ಕೊಪ್ಪಳ ಜುಲೈ 29 ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಗೆ ನೀಡಲಾಗುವ ಪ್ರೋತ್ಸಾಹಧನ ಯೋಜನೆಯಡಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ವಿಠ್ಠಲ್ ಜಾಬಗೌಡರ ಅವರು ತಿಳಿಸಿದ್ದಾರೆ.
ಇಲಾಖೆಯ ಯೋಜನೆಗಳಾದ 2026-27ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿ ಹಾಗೂ 2025-26ನೇ ಸಾಲಿನ ಕ್ರೀಡಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಈ ಹಿಂದೆ 31 ಜುಲೈ 2026 ರವರೆಗೆ ದಿನಾಂಕ ನಿಗದಿಪಡಿಸಲಾಗಿತ್ತು. ಆದರೆ, ಇದೀಗ ಕ್ರೀಡಾಪಟುಗಳ ಅನುಕೂಲಕ್ಕಾಗಿ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ಆಗಸ್ಟ್ 31 ರವರೆಗೆ ವಿಸ್ತರಿಸಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ: ಅರ್ಹ ಕ್ರೀಡಾಪಟುಗಳು ಸೇವಾ ಸಿಂಧು ಅಧಿಕೃತ ಜಾಲತಾಣ https://sevasindhu.karnataka.gov.in ಮೂಲಕವೇ ಕಡ್ಡಾಯವಾಗಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ.
ಅರ್ಜಿ ಸಲ್ಲಿಕೆ ಹಾಗೂ ಯೋಜನೆಗಳ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಇಚ್ಛಿಸುವವರು ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಗದಗ್ ರಸ್ತೆ, ಕೊಪ್ಪಳ, ದೂರವಾಣಿ ಸಂಖ್ಯೆ: 08539-230121, ಇಲ್ಲಿಗೆ ಅಥವಾ ಯುವ ಸಹಾಯವಾಣಿ: 155265 ಗೆ ಕಚೇರಿ ವೇಳೆಯಲ್ಲಿ ಈ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ
