Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀಶೈಲ ಪೀಠದ ಶಿವಶಕ್ತಿ ಸಾಂಸ್ಕೃತಿಕ ಭವನದಲ್ಲಿ ಇಷ್ಟಲಿಂಗ ಪೂಜೆ:

 

ಸಿರುಗುಪ್ಪ.ಜು.೧೨:- ಇಷ್ಟಲಿಂಗಪೂಜೆಯು ಲಿಂಗಾಯಿತ ದರ್ಮದಲ್ಲಿ ಮಹತ್ವವಾದ ಆಚರಣೆಯಾಗಿದೆ, ಇದು ದೇವರನ್ನು ಸಾಕಾರ ರೂಪದಲ್ಲಿ ಪೂಜಿಸುವುದಕ್ಕಿಂತ ಹೆಚ್ಚಾಗಿ ತನ್ನೊಳಗೆ ನೆಲೆಸಿರುವ ದೈವವತ್ವವನ್ನು ಪೂಜಿಸುವುದಾಗಿದೆ. ಈ ಪೂಜೆಯು ಪ್ರತಿಯೊಬ್ಬರು ತನ್ನ ಆತ್ಮ ಲಿಂಗದೊAದಿಗೆ ಐಕ್ಯತೆಯನ್ನು ಸಾಧಿಸಲು ಸಹಾಯ ಮಾಡುತ್ತದೆ. ಇದು ಆಧ್ಯಾತ್ಮಿಕ ಬೆಳವಣಿಗೆಗೆ ಮತ್ತು ಮಕ್ಷದ ಕಡೆಗೆ ಕೊಂಡ್ಯೊಯ್ಯುವ ಪ್ರಮುಖ ಹೆಜ್ಜೆಯಾಗಿದೆ ಎಂದು ಶ್ರೀಶೈಲ ಪೀಠದ ಶ್ರೀ ೧೦೦೮ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯರು ತಿಳಿಸಿದರು.

ನಗರದ ಶ್ರೀಶೈಲ ಪೀಠದ ಶಿವಶಕ್ತಿ ಸಾಂಸ್ಕೃತಿಕ ಭವನದಲ್ಲಿ ನಡೆದ ಇಷ್ಟಲಿಂಗ ಮಹಾಪೂಜೆ ಕಾರ್ಯಕ್ರಮದಲ್ಲಿ ಇಷ್ಟಲಿಂಗ ಪೂಜೆಯ ಬಗ್ಗೆ ಭಕ್ತರಿಗೆ ಮಾಹಿತಿ ನೀಡಿ ಆಶೀರ್ವಚನ ನೀಡಿದ ಶ್ರೀಗಳು ಇಷ್ಟಲಿಂಗವು ದೇಹದೊಳಗಿರುವ ದೈವತ್ವದ ಸಂಕೇತವಾಗಿದೆ, ಇದನ್ನು ಪೂಜಿಸುವುದರಿಂದ ವ್ಯಕ್ತಿಯು ತನ್ನಳೊಗೆ ನೆಲೆಸಿರುವ ದೈವತ್ವವನ್ನು ಅರಿತುಕೊಳ್ಳಲು ಸಾಧ್ಯವಾಗುತ್ತದೆ. ಇಷ್ಟಲಿಂಗ ಪೂಜೆಯಿಂದ ಮನಸ್ಸನ್ನು ಏಕಾಗ್ರತೆ ಗೊಳಿಸಲು ಸಹಾಯವಾಗುತ್ತದೆ, ಲಿಂಗದ ಮೇಲೆ ಗಮನ ಕೇಂದ್ರೀಕರಿಸುವುದರಿAದ ವ್ಯಕ್ತಿಯು ತನ್ನ ಆಲೋಚನೆಗಳನ್ನು ನಿಯಂತ್ರಿಸಲು ಹಾಗೂ ಧ್ಯಾನದ ಸ್ಥಿತಿಯನ್ನು ತಲುಪಲು ಸಾರ್ಧಯವಾಗುತ್ತದೆ. ಇಷ್ಟಲಿಂಗ ಪೂಜೆಯಲ್ಲಿ ಯಾವುದೇ ಜಾತಿ, ಮತ ಭೇದವಿಲ್ಲ, ಎಲ್ಲರು ಸಮಾನವಾಗಿ ಪೂಜಿಸಬೇಹುದು, ಇದು ಸಾಮಾಜಿಕ ಸಮಾನತೆಯನ್ನು ಪ್ರತಿಪಾದಿಸುತ್ತದೆ. ನಿರಂತರ ಇಷ್ಟಲಿಂಗ ಪೂಜೆಯಿಂದ ವ್ಯಕ್ತಿಯು ಆದ್ಯಾತ್ಮಿಕವಾಗಿ ಬೆಳೆಯುತ್ತಾನೆ, ಮೋಕ್ಷದ ಕಡೆಗೆ ಸಾಗುತ್ತಾನೆ. ಇಷ್ಟಲಿಂಗ ಪೂಜೆಯು ವ್ಯಕ್ತಿಯ ತನ್ನ ಕಾಯಕದಲ್ಲಿ ನಿಷ್ಟೆಯಿಂದರಲು ಪ್ರೇರೇಪಿಸುತ್ತದೆ. ಇಷ್ಟಲಿಂಗ ಪೂಜೆಯು ಬಸವಣ್ಣನವರ ತತ್ವಗಳ ಆಧಾರದ ಮೇಲೆ ನಿಂತಿದೆ  ಆದ್ದರಿಂದ ಪ್ರತಿಯೊಬ್ಬರು ಇಷ್ಟಲಿಂಗ ಪೂಜೆಯನ್ನು ಮಾಡಿ ಬದುಕಿನಲ್ಲಿ ಶಾಂತಿ, ನೆಮ್ಮದಿಯನ್ನು ಪಡೆಯಬೇಕೆಂದು ಹೇಳಿದರು.

ರೌಡಕುಂದಿ ಸಂಸ್ಥಾನ ಹಿರೇಮಠದ ಶಿವಯೋಗಿ ಶಿವಚಾರ್ಯ ಸ್ವಾಮೀಜಿ, ಬೆಂಗಳೂರು ಶಿವಗಂಗಾಕ್ಷೇತ್ರದ ಷ.ಬ್ರ ಡಾ|| ಮಲಯ ಶಾಂತಮುನಿ ಶಿವಾಚಾರ್ಯರು ಇದ್ದರು, ವಿವಿಧ ಗ್ರಾಮಗಳ ಭಕ್ತರು ಇಷ್ಟಲಿಂಗಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ