Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಾಮಾಜಿಕ ಪರಿಶೋಧನೆ ತರಬೇತಿ

ಮಡಿಕೇರಿ ಜು.10ಸರ್ಕಾರದ ಯೋಜನೆಯ ಯಶಸ್ವಿ ಅನುಷ್ಠಾನದಲ್ಲಿ ಸಾಮಾಜಿಕ ಪರಿಶೋಧನೆ ಗ್ರಾಮಸಭೆ ಅತ್ಯವಶ್ಯಕ ಎಂದು ಕೊಡಗು ಜಿ.ಪಂ. ಉಪ ಕಾರ್ಯದರ್ಶಿ ಧನರಾಜು ಅವರು ತಿಳಿಸಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆದ ಸಾಮಾಜಿಕ ಪರಿಶೋಧನೆ ಗ್ರಾಮಸಭೆಯ ನೋಡಲ್ ಅಧಿಕಾರಿಗಳ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಅಭಿವೃದ್ಧಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಅನುಷ್ಠಾನ ಗೊಳಿಸಿದೆ. ಇಂತಹ ಯೋಜನೆಗಳು ಮತ್ತು ಅದಕ್ಕೆ ವಿನಿಯೋಗಿಸಿದ ಹಣವು ಸೂಕ್ತವಾಗಿ ಬಳಕೆಯಾಗಿರುವ ಬಗ್ಗೆ ಪರಿಶೀಲಿಸಿ ಮಾಹಿತಿ ನೀಡುವುದು ಸಾಮಾಜಿಕ ಪರಿಶೋಧನೆಯ ಆದ್ಯ ಕರ್ತವ್ಯವಾಗಿದೆ.

ಇಂತಹ ವರದಿಗಳನ್ನು ಗ್ರಾಮಸಭೆಯ ಮೂಲಕ ಪರಿಶೀಲಿಸುವುದು ತಾಲೂಕು ನೋಡಲ್ ಅಧಿಕಾರಿಗಳ ಕರ್ತವ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ಸಾಮಾಜಿಕ ಗ್ರಾಮಸಭೆಯನ್ನು ಕೈಗೊಳ್ಳುವ ಬಗೆ ಮತ್ತು ವರದಿಗಳನ್ನು ಪರಿಶೀಲಿಸುವ ಕುರಿತು ತರಬೇತಿ ಹಮ್ಮಿಕೊಂಡಿದ್ದು, ಇದರ ಉಪಯೋಗವನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲ್ಪಟ್ಟ ತಾಲೂಕು ಮಟ್ಟದ ಅಧಿಕಾರಿಗಳು ಪಡೆದುಕೊಳ್ಳಬೇಕು ಎಂದರು.

ಇದೇ ವೇಳೆ 15 ನೇ ಹಣಕಾಸು ಯೋಜನೆಯ ಬಗ್ಗೆ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಅಬ್ದುಲ್ಲಾ, ಮಹಾತ್ಮಗಾಂಧಿ ನರೇಗಾ ಯೋಜನೆಯ ಕುರಿತು ತಾಲೂಕು ವ್ಯವಸ್ಥಾಪಕರಾದ ಸತೀಶ್, ಸಾಮಾಜಿಕ ಪರಿಶೋಧನೆ ಗ್ರಾಮಸಭೆಯಲ್ಲಿ ಮಾಹಿತಿ, ಶಿಕ್ಷಣ ಮತ್ತು ಸಂವಹನದ ಪಾತ್ರ ಕುರಿತು ಜಿಲ್ಲಾ ಐಇಸಿ ಸಂಯೋಜಕ ಪವನ್ ಕುಮಾರ್, ಪಿ.ಎಂ.ಪೆಷಣ್ ಅಭಿಯಾನ್ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ಕುರಿತಂತೆ ಸಾಮಾಜಿಕ ಪರಿಶೋಧನೆಯ ಜಿಲ್ಲಾ ವ್ಯವಸ್ಥಾಪಕರಾದ ಪ್ರೀತಂ ಪೆನ್ನಪ್ಪ ಮಾಹಿತಿ ನೀಡಿದರು. ಸ್ವಚ್ಛ ಭಾರತ್ ಮಿಷನ್ (ಗ್ರಾ.) ಜಿಲ್ಲಾ ಸಮಾಲೋಚಕಿ ಹರ್ಷಿತ ಎ.ಆರ್.ಪ್ರಾರ್ಥಿಸಿದರು.

ಜಿ.ಪಂ.ಸಹಾಯಕ ಕಾರ್ಯದರ್ಶಿ ಅಬ್ದುಲ್ ನಾಬಿ, ಸಹಾಯಕ ಯೋಜನಾಧಿಕಾರಿ ಜೀವನ್ ಕುಮಾರ್ ಇತರರು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ