Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ


ಬಳ್ಳಾರಿ,ಮೇ 13

ಪ್ರತಿ ವರ್ಷ ಆಗಸ್ಟ್ 7 ರಂದು ಆಚರಿಸಲಾಗುವ ‘ರಾಷ್ಟಿçÃಯ ಕೈಮಗ್ಗ ದಿನಾಚರಣೆ' ಅಂಗವಾಗಿ, ಕೈಮಗ್ಗ ನೇಯ್ಗೆ ವೃತ್ತಿಯಲ್ಲಿ ನೈಪುಣ್ಯತೆ ಮತ್ತು ಶ್ರೇಷ್ಠತೆ ಹೊಂದಿರುವ ನೇಕಾರರಿಗೆ ನೀಡಲಾಗುವ ರಾಜ್ಯ ಮಟ್ಟದ ಪ್ರಶಸ್ತಿಗಾಗಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಅರ್ಹ ನೇಕಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಪ್ರಶಸ್ತಿಯು ನಗದು ಬಹುಮಾನ, ನೆನಪಿನ ಕಾಣಿಕೆ, ಶಾಲು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ.

*ನಗದು ಬಹುಮಾನದ ವಿವರ:*

ಪ್ರಶಸ್ತಿ ವಿಜೇತರಿಗೆ ವಿವಿಧ ವಿಭಾಗಗಳಲ್ಲಿ ನಗದು ಬಹುಮಾನ ನೀಡಲಾಗುತ್ತದೆ. ರೇಷ್ಮೆ ವಲಯ- ರೂ.25,000(ಪ್ರಥಮ), ರೂ.20,000(ದ್ವಿತೀಯ).

ಹತ್ತಿ ವಲಯ- ರೂ.20,000(ಪ್ರಥಮ), ರೂ.15,000(ದ್ವಿತೀಯ).

ಉಣ್ಣೆ ವಲಯ- ರೂ.15,000(ಪ್ರಥಮ).

*ಅರ್ಹತೆ:*

ಅರ್ಜಿದಾರರು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಕನಿಷ್ಠ 30 ವರ್ಷ ವಯಸ್ಸನ್ನು ಪೂರೈಸಿರಬೇಕು. ಕೈಮಗ್ಗ ನೇಯ್ಗೆಯಲ್ಲಿ ಸುಮಾರು 10 ವರ್ಷಗಳ ಅನುಭವ ಹೊಂದಿರಬೇಕು. ಪ್ರಶಸ್ತಿಗಾಗಿ ಸಲ್ಲಿಸುವ ಉತ್ಪನ್ನದ ಮಾದರಿಯನ್ನು ಅರ್ಜಿದಾರರೇ ಸ್ವತಃ ತಯಾರಿಸಿರಬೇಕು.

*ಅರ್ಜಿ ಸಲ್ಲಿಸುವ ವಿಧಾನ:*

ಅರ್ಹ ನೇಕಾರರು ಬಳ್ಳಾರಿಯ ಹೊಸ ಜಿಲ್ಲಾಡಳಿತ ಭವನದ ‘ಎ' ಬ್ಲಾಕ್‌ನಲ್ಲಿರುವ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ (ಕೊಠಡಿ ಸಂಖ್ಯೆ 29, 1ನೇ ಮಹಡಿ) ಭೇಟಿ ನೀಡಿ ಅರ್ಜಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಮೇ 25 ರೊಳಗಾಗಿ ಸಲ್ಲಿಸತಕ್ಕದ್ದು.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ.08392-266075 ಅಥವಾ ಮೊ.9901313417, 9844837264 ಅನ್ನು ಸಂಪರ್ಕಿಸಬಹುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ