Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ: ತಾರಾನಾಥ ಸರ್ಕಾರಿ ಆಯುರ್ವೇದ ಮಹಾವಿದ್ಯಾಲಯದಲ್ಲಿ ರಾಜ್ಯ ಮಟ್ಟದ ಕಾರ್ಯಾಗಾರ ಮನುಷ್ಯನ ಮುಪ್ಪು ತಡೆಗಟ್ಟುವಿಕೆಗೆ ‘ಕುಟಿ ಪ್ರಾವೇಶಿಕ ರಸಾಯನ ಚಿಕಿತ್ಸೆ’-ಡಾ.ಅದ್ರಿಜಾ



ಬಳ್ಳಾರಿ,ಡಿ.12



‘ಕುಟಿ ಪ್ರಾವೇಶಿಕ ರಸಾಯನ ಚಿಕಿತ್ಸೆ’ಯು ಮನುಷ್ಯನ ವಯೋಸಹಜ ಮುಪ್ಪು ಮತ್ತು ಅಕಾಲ ಮುಪ್ಪಾಗುವುದನ್ನು ತಡೆಗಟ್ಟುತ್ತದೆ. ವೃದ್ಧ ವ್ಯಕ್ತಿಯು ರಸಾಯನ ಚಿಕಿತ್ಸೆ ಪಡೆದು, ವಯಸ್ಸಿನ ಅನಿಯಮಿತ ಸಮಸ್ಯೆಗಳನ್ನು ದೂರ ಮಾಡಿಕೊಳ್ಳಬಹುದು ಎಂದು ಕೇರಳ ರಾಜ್ಯದ ಪಾಲಕ್ಕಾಡ್‌ನ ಪರಿಣಿತ ವೈದ್ಯರಾದ ಡಾ.ಅದ್ರಿಜಾ ಅವರು ಹೇಳಿದರು.

ನಗರದ ತಾರಾನಾಥ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಗುರುವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಒಂದು ದಿನದ ವೈಜ್ಞಾನಿಕ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಕಾಯಕಲ್ಪ ಚಿಕಿತ್ಸೆಯಿಂದ ಯೌವ್ವನ ಪಡೆಯಬಹುದು. ದೇಶ ವಿದೇಶಗಳಿಂದ ಈ ಚಿಕಿತ್ಸೆ ಪಡೆಯಲು ಕೇರಳಕ್ಕೆ ಜನರು ಬರುತ್ತಿದ್ದಾರೆ. ಈ ಕುರಿತು ಅನೇಕ ವೈಜ್ಞಾನಿಕ ದಾಖಲೆಗಳನ್ನು ಪ್ರಸ್ತುತ ಪಡಿಸಿದರು.

ಇದೇ ಸಂದರ್ಭದಲ್ಲಿ ತಂತ್ರಶಾಸ್ತç, ಆಗಮ ಶಾಸ್ತç, ವಾಸ್ತು ಮತ್ತು ಆಯುರ್ವೇದದ ಪ್ರಕಾರ ಚಿಕಿತ್ಸೆಗಾಗಿ “ವಿಶೇಷ ತ್ರಿಗರ್ಭಾ ಕುಟಿ” ನಿರ್ಮಾಣದ ಮಹತ್ವ ತಿಳಿಸಿದರು.

ಕಾರ್ಯಾಗಾರದಲ್ಲಿ ತಾರಾನಾಥ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಮಾಧವ ದಿಗ್ಗಾವಿ, ಬೆಂಗಳೂರು ಆಯುಷ್ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಡಾ.ಎನ್.ಎ.ಮೂರ್ತಿ, ವಿದ್ಯಾಲಯದ ನಿವೃತ್ತ ಪ್ರಾಚಾರ್ಯ ಡಾ.ಜಿ.ಆರ್.ವಸ್ತçದ, ಖ್ಯಾತ ರಸ ಚಿಕಿತ್ಸಕ ಡಾ.ಎಲ್.ನಾಗಿರೆಡ್ಡಿ, ಕಟ್ಟಡ ನಿರ್ಮಾಣ ಅಭಿಯಂತರ ಸಂಜೀವ ಪ್ರಸಾದ್ ಸೇರಿದಂತೆ ತಾರಾನಾಥ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಬೋಧಕ ಸಿಬ್ಬಂದಿ, ಸ್ನಾತಕೋತ್ತರ ಮತ್ತು ಪದವಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.


Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ