಅಕಾಡೆಮಿಯ ಸಂಭಾಗಣದಲ್ಲಿ ಆಯೋಜಿಸಿದ್ದ Workshop on Sandalwood based Agroforestry Systems and Estimation of Heartwood Content ಎಂಬ ವಿಷಯದ ಮೇಲೆ ನಡೆದ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.



ಕಾರ್ಯಾಗಾರವನ್ನು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಬಿ.ಪಿ. ರವಿ, ಉದ್ಘಾಟಿಸಿದರು. ಧಾರವಾಡ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಯತೀಶ್ ಕುಮಾರ್ ಡಿ. ಅವರು ಅಧ್ಯಕ್ಷತೆಯನ್ನು ವಹಿಸಿದ್ದರು.



ಉಪ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಜಂಟಿ ನಿರ್ದೇಶಕ ಮರಿಯಾ ಕ್ರಿಸ್ತು ರಾಜಾ ಡಿ, ಭಾಗವಹಿಸಿದ್ದರು. ಕಾರ್ಯಾಗಾರದಲ್ಲಿ ಸಂಶೋಧನೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅಶೋಕ ಎನ್. ಹಪ್ಪಳದ ಅವರು ಸ್ವಾಗತಿಸಿದರು. ಸಂಶೋಧನೆ ವಲಯದ ವಲಯ ಅರಣ್ಯ ಅಧಿಕಾರಿ ಮಹಾಂತೇಶ ಪೆಟ್ಲೂರ್ ಪ್ರಾಸ್ತಾವಿಕವಾಗಿ ಮಾತನಾಡಿದರು.



ಕಾರ್ಯಾಗಾರದಲ್ಲಿ ಬೆಂಗಳೂರು ಮೂಲದ ಮರ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯ ಖ್ಯಾತ ವಿಜ್ಞಾನಿಗಳು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಭಾಗವಹಿಸಿದ ಎಲ್ಲ ರೈತ ಮತ್ತು ಇಲಾಖೆಯ ಮುಂಚೂಣಿ ಸಿಬ್ಬಂದಿಯೊಂದಿಗೆ ಶ್ರೀಗಂಧದ ಆಧರಿತ ಕೃಷಿ ಅರಣ್ಯ ವ್ಯವಸ್ಥೆಗಳು ಮತ್ತು ಇದರ ಹಾರ್ಟವುಡ್ ಕುರಿತ ಅಂದಾಜಿಸುವಿಕೆಯ ಬಗ್ಗೆ ಅಮೂಲ್ಯ ಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ತಿಳಿಸಿದರು.



ಕಾರ್ಯಾಗಾರದಲ್ಲಿ ಹಿರಿಯ ಅಧಿಕಾರಿಗಳು, ಸಂಶೋಧನಾ ವೃತ್ತದ ಸಿಬ್ಬಂದಿ ಮತ್ತು ಹಾವೇರಿ, ಧಾರವಾಡ, ಗದಗ, ಬೆಳಗಾವಿ ಜಿಲ್ಲೆಗಳ ರೈತರು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ