Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಂಡೂರು: ಬೆಳೆ ವಿಮೆ ತಿರಸ್ಕೃತ ಪ್ರಸ್ತಾವನೆಗಳ ಮರುಪರಿಶೀಲನೆಗೆ ಅರ್ಜಿ ಸಲ್ಲಿಸಲು ರೈತರಿಗೆ ಅವಕಾಶ

ಬಳ್ಳಾರಿ,ಜೂ.24
ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆಯಡಿ 2024ರ ಮುಂಗಾರು, ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ಬೆಳೆ ವಿಮೆ ಪ್ರಸ್ತಾವನೆಗಳಿಗೆ ಸಂಬAಧಿಸಿದAತೆ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಾರ್ಗದರ್ಶನದಂತೆ ಬೆಳೆ ಸಮೀಕ್ಷೆಯ ದತ್ತಾಂಶಗಳನ್ನು ವಿಮೆ ನೋಂದಣಿ ಪ್ರಸ್ತಾವನೆಗಳೊಂದಿಗೆ ಹೋಲಿಕೆ ಮಾಡಿ, ತಾಳೆಯಾದ ಅರ್ಜಿಗಳಿಗೆ ಈಗಾಗಲೇ ‘ಸಂರಕ್ಷಣೆ' ತಂತ್ರಾAಶದ ಮೂಲಕ ವಿಮಾ ಪರಿಹಾರವನ್ನು ಲೆಕ್ಕಹಾಕಲಾಗಿದೆ.
ದತ್ತಾಂಶಗಳು ತಾಳೆಯಾಗದ ಕೆಲವು ಪ್ರಸ್ತಾವನೆಗಳನ್ನು ತಾಲೂಕು ಮಟ್ಟದ ಅಧಿಕಾರಿಗಳ ಪರಿಶೀಲನೆಯ ನಂತರ, ವಿಮಾ ಸಂಸ್ಥೆಯು ಅಂತಿಮವಾಗಿ ತಿರಸ್ಕರಿಸಿದೆ. ಪ್ರಸ್ತುತ ಸಂಡೂರು ತಾಲ್ಲೂಕಿನಲ್ಲಿ ವಿಮಾ ಸಂಸ್ಥೆಯಿAದ ತಿರಸ್ಕೃತಗೊಂಡಿರುವ ಒಟ್ಟು 262 ಪ್ರಸ್ತಾವನೆಗಳ ವಿವರಗಳನ್ನು ಆಯಾ ರೈತ ಸಂಪರ್ಕ ಕೇಂದ್ರಗಳ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
*ತಿರಸ್ಕೃತಗೊಂಡಿರುವ ಪ್ರಸ್ತಾವನೆಗಳ ವಿವರ(2024-25 ಸಾಲಿನ):*
ಸಂಡೂರು ತಾಲ್ಲೂಕಿನಲ್ಲಿ ಮುಂಗಾರು-261, ಹಿಂಗಾರು- 01, ಬೇಸಿಗೆ-00, ಒಟ್ಟು ತಿರಸ್ಕೃತಗೊಂಡ ಪ್ರಸ್ತಾವನೆಗಳು-262.
ಯಾವ ರೈತರ ವಿಮಾ ಅರ್ಜಿಗಳು ತಿರಸ್ಕೃತಗೊಂಡಿವೆಯೋ, ಅವರು ಈ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು, ಒಂದು ವೇಳೆ ಆಕ್ಷೇಪಣೆಗಳಿದ್ದಲ್ಲಿ ಮರುಪರಿಶೀಲನೆಗಾಗಿ ಸಂಬAಧಪಟ್ಟ ರೈತ ಸಂಪರ್ಕ ಕೇಂದ್ರಗಳು ಅಥವಾ ಸಂಡೂರು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಮನವಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಜುಲೈ 09 ರ ವರೆಗೆ ಅವಧಿ ನಿಗದಿಪಡಿಸಲಾಗಿದೆ.
ಬೆಳೆ ವಿಮೆ ತಿರಸ್ಕೃತಗೊಂಡಿರುವ ಸಂಡೂರು ತಾಲ್ಲೂಕಿನ ರೈತರು ಈ ನಿಗದಿತ ಅವಧಿಯೊಳಗೆ ತಮ್ಮ ಆಕ್ಷೇಪಣೆ ಅರ್ಜಿಗಳನ್ನು ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕಾಗಿ ಸಂಡೂರಿನ ಸಹಾಯಕ ಕೃಷಿ ನಿರ್ದೇಶಕರಾದ ಬಿ. ಗಯಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮಹೊಸ ಆದಾಯ ತೆರಿಗೆ ಕಾಯ್ದೆ-2025 ಜಾಗೃತಿ ಕಾರ್ಯಕ್ರಮದಲ್ಲಿ ಹೆಚ್ಚುವರಿ ಆದಾಯ ತೆರಿಗೆ ಅಧಿಕಾರಿ ರಾಮನಾಥನ್ ಹೇಳಿಕೆ ಸುಲಭ ತೆರಿಗೆ ವ್ಯವಸ್ಥೆಯಿಂದ ದೇಶದ ಪ್ರಗತಿ ಸಾಧ್ಯದೃಷ್ಟಿಹೀನರ ಪುನರ್ವಸತಿ' ಕುರಿತು ಯುಜಿ ಡಿಪ್ಲೊಮಾ ಕೋರ್ಸ್ ಆರಂಭಕೃಷಿ ಇಲಾಖೆ: ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಸಲಹೆಜೂ.25 ರಂದು ತುಂಗಭದ್ರಾ ಜಲಾಶಯ ನೂತನ ಸ್ಟೀಲ್ ಗೇಟ್‌ಗಳ ಲೋಕಾರ್ಪಣೆ ಕಾರ್ಯಕ್ರಮಜೂ.25 ರಂದು ತುಂಗಭದ್ರಾ ಜಲಾಶಯ ನೂತನ ಸ್ಟೀಲ್ ಗೇಟ್‌ಗಳ ಲೋಕಾರ್ಪಣೆ ಕಾರ್ಯಕ್ರಮ41 ಬೈಕ್ ಕಳವು ಪ್ರಕರಣ ಭೇದಿಸಿದ ಸಿರುಗುಪ್ಪ ಪೊಲೀಸರು; ರೂ.20.50 ಲಕ್ಷ ಮೌಲ್ಯದ ವಾಹನಗಳ ಜಪ್ತಿತುಂಗೆಯ ಅಂಗಳದಲ್ಲಿ ಹಬ್ಬದ ಸಂಭ್ರಮ * ಟಿಬಿ ಡ್ಯಾಮ್, ಮುನಿರಾಬಾದನಲ್ಲಿ ಖಾಕಿ ಪಡೆಯಿಂದ ಸರ್ಪಗಾವಲು * ಕೊಪ್ಪಳ, ವಿಜಯನಗರ, ಬಳ್ಳಾರಿ, ರಾಯಚೂರು ಜಿಲ್ಲೆಗಳ ಅನ್ನದಾತರ ಮೊಗದಲ್ಲಿ ಹರ್ಷಸಂಡೂರು: ಬೆಳೆ ವಿಮೆ ತಿರಸ್ಕೃತ ಪ್ರಸ್ತಾವನೆಗಳ ಮರುಪರಿಶೀಲನೆಗೆ ಅರ್ಜಿ ಸಲ್ಲಿಸಲು ರೈತರಿಗೆ ಅವಕಾಶ