Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತಾಲೂಕಿನಾದ್ಯಂತ 9ಸಾವಿರ ಹೆಕ್ಟೇರ್‌ನಲ್ಲಿ ಬಿತ್ತನೆ:

ಸಿರುಗುಪ್ಪ.- ತಾಲೂಕಿನಲ್ಲಿ ಉತ್ತಮ ಮಳೆಯಾಗಿದ್ದು, ಇಲ್ಲಿಯವರೆಗೆ 9ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಕಾರ್ಯ ಮುಗಿದಿದ್ದು, ಹಚ್ಚೊಳ್ಳಿ, ಸಿರುಗುಪ್ಪ, ಕರೂರು, ತೆಕ್ಕಲಕೋಟೆ ಹೋಬಳಿ ವ್ಯಾಪ್ತಿಯಲ್ಲಿ ಬರುವ ಮಳೆಯಾಶ್ರಿತ ಜಮೀನುಗಳಲ್ಲಿ ಹತ್ತಿ ಬಿತ್ತನೆ ಕಾರ್ಯ ನಡೆದಿದ್ದು, ಶನಿವಾರವೂ ತಾಲೂಕಿನಾದ್ಯಂತ ಮಳೆಯಾಶ್ರಿತ ಪ್ರದೇಶದಲ್ಲಿ ಹತ್ತಿ, ಜೋಳ, ಸೂರ್ಯಕಾಂತಿ, ಮೆಣಸಿನಕಾಯಿ ಬೆಳೆಯ ಬಿತ್ತಿನ ಕಾರ್ಯ ಜೋರಾಗಿ ನಡೆದಿದೆ.
ತಾಲೂಕಿನಲ್ಲಿ ಒಟ್ಟು 90,101 ಹೆಕ್ಟೇರ್ ಕೃಷಿ ಯೋಗ್ಯ ಜಮೀನು ಇದ್ದು, ಇದರಲ್ಲಿ ಮುಂಗಾರಿನಲ್ಲಿ 60ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ, ಹತ್ತಿ, ಮೆಕ್ಕೆಜೋಳ, ಜೋಳ, ಸಜ್ಜೆ, ನವಣೆ, ಕಬ್ಬು, ತೊಗರಿ ಬೆಳೆಯನ್ನು ಬೆಳೆಯುವ ಗುರಿಯನ್ನು ಕೃಷಿ ಇಲಾಖೆ ಹೊಂದಿದ್ದು, ಇಲ್ಲಿಯವರೆಗೆ ಸುಮಾರು 10-12ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬಿತ್ತನೆ ಕಾರ್ಯ ಮುಗಿದಿದ್ದು, ಇನ್ನುಳಿದಂತೆ ವಿವಿದ ಬೆಳೆಗಳ ಬಿತ್ತನೆ ಕಾರ್ಯ ಮುಗಿದಿದ್ದು, ತುಂಗಭದ್ರ ನದಿ ಮತ್ತು ವೇದಾವತಿ ಹಗರಿನದಿ ಹಾಗೂ ದೊಡ್ಡಹಳ್ಳ, ಹಿರೇಹಳ್ಳ, ಕೆಂಚಿಹಳ್ಳದ ನೀರನ್ನು ಬಳಸಿ ಮುಖ್ಯವಾಗಿ ಭತ್ತ ಬೆಳೆಯುವ ರೈತರು ಈಗಾಗಲೆ ಭತ್ತದ ಸಸಿಮಡಿಗಳನ್ನು ಬೆಳೆಸಲು ಸಿದ್ಧತೆ ಮಾಡಿಕೊಂಡಿದ್ದಾರೆ.
ಬೀಜ ಬಿತ್ತನೆ ಮಾಡುವ ರೈತರು ಬೀಜೋಪಚಾರ ಮಾಡಿ ಬಿತ್ತನೆಯನ್ನು ಮಾಡಬೇಕು, ಇದರಿಂದ ಬೆಳೆಗಳಿಗೆ ಬರುವ ರೋಗವನ್ನು ತಡೆಯಲು ಸಾಧ್ಯವಾಗುತ್ತದೆ ಎಂದು ಹಚ್ಚೊಳ್ಳಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಬಾಲಾಜಿನಾಯ್ಕ್ ತಿಳಿಸಿದ್ದಾರೆ.
ತಾಲೂಕಿನಲ್ಲಿ ಇಲ್ಲಿಯವರೆಗೆ 9ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದ್ದು, ಮುಖ್ಯವಾಗಿ ರೈತರು ಹತ್ತಿ ಬೀಜವನ್ನು ಮಳೆಯಾಶ್ರಿತ ಪ್ರದೇಶದಲ್ಲಿ ಬಿತ್ತನೆ ಮಾಡಿದ್ದಾರೆ. ಅಲ್ಲದೆ ವಿವಿಧ ಬೆಳೆಗಳ ಬೀಜಗಳನ್ನು ರೈತರು ನಾಟಿ ಮಾಡಿದ್ದು, ಶನಿವಾರವೂ ರೈತರು ಬೀಜ ನಾಟಿಕಾರ್ಯದಲ್ಲಿ ತೊಡಗಿದ್ದಾರೆಂದು ಸಹಾಯಕ ಕೃಷಿ ನಿರ್ದೇಶಕ ಎಸ್.ಬಿ.ಪಾಟೀಲ್ ತಿಳಿಸಿದರು.
 ಸಿರುಗುಪ್ಪ: ತಾಲೂಕಿನ ಕರೂರು ಹೋಬಳಿ ವ್ಯಾಪ್ತಿಯಲ್ಲಿ ಹತ್ತಿಬೀಜ ನಾಟಿಯಲ್ಲಿ ತೊಡಗಿರುವ ರೈತ ಮಹಿಳೆಯರು
. ಸಿರುಗುಪ್ಪ: ತಾಲೂಕಿನ ಹಚ್ಚೊಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಬಿತ್ತನೆಕಾರ್ಯದಲ್ಲಿ ತೊಡಗಿರುವ ರೈತರು.
 ಸಿರುಗುಪ್ಪ: ತಾಲೂಕಿನ ಕರೂರು ಹೋಬಳಿ ವ್ಯಾಪ್ತಿಯಲ್ಲಿ ಮೆಣಸಿನಕಾಯಿ ಬಿತ್ತನೆಗಾಗಿ ಬೀಜೋಪಚಾರ ಮಾಡುತಿರುವ ರೈತ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ