Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಆಸಕ್ತರು ಭಾಗವಹಿಸಿ


----

ಕೊಪ್ಪಳ ಆಗಸ್ಟ್ 3): 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ ಗ್ರಾಮದ ವಿಠ್ಠಲ ಮಂದಿರದ ಆವರಣದಲ್ಲಿ ಆಯೋಜಿಸಲಾಗಿದ್ದು, ಆಸಕ್ತಿಯುಳ್ಳ ಕುಸ್ತಿಪಟುಗಳು ಭಾಗವಹಿಸಬಹುದಾಗಿದೆ.

ಸೂಚನೆಗಳು: ಕುಸ್ತಿ ಸ್ಪರ್ಧೆಯಲ್ಲಿ ಭಾಗವಹಿಸುವ ಕುಸ್ತಿಪಟುಗಳ ದೇಹತೂಕವನ್ನು ಆಗಸ್ಟ್ 4ರ ಸೋಮವಾರ ಬೆಳಗ್ಗೆ 8 ಗಂಟೆಗೆ ಸರಿಯಾಗಿ ತೆಗೆದುಕೊಳ್ಳಲಾಗುವುದು. ಈ ಸ್ಪರ್ಧೆಯಲ್ಲಿ ಭಾಗವಹಿಸುವಂತಹ ಕುಸ್ತಿಪಟುಗಳಿಗೆ ದೇಹತೂಕದಲ್ಲಿ ಯಾವುದೇ ವಿನಾಯಿತಿ ಇರುವುದಿಲ್ಲ. ಎಲ್ಲಾ ಕುಸ್ತಿಪಟುಗಳು ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಜನ್ಮ ಪ್ರಮಾಣಪತ್ರ, ಆಧಾರಕಾರ್ಡ ಮತ್ತು ಡಬ್ಲ್ಯೂ.ಎಫ್.ಐ ಲೈಸೆನ್ಸ್ ಬುಕ್ ಅನ್ನು ಕಡ್ಡಾಯವಾಗಿ ತರಬೇಕು. ಸ್ಪರ್ಧೆಯಲ್ಲಿ 2002 ರಿಂದ 2007ರ ಒಳಗೆ ಜನಿಸಿರುವ ಕುಸ್ತಿಪಟುಗಳಿಗೆ ಮಾತ್ರ ಭಾಗವಹಿಸಲು ಅವಕಾಶ ಇರುತ್ತದೆ.

ಈ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಗಳಲ್ಲಿ ಪ್ರಥಮ ಸ್ಥಾನಗಳಿಸಿದಂತಹ ಕುಸ್ತಿಪಟುಗಳು ರಾಂಚಿಯಲ್ಲಿ ನಡೆಯುವಂತಹ 23 ವರ್ಷದೊಳಗಿನ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್‌ಗೆ ನೇರವಾಗಿ ಆಯ್ಕೆಯಾಗುತ್ತಾರೆ.

ಹೆಚ್ಚಿನ ಮಾಹಿತಿಗಾಗಿ, ಕರ್ನಾಟಕ ಕುಸ್ತಿ ಸಂಘ(ರಿ), ತಾಂತ್ರಿಕ ಸಮಿತಿಯ ಛೇರ್ಮನ್ ಡಾ.ಕೆ.ವಿನೋದ್ ಕುಮಾರ್ ಅವರ ಮೊ.ಸಂಖ್ಯೆ: 8971388143 ಅಥವಾ 9880087059 ಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ್ ಜಾಬಗೌಡರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ